ಹೈದರಾಬಾದ್‌ | ನವಜಾತ ಶಿಶುಗಳ ಬೃಹತ್ ಮಾರಾಟ ಜಾಲವನ್ನು ಭೇದಿಸಿದ ಪೊಲೀಸರು: 11 ಮಕ್ಕಳ ರಕ್ಷಣೆ

Date:

ಮಹತ್ವದ ಬೆಳವಣಿಗೆಯೊಂದರಲ್ಲಿ ಹೈದರಾಬಾದ್ ಪೊಲೀಸರು ನವಜಾತ ಶಿಶುಗಳ ಬೃಹತ್ ಕಳ್ಳಸಾಗಣೆ ಹಾಗೂ ಮಾರಾಟ ಜಾಲವನ್ನು ಭೇದಿಸಿದ್ದು, ಸುಮಾರು 11 ಮಕ್ಕಳನ್ನು ರಕ್ಷಣೆ ಮಾಡಿದ್ದು, ಹಲವರನ್ನು ಬಂಧಿಸಿದ್ದಾರೆ.

ತೆಲಂಗಾಣದ ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಮೆಡಿಪಲ್ಲಿ ಪೊಲೀಸರು ದೆಹಲಿ ಮತ್ತು ಪುಣೆಯಿಂದ ಮೂವರು ಆರೋಪಿಗಳಿಂದ ಮಕ್ಕಳನ್ನು ಖರೀದಿಸಿದ ಎಂಟು ಮಹಿಳೆಯರು ಸೇರಿದಂತೆ ಒಟ್ಟು 11 ಜನರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಾಲವನ್ನು ಭೇದಿಸಿದ ಬಳಿಕ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಚಕೊಂಡ ಪೊಲೀಸ್ ಆಯುಕ್ತ ತರುಣ್ ಜೋಶಿ, “ಪ್ರಕರಣದ ಪ್ರಮುಖ ಮೂವರು ಆರೋಪಿಗಳು ಮಕ್ಕಳನ್ನು ಹಣಕಾಸಿನ ಸಮಸ್ಯೆಯಿಲ್ಲದ ದಂಪತಿಗಳಿಗೆ ಮಾರಾಟ ಮಾಡುತ್ತಿದ್ದರು. ಈವರೆಗೆ ಒಟ್ಟು 11 ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯೊಂದಿಗೆ ಪೊಲೀಸ್ ಇಲಾಖೆ ರಕ್ಷಿಸಿದೆ. ರಕ್ಷಿಸಲ್ಪಟ್ಟ ಮಕ್ಕಳ ಪೈಕಿ ಒಂದು ತಿಂಗಳಿಂದ ಎರಡೂವರೆ ತಿಂಗಳ ವಯಸ್ಸಿನ ಮಕ್ಕಳಿದ್ದು, ಒಂಬತ್ತು ಹೆಣ್ಣು ಮಕ್ಕಳು, ಉಳಿದ ಇಬ್ಬರು ಗಂಡು ಮಕ್ಕಳು” ಎಂದು ತಿಳಿಸಿದ್ದಾರೆ.

“ಬಂಧಿಸಲ್ಪಟ್ಟಿರುವ ಆರೋಪಿಗಳು ದೆಹಲಿಯ ಕಿರಣ್ ಮತ್ತು ಪ್ರೀತಿ ಮತ್ತು ಪುಣೆಯ ಕನ್ನಯ್ಯ ಅವರಿಂದ ಮಕ್ಕಳನ್ನು ಪಡೆಯುತ್ತಿದ್ದರು. ಮೂವರು ಬಂಧಿತರಿಗೆ ಸುಮಾರು 50 ಶಿಶುಗಳನ್ನು ಪೂರೈಸಿರುವುದಾಗಿ ತಿಳಿದುಬಂದಿದೆ. ಆರೋಪಿಗಳ ಏಜೆಂಟರು ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಶಿಶುಗಳ ಅಗತ್ಯವಿರುವ ವ್ಯಕ್ತಿಗಳಿಗೆ ಮಧ್ಯವರ್ತಿಗಳ ಸಹಾಯದಿಂದ ಪ್ರತಿ ಮಗುವಿಗೆ 1.80 ಲಕ್ಷದಿಂದ 5.50 ಲಕ್ಷದವರೆಗೆ ಮಾರಾಟ ಮಾಡುತ್ತಿದ್ದರು” ಎಂದು ಪೊಲೀಸ್ ಕಮಿಷನರ್ ತಿಳಿಸಿದ್ದಾರೆ.

“ಮೇ 22 ರಂದು ನಾಲ್ಕೂವರೆ ಲಕ್ಷ ರೂಪಾಯಿಗೆ ಮಗುವನ್ನು ಮಾರಾಟ ಮಾಡಿದ್ದಕ್ಕಾಗಿ ನೋಂದಾಯಿತ ವೈದ್ಯಕೀಯ ಅಧಿಕಾರಿ (ಆರ್‌ಎಂಪಿ) ಶೋಭಾ ರಾಣಿ ಅವರನ್ನು ಬಂಧಿಸಿದ ನಂತರ ಪೊಲೀಸರು ತನಿಖೆ ಚುರುಕುಗೊಳಿಸಿದಾಗ, ಈ ಬೃಹತ್ ದಂಧೆ ಬೆಳಕಿಗೆ ಬಂದಿದೆ. ಶೋಭಾ ರಾಣಿಗೆ ಸಹಾಯ ಮಾಡುತ್ತಿದ್ದ ಸ್ವಪ್ನಾ ಮತ್ತು ಶೇಕ್ ಸಲೀಂ ಅವರನ್ನು ಸಹ ಬಂಧಿಸಲಾಗಿದ್ದು, ಅವರಿಂದ ಎರಡು ಶಿಶುಗಳನ್ನು ರಕ್ಷಿಸಲಾಗಿದೆ” ಎಂದು ಪೊಲೀಸ್ ಆಯುಕ್ತ ತರುಣ್ ಜೋಶಿ ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸೆಕ್ಷನ್ 370, 372,373 r/w 34 ಮತ್ತು ಸೆಕ್ಷನ್ 81,87 ಮತ್ತು 88 ಬಾಲಾಪರಾಧ ನ್ಯಾಯ ಕಾಯಿದೆ 2015 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆಯಲ್ಲಿ ಶೋಭಾ ರಾಣಿ ಅವರು ಹರಿಹರ ಚೇತನ್ ಎಂಬವರೊಂದಿಗೆ ಕೂಡಿ ಈ ಕೆಲಸ ಮಾಡುತ್ತಿದ್ದರು ಎಂದು ಬಹಿರಂಗಪಡಿಸಿದ್ದಾರೆ.

ಆರೋಪಿಗಳ ತಪ್ಪೊಪ್ಪಿಗೆ ಆಧಾರದ ಮೇಲೆ ಪೊಲೀಸರು ಬಂಡಾರಿ ಹರಿಹರ ಚೇತನ್, ಬಂಡಾರಿ ಪದ್ಮಾ, ಬಲಗಂ ಸರೋಜಾ, ಮುದವತ್ ಶಾರದ, ಮುದವತ್ ರಾಜು, ಪಠಾಣ್ ಮುಮ್ತಾಜ್ ಅಲಿಯಾಸ್ ಹಸೀನಾ, ಜಗನಾದಂ ಅನುರಾಧ ಮತ್ತು ಯಾತ ಮಮತಾ ಎಂಬುವರನ್ನು ಬಂಧಿಸಿದ್ದಾರೆ.

ಬಂಧಿತರೆಲ್ಲರೂ ತೆಲಂಗಾಣ ಮತ್ತು ನೆರೆಯ ಆಂಧ್ರಪ್ರದೇಶದ ನಿವಾಸಿಗಳು. ಅವರ ವಿಚಾರಣೆ ವೇಳೆ ದೆಹಲಿ ಮತ್ತು ಪುಣೆಯ ಮೂವರು ವ್ಯಕ್ತಿಗಳು ತಲಾ 50,000 ರೂ.ಗೆ ಶಿಶುಗಳನ್ನು ಅವರಿಗೆ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಕಿರಣ್, ಪ್ರೀತಿ, ಕನ್ನಯ್ಯ ಮತ್ತು ಇತರ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ರಕ್ಷಿಸಲ್ಪಟ್ಟ ಶಿಶುಗಳನ್ನು ಮಕ್ಕಳ ಕಲ್ಯಾಣ ಅಧಿಕಾರಿಗಳ ಕಣ್ಗಾವಲಿನಲ್ಲಿ ವೈದ್ಯಕೀಯ ಆರೈಕೆ ಮತ್ತು ಸುರಕ್ಷಿತ ಆಶ್ರಯ ನೀಡಲಾಗುತ್ತಿದೆ. ಮೂಲ ಪೋಷಕರಿಗಾಗಿ ನಿರಂತರ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಗು ನಮಗೇ ನೀಡಿ: ಮಕ್ಕಳು ಪಡೆದಿದ್ದ ಪೋಷಕರ ಆಕ್ರಂದನ

ಈ ನಡುವೆ ಪೊಲೀಸ್ ಕಮಿಷನರೇಟ್ ಕಚೇರಿಯ ಪ್ರದೇಶದಲ್ಲಿ ಸೇರಿದ್ದ ದಂಧೆಕೋರರಿಂದ ಮಕ್ಕಳನ್ನು ಖರೀದಿಸಿದ್ದ ಪೋಷಕರು, ಮಗು ನಮಗೇ ನೀಡುವಂತೆ ಕಣ್ಣೀರಿಟ್ಟ ಬೆಳವಣಿಗೆ ಕೂಡ ನಡೆದಿದೆ.

6363

 

“ನಾವು ಮದುವೆಯಾಗಿ 10 ವರ್ಷ ಹತ್ತಿರವಾಗಿದೆ. ಜೀವನದಲ್ಲಿ ಎಲ್ಲವನ್ನೂ ಹೊಂದಿದ್ದೇವೆ, ಆದರೆ ಮಗು ಅಲ್ಲ. ನಮ್ಮ ಭವಿಷ್ಯದ ಭರವಸೆಯಾಗಿ ಈ ಹುಡುಗಿ ನಮ್ಮ ಜೀವನದಲ್ಲಿ ಬಂದಳು. ಈಗ ಎಲ್ಲವೂ ಮಾಯವಾಗಿದೆ. ಮಾನವೀಯ ನೆಲೆಯಲ್ಲಿ ನಮಗೇ ಮಗುವನ್ನು ನೀಡಿ” ಎಂದು ಎರಡೂವರೆ ವರ್ಷದ ಮಗುವನ್ನು ದಂಧೆಕೋರರಿಂದ ಖರೀದಿಸಿದ್ದ ಮಹಿಳೆಯೊಬ್ಬರು ಕಣ್ಣೀರಿಡುತ್ತಾ ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸೂರ್ಯಪೇಟೆಯ ಮಹಿಳೆಯೊಬ್ಬರು ಒಂದೂವರೆ ವರ್ಷದ ಬಾಲಕನನ್ನು ಉಳಿಸಿಕೊಳ್ಳಲು ಅವಕಾಶ ನೀಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡುತ್ತಿರುವ ದೃಶ್ಯ ಕೂಡ ಕಂಡುಬಂತು.

“ತಾನು ಈಗಾಗಲೇ ತನ್ನ ಪತಿಯನ್ನು ಕಳೆದುಕೊಂಡಿದ್ದೇನೆ. ನನಗೆ ಮಗು ಇರಲಿಲ್ಲ. ನಾನು ತುಂಬಾ ಕಷ್ಟಪಟ್ಟು ಒಂದನ್ನು ಪಡೆದುಕೊಂಡೆ. ಈಗ ನನ್ನ ಮಗುವನ್ನೂ ಕಳೆದುಕೊಳ್ಳುತ್ತಿದ್ದೇನೆ. ನನಗೆ ಜೀವನದಲ್ಲಿ ಬೇರೆ ಯಾವುದೇ ಉದ್ದೇಶವಿಲ್ಲ. ದಯವಿಟ್ಟು ನನ್ನ ಬಾಲಕನನ್ನು ನನಗೇ ಹಿಂದಿರುಗಿಸಿ” ಎಂದು ಮಹಿಳೆಯೋರ್ವರು ಕಣ್ಣೀರಿಡುತ್ತಾ ತನ್ನಿಂದ ಮಗುವನ್ನು ಬೇರ್ಪಡಿಸಬೇಡಿ ಎಂದು ಕೇಳಿಕೊಂಡ ದೃಶ್ಯವು ಎಂಥವರ ಕಲ್ಲು ಹೃದಯವನ್ನೂ ಕರಗಿಸುವಂತಿತ್ತು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...