ಭೋಪಾಲ್-ವಿದಿಶಾ ಹೆದ್ದಾರಿ ಭೀಕರ ಕುಸಿತ: 20 ಅಡಿ ಆಳದ ಕಂದಕ ಸೃಷ್ಠಿ; ವಿಡಿಯೋ ವೈರಲ್

Date:

ಭೋಪಾಲ್-ವಿದಿಶಾ ಹೆದ್ದಾರಿಯು (ರಾಜ್ಯ ಹೆದ್ದಾರಿ 18) ಭೀಕರವಾಗಿ ಕುಸಿದಿರುವ ಘಟನೆ ಮಧ್ಯಪ್ರದೇಶದ ಸುಖಿ ಸವಾನಿಯಾದಲ್ಲಿ ನಡೆದಿದೆ. ಹೆದ್ದಾರಿಯು ಭೋಪಾಲ್ ಪೂರ್ವ ಬೈಪಾಸ್‌ನ ಸುಮಾರು 50 ಮೀಟರ್ (164 ಅಡಿ) ಉದ್ದದ ರಸ್ತೆಯು ಇದ್ದಕ್ಕಿದ್ದಂತೆ ಕುಸಿದಿದೆ. ಕುಸಿತದಿಂದ 20 ಅಡಿ (6 ಮೀಟರ್) ಆಳದ ಗುಂಡಿ ನಿರ್ಮಾಣವಾಗಿದೆ. ರಸ್ತೆ ಕುಸಿತದಿಂದ ಚಾಲಕರು ರಸ್ತೆಯಲ್ಲಿ ಆತಂಕದಿಂದಲೇ ವಾಹನ ಚಲಾಯಿಸುವಂತಾಗಿದೆ.

ಅದೃಷ್ಟವಶಾತ್, ರಸ್ತೆ ಕುಸಿದು ಬಿದ್ದಾಗ, ಸ್ಥಳದಲ್ಲಿ ಯಾವುದೇ ವಾಹನಗಳು-ಜನರು ಇರಲಿಲ್ಲ. ಹೀಗಾಗಿ, ಯಾವುದೇ ಸಾವು-ನೋವು, ಹಾನಿ ಸಂಭವಿಸಿಲ್ಲ. ಒಂದು ವೇಳೆ, ಸಂಚಾರ ದಟ್ಟಣೆ ಇದ್ದಿದ್ದರೆ ಭೀಕರ ಅವಘಡ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಕಳವಳ ವ್ಯಕ್ತಪಡಿಸಿದ್ದಾರೆ.

ಘಟನೆ ನಡೆದು ಗಂಟೆಗಳೇ ಕಳೆದರೂ, ಆಡಳಿತಾತ್ಮಕ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ಇಷ್ಟು ದೊಡ್ಡ ಅಪಘಾತದ ಹೊರತಾಗಿಯೂ, ಗಂಟೆಗಳ ಕಾಲ ಸ್ಥಳಕ್ಕೆ ಯಾವುದೇ ಅಧಿಕಾರಿಯಾಗಲೀ ಬಂದಿರಲಿಲ್ಲ, ಸುರಕ್ಷತಾ ವ್ಯವಸ್ಥೆಗಳನ್ನಾಗಲೀ ಮಾಡಿರಲಿಲ್ಲ. ಬ್ಯಾರಿಕೇಡ್‌ಗಳನ್ನೂ ಹಾಕಿರಲಿಲ್ಲ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚು ವಾಹನ ದಟ್ಟಣೆ ಇರುವ ಈ ರಸ್ತೆಯಲ್ಲಿ ಪರಿಸ್ಥಿತಿ ನಿರ್ವಹಣೆಗೆ ಒಬ್ಬರೇ ಒಬ್ಬ ಪೊಲೀಸ್‌ ಮಾತ್ರವೇ ಇದ್ದರು. ಗಂಟೆಗಳ ಬಳಿಕ, ಮಧ್ಯಪ್ರದೇಶ ರಸ್ತೆ ಅಭಿವೃದ್ಧಿ ನಿಗಮ ಮತ್ತು ಸ್ಥಳೀಯ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಬಂದರು. ಬಳಿಕ, ಬ್ಯಾರಿಕೇಡ್‌ಗಳನ್ನು ಅಳವಡಿಸಿದರು ಎಂದು ವರದಿಯಾಗಿದೆ.

ಪದೇ ಪದೇ ಎಚ್ಚರಿಕೆ ನೀಡಿದ್ದರೂ, ಸಂಬಂಧಿತ ಇಲಾಖೆಗಳು ರಸ್ತೆ ದುರಸ್ತಿ ಮಾಡಲು ಮತ್ತು ಪರಿಶೀಲಿಸಲು ನಿರ್ಲಕ್ಷಿಸಿದ್ದರಿಂದ ಪದೇ-ಪದೇ ಅಪಘಾತಗಳು ಸಂಭವಿಸುತ್ತಿವೆ. ರಸ್ತೆಯನ್ನು ಮರುನಿರ್ಮಾಣ ಮಾಡಬೇಕು. ರಸ್ತೆ ಕುಸಿತಕ್ಕೆ ಕಾರಣವಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

2013ರಲ್ಲಿ ‘ಮೆಸರ್ಸ್ ಟ್ರಾನ್ಸ್‌ಟ್ರಾಯ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಯು ಬಿಒಟಿ ಮಾದರಿಯಲ್ಲಿ ರಸ್ತೆಯನ್ನು ನಿರ್ಮಾಣ ಮಾಡಿತ್ತು. ಒಪ್ಪಂದದ ನಿಯಮಗಳನ್ನು ಪಾಲಿಸದ ಕಾರಣ ಕಂಪನಿಯ ಒಪ್ಪಂದವನ್ನು 2020ರಲ್ಲಿ ರದ್ದುಗೊಳಿಸಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸಲು ಸರ್ಕಾರವು ಎಂಪಿಆರ್‌ಡಿಸಿ ಮುಖ್ಯ ಎಂಜಿನಿಯರ್ ಬಿಎಸ್ ಮೀನಾ, ಜಿಎಂ ಮನೋಜ್ ಗುಪ್ತಾ ಮತ್ತು ಜಿಎಂ ಆರ್‌ಎಸ್ ಚಾಂಡೆಲ್ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದೆ. ವರದಿಯ ಆಧಾರದ ಮೇಲೆ, ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತದೆ ಎಂದು ಮಧ್ಯಪ್ರದೇಶ ರಸ್ತೆ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...