BREAKING NEWS | 24 ವರ್ಷ ಹಳೆಯ ಮಾನನಷ್ಟ ಪ್ರಕರಣ: ಹೋರಾಟಗಾರ್ತಿ ಮೇಧಾ ಪಾಟ್ಕರ್‌ ಬಂಧನ

Date:

ಸುಮಾರು 24 ವರ್ಷ ಹಳೆಯ ಮಾನನಷ್ಟ ಪ್ರಕರಣದಲ್ಲಿ ಹೋರಾಟಗಾರ್ತಿ, ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ ಅವರನ್ನು ಬಂಧಿಸಲಾಗಿದೆ. ದೆಹಲಿಯ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ದಾಖಲಿಸಿರುವ ಮಾನನಷ್ಟ ಮೊಕದ್ದಮೆ ಪ್ರಕರಣ ಇದಾಗಿದೆ.

2010ರಲ್ಲಿ ದಾಖಲಾದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇಧಾ ಪಾಟ್ಕರ್ ವಿರುದ್ಧ ಬುಧವಾರ ದೆಹಲಿ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಅನ್ನು ಹೊರಡಿಸಿದೆ. ಶುಕ್ರವಾರ ದೆಹಲಿ ಪೊಲೀಸರು ಬಂಧಿಸಿದ್ದು, ಬಳಿಕ ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? 24 ವರ್ಷ ಹಳೆಯ ಮಾನನಷ್ಟ ಪ್ರಕರಣ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ದೋಷಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪ್ರಕರಣದಲ್ಲಿ ಮೇಧಾ ಅವರನ್ನು ದೋಷಿ ಎಂದು ದೆಹಲಿ ನ್ಯಾಯಾಲಯ ಕಳೆದ ವರ್ಷ ಮೇ ತಿಂಗಳಲ್ಲಿ ಹೇಳಿದೆ. ಅದಾದ ಬಳಿಕ ಶಿಕ್ಷೆ ಘೋಷಿಸಿದ ನ್ಯಾಯಾಲಯ, 5 ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಿದೆ ಹಾಗೂ 10 ಲಕ್ಷ ರೂ ಮೊತ್ತವನ್ನು ಪಾವತಿಸುವಂತೆ ತಿಳಿಸಿದೆ.

ಬಳಿಕ ಮೇಧಾ ಅವರಿಗೆ ವಿಧಿಸಿದ್ದ ಶಿಕ್ಷೆ ಮಾರ್ಪಾಡುಗೊಳಿಸಿದ್ದು ಜೈಲು ಶಿಕ್ಷೆಯನ್ನು ತೆರವುಗೊಳಿಸಲಾಗಿದೆ. ಹಾಗೆಯೇ ದಂಡದ ಮೊತ್ತವನ್ನೂ ಕಡಿಮೆಗೊಳಿಸಲಾಗಿದೆ. ಈ ಆದೇಶವನ್ನು ಏಪ್ರಿಲ್ 8ರಂದು ನ್ಯಾಯಾಲಯ ಹೊರಡಿಸಿದೆ.

ಇದನ್ನು ಓದಿದ್ದೀರಾ? ಮಾನನಷ್ಟ ಮೊಕದ್ದಮೆ | ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್‌ಗೆ 5 ತಿಂಗಳ ಜೈಲು ಶಿಕ್ಷೆ

ಆದರೆ ದಂಡದ ಮೊತ್ತವನ್ನು ಪಾವತಿಸದೆ ಮೇಧಾ ಅವರು ಆದೇಶವನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸುತ್ತಿದ್ದಾರೆ ಎಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ವಿಶಾಲ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದರು. ಮೇಧಾ ಪಾಟ್ಕರ್ ಮಾರ್ಪಾಡುಗೊಂಡ ತೀರ್ಪು ಪ್ರಕಾರ ಒಂದು ಲಕ್ಷ ರೂಪಾಯಿಯನ್ನು ದಂಡವಾಗಿ ಪಾವತಿಸಬೇಕಾಗುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...