ಪ್ರಜಾಪ್ರಭುತ್ವ, ಸತ್ಯ ಉಳಿಸುವಲ್ಲಿ ಮಾಧ್ಯಮ ವಿಫಲವಾದ್ರೆ ಮುಂದೇನು?

Date:

ದೇಶದಲ್ಲಿ ನ್ಯಾಯಾಂಗ, ಕಾರ್ಯಾಂಗ ಮತ್ತು ಶಾಸಕಾಂಗಗಳಂತೆ, ಪ್ರಜಾಪ್ರಭುತ್ವದ ಒಂದು ಪ್ರಮುಖ ಅಂಗವಾಗಿ ಮಾಧ್ಯಮವನ್ನು ಪರಿಗಣಿಸಲಾಗುತ್ತದೆ. ಆದರೆ, ನಾವು ಕಳೆದ ಒಂದು ದಶಕದ ವಿದ್ಯಮಾನವನ್ನು ಗಮನಿಸಿದಾಗ ಮಾಧ್ಯಮಗಳು ತಮ್ಮ ಕರ್ತವ್ಯವನ್ನು ಮರೆಯುತ್ತಿರುವುದು ಸ್ಪಷ್ಟವಾಗುತ್ತದೆ.

ಇತ್ತೀಚಿನ ದಿನಗಳಲ್ಲಿ, ಮಾಧ್ಯಮಗಳು ಯಾವುದೋ ಒಂದು ಪಕ್ಷದ ದಾಳವಾಗಿಯೇ ಕಾರ್ಯನಿರ್ವಹಿಸುತ್ತಿವೆ. ಮಾಧ್ಯಮದ ವೈಫಲ್ಯವನ್ನು ಇತ್ತೀಚೆಗೆ ಸಿಜೆಎಆರ್‌ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಕುರಿಯನ್ ಜೋಸೆಫ್ ಒತ್ತಿ ಹೇಳಿದ್ದಾರೆ. ಮಾಧ್ಯಮವೇ ವಿಫಲವಾಗಿರುವಾಗ ನಮ್ಮ ಮುಂದಿನ ಸ್ಥಿತಿಯೇನು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮಾಧ್ಯಮ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಸತ್ಯವನ್ನು ರಕ್ಷಿಸುವಲ್ಲಿ ಮಾಧ್ಯಮ ವಿಫಲವಾಗಿದೆ. ನಾಲ್ಕನೇ ಸ್ತಂಭವಾದ ಮಾಧ್ಯಮ ದೇಶವನ್ನು ವಿಫಲಗೊಳಿಸಿರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವಕ್ಕೆ ದೊಡ್ಡ ಹೊಡೆತ ತಂದಿದೆ” ಎಂದು ಅವರು ಹೇಳಿದರು.

“ನಾವು ಈ ಸಮಾವೇಶ ಆರಂಭ ಮಾಡುವುದಕ್ಕೂ ಮುನ್ನ ಕೆಲವು ಗಂಭೀರ ವಿಷಯಗಳ ಬಗ್ಗೆ ಚರ್ಚೆ ನಡೆಸಿದ್ದೆವು. ಆದರೆ, ಈ ವಿಚಾರಗಳು ನಮ್ಮ ಇಂದಿನ ಮಾಧ್ಯಮದಲ್ಲಿ ಬರುತ್ತಾ? ಒಂದೆರಡು ಖಾಸಗಿ ಚಾನೆಲ್‌ಗಳನ್ನು ಬಿಟ್ಟು ಯಾವುದೇ ಮಾಧ್ಯಮಗಳು ಇಂದಿನ ನೈಜ ವಿಚಾರಗಳನ್ನು ಸುದ್ದಿ ಮಾಡದೆ ಇರುವುದು ಶೋಚನೀಯ ಸ್ಥಿತಿ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ಮಾಧ್ಯಮಗಳು ಯಾವುದೇ ಸತ್ಯ ವಿಷಯವನ್ನು ಭಯವಿಲ್ಲದೆ, ಹೇಗಿದೆಯೋ ಹಾಗೆಯೇ ಪ್ರಸಾರ ಮಾಡುವುದನ್ನು ನಾವೀಗ ನೋಡೋದು ಸಾಧ್ಯವಿಲ್ಲ. ನಾಲ್ಕನೇ ಸ್ತಂಭವೆಂದು ನಾವು ಯಾವುದನ್ನು ಕರೆಯುತ್ತೇವೆಯೋ ಅದು ನಮ್ಮ ಪ್ರಜಾಪ್ರಭುತ್ವಕ್ಕೆ ದೊಡ್ಡ ಏಟು ನೀಡಿದೆ, ದೇಶವನ್ನು ವಿಫಲಗೊಳಿಸಿದೆ” ಎಂದು ನಿವೃತ್ತ ನ್ಯಾಯಮೂರ್ತಿ ಹೇಳಿದರು.

“ಮೊದಲ ಮೂರು ಸ್ತಂಭಗಳನ್ನು ಬಿಡಿ. ನಾಲ್ಕನೇ ಸ್ತಂಭವಾದ ಮಾಧ್ಯಮವೇ ಪ್ರಜಾಪ್ರಭುತ್ವ ರಕ್ಷಿಸುವ ವಿಚಾರದಲ್ಲಿ ವಿಫಲವಾಗಿದೆ, ಸಂವಿಧಾನ ರಕ್ಷಿಸುವುದರಲ್ಲಿ ವಿಫಲವಾಗಿದೆ, ಸತ್ಯವನ್ನು ಸಮರ್ಥನೆ ಮಾಡುವುದರಲ್ಲಿ ಮಾಧ್ಯಮ ಮಿತ್ರರು ವಿಫಲವಾಗಿದ್ದಾರೆ” ಎಂದು ನ್ಯಾಯಮೂರ್ತಿ ಜೋಸೆಫ್ ಅಸಮಾಧಾನ ವ್ಯಕ್ತಪಡಿಸಿದರು.

“whistle-blowers ಎಂದು ಕರೆಯಲಾಗುವ ದೇಶದ ಸಾಮಾಜಿಕ ಕಾರ್ಯಕರ್ತರನ್ನು ಜೋಸೆಫ್ ಸಂವಿಧಾನದ ಐದನೇ ಅಂಗ ಎಂದು ಕರೆದ ನಿವೃತ್ತ ನ್ಯಾಯಾಧೀಶರು ಪ್ರಸ್ತುತ ನಮಗೆ ಇರುವ ಒಂದೇ ಒಂದು ಭರವಸೆ ಈ ಸಾಮಾಜಿಕ ಕಾರ್ಯಕರ್ತರು ಎಂದರು. ಆದರೆ ಏನು ಮಾಡುವುದು ದೇಶದ ಸಮಸ್ಯೆಯನ್ನು ಎತ್ತಿ ಸಿಳ್ಳೆ ಹೊಡೆದು ಹೇಳುವ ಈ ಸಾಮಾಜಿಕ ಕಾರ್ಯಕರ್ತರಿಗೆ ಈಗ ಕೋವಿಡ್‌ನಿಂದ ಶ್ವಾಸಕೋಶದ ತೊಂದರೆ ಆಗಿರುವ ಹಾಗಿದೆ. ಅವರು ಮಾತನಾಡದಂತೆ ಮಾಡಿರುವುದು ಈ ದೇಶಕ್ಕೆ ದೊಡ್ಡ ಅಪಾಯ ತಂದಿದೆ” ಎಂದು ಹೇಳಿದರು.

“ಹಾಗಿರುವಾಗ ನಾವು ಅಳಿದುಳಿರುವ ಈ ಸಾಮಾಜಿಕ ಕಾರ್ಯಕರ್ತರ ಪರವಾಗಿ ನಿಲ್ಲಬೇಕು, ಅವರಿಗೆ ಸಹಾಯ ಮಾಡಬೇಕು. ನಾವು ಎಚ್ಚರಿಕೆಯಿಂದ ಇರಬೇಕು. ಯಾಕಂದ್ರೆ ಈಗ ನಮ್ಮ ದೇಶಕ್ಕೆ ಅವರು ಮಾತ್ರ ಏಕೈಕ ಭರವಸೆ ಆಗಿರುವುದು” ಎಂದು ನ್ಯಾಯಾಧೀಶ ಕುರಿಯನ್ ಜೋಸೆಫ್ ಅಭಿಪ್ರಾಯಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...