ಕರ್ನಾಟಕದಲ್ಲಿ ಭಾರಿ ಮತ ಕಳವು: ರಾಹುಲ್‌ ಗಾಂಧಿ ಆರೋಪ

Date:

ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದಲ್ಲಿ ಗಂಭೀರ ಚುನಾವಣಾ ಅಕ್ರಮ ನಡೆದಿದೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ಈ ‘ಮತ ಕಳ್ಳತನ’ದ ಕಾರ್ಯವಿಧಾನವನ್ನು ಶೀಘ್ರದಲ್ಲೇ ಚುನಾವಣಾ ಆಯೋಗ ಮತ್ತು ಜನರ ಮುಂದೆ ಯಥಾವತ್ತಾಗಿ ಬಹಿರಂಗಪಡಿಸುವುದಾಗಿ ಅವರು ಹೇಳಿದ್ದಾರೆ.

ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಕುರಿತು ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್‌ ಗಾಂಧಿ, ಕರ್ನಾಟಕದ ಒಂದು ಲೋಕಸಭಾ ಕ್ಷೇತ್ರದ ಮತದಾರರ ಪಟ್ಟಿಯನ್ನು ಆಯ್ದುಕೊಂಡು ಆಳವಾದ ಅಧ್ಯಯನ ನಡೆಸಿದ್ದೇವೆ. ನಮಗೆ ಕಾಗದದ ಮೇಲಿನ ಪಟ್ಟಿಯನ್ನು ನೀಡಲಾಗಿತ್ತು. ಆದರೆ ಕಾಗದದ ಪಟ್ಟಿಯೊಂದಿಗೆ ವಿಶ್ಲೇಷಣೆ ಸಾಧ್ಯವಿಲ್ಲ. ಆದ್ದರಿಂದ, ಅದನ್ನು ಡಿಜಿಟಲ್‌ ರೂಪಕ್ಕೆ ಪರಿವರ್ತಿಸಿ, ಆರು ತಿಂಗಳ ಕಾಲ ವಿಶ್ಲೇಷಣೆ ನಡೆಸಿದೆವು,” ಎಂದು ಅವರು ವಿವರಿಸಿದರು.

ಈ ವಿಶ್ಲೇಷಣೆಯಿಂದ ಮತದಾರರ ಪಟ್ಟಿಯಲ್ಲಿ ಅಕ್ರಮಗಳು, ಹೊಸ ಮತದಾರರ ಸೇರ್ಪಡೆ, ಮತ್ತು ಅವರನ್ನು ಎಲ್ಲಿಂದ ಕರೆತರಲಾಗುತ್ತದೆ ಎಂಬ ಸಂಪೂರ್ಣ ಕಾರ್ಯವಿಧಾನವನ್ನು ಕಂಡುಹಿಡಿದಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ. ಈ ಕುರಿತು ಅವರು ತಮ್ಮ ‘ಎಕ್ಸ್‌’ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಆದರೆ, ಯಾವ ಲೋಕಸಭಾ ಕ್ಷೇತ್ರದಲ್ಲಿ ಈ ಅಧ್ಯಯನ ನಡೆಸಲಾಗಿದೆ ಎಂಬುದನ್ನು ಬಹಿರಂಗಪಡಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಹುಲ್‌ ಗಾಂಧಿ ಅವರು, “ಕಾಂಗ್ರೆಸ್‌ ಪಕ್ಷವು ಈ ‘ಅಕ್ರಮದ ಆಟ’ವನ್ನು ತಿಳಿದುಕೊಂಡಿದೆ. ಇದು ಚುನಾವಣಾ ಆಯೋಗಕ್ಕೂ ಗೊತ್ತಾಗಿದೆ. ಆದ್ದರಿಂದಲೇ ಬಿಹಾರದಲ್ಲಿ ಎಸ್‌ಐಆರ್‌ ಮೂಲಕ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಭಾರತದಲ್ಲಿ ಇಡೀ ಚುನಾವಣೆಯನ್ನೇ ಕದಿಯಲಾಗುತ್ತಿದೆ. ಇದು ಭಾರತದ ವಾಸ್ತವ,” ಎಂದು ಆರೋಪಿಸಿದರು. ಎಸ್‌ಐಆರ್‌ ವಿರುದ್ಧ ಸಂಸತ್ತಿನ ಒಳಗೆ ಮತ್ತು ಹೊರಗೆ ಹೋರಾಟ ನಡೆಸುವುದಾಗಿಯೂ ಅವರು ತಿಳಿಸಿದರು.

ಚುನಾವಣಾ ಆಯೋಗದಿಂದ ಉತ್ತರವಿಲ್ಲ

ಮಹಾರಾಷ್ಟ್ರ ಚುನಾವಣೆಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಮತ್ತು ಮತದಾನದ ದಿನದ ವಿಡಿಯೊ ಚಿತ್ರೀಕರಣದ ದಾಖಲೆಗಳನ್ನು ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿತ್ತು. ಆದರೆ, ಆಯೋಗವು ಈ ಮನವಿಗೆ ಸ್ಪಂದಿಸದೆ, ಮಾಹಿತಿ ನೀಡಲು ನಿರಾಕರಿಸಿತು ಮತ್ತು ಸಂಬಂಧಿತ ನಿಯಮಗಳನ್ನೇ ಬದಲಾಯಿಸಿತು ಎಂದು ರಾಹುಲ್‌ ಗಾಂಧಿ ದೂರಿದರು.

ಮಹಾರಾಷ್ಟ್ರದಲ್ಲಿ ಸುಮಾರು ಒಂದು ಕೋಟಿ ಹೊಸ ಮತದಾರರು ಪಟ್ಟಿಗೆ ಸೇರ್ಪಡೆಯಾಗಿದ್ದಾರೆ. ಬಿಹಾರದಲ್ಲಿ ಮನೆ ಭೇಟಿಯ ಸಂದರ್ಭದಲ್ಲಿ 52 ಲಕ್ಷ ಮತದಾರರು ವಿಳಾಸದಲ್ಲಿ ಲಭ್ಯವಿಲ್ಲದಿರುವುದು ಮತ್ತು 18 ಲಕ್ಷ ಮತದಾರರು ಮೃತಪಟ್ಟಿರುವುದು ಪರಿಷ್ಕರಣೆ ವೇಳೆ ಗೊತ್ತಾಗಿದೆ. “ಈ ಸಮಸ್ಯೆ ಬಿಹಾರಕ್ಕೆ ಮಾತ್ರ ಸೀಮಿತವಲ್ಲ. ಮಹಾರಾಷ್ಟ್ರದಲ್ಲೂ ಇದೇ ರೀತಿಯ ಅಕ್ರಮಗಳು ನಡೆದಿವೆ. ಇದು ದೇಶದಲ್ಲಿ ‘ಮತ ಕಳ್ಳತನ’ ಹೇಗೆ ನಡೆಯುತ್ತಿದೆ ಎಂಬುದನ್ನು ತೋರಿಸುತ್ತದೆ,” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...