ಕುಸ್ತಿಪಟುಗಳ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ಎದ್ದುಬಿದ್ದು ಓಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

Date:

ಪ್ರತಿಭಟನಾನಿರತ ಕುಸ್ತಿಪಟುಗಳ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೇಳಿದಾಗ ಕೇಂದ್ರ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಎದ್ದುಬಿದ್ದು ಓಡಿ ಹೋಗುತ್ತಿರುವ ವಿಡಿಯೋ ವೈರಲ್ ಆಗಿದೆ.

ಹರಿದ್ವಾರದ ಗಂಗಾ ನದಿಯಲ್ಲಿ ಮಂಗಳವಾರ (ಮೇ 30) ತಮ್ಮ ಪದಕಗಳನ್ನು ಎಸೆಯಲು ಹೋದ ಪ್ರತಿಭಟನಾನಿರತ ಕುಸ್ತಿಪಟುಗಳ ವಿಷಯದ ಬಗ್ಗೆ ಪತ್ರಕರ್ತರು ಪ್ರಶ್ನೆ ಕೇಳಿದಾಗ ಕೇಳಿದಾಗ ಕೇಂದ್ರ ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಎದ್ದುಬಿದ್ದು ಓಡಿ ಹೋದ ಪ್ರಸಂಗ ನಡೆಯಿತು. ಘಟನೆಯ ವಿಡಿಯೋ ವೈರಲ್‌ ಆಗಿದ್ದು, ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸಚಿವರ ಕ್ರಮವನ್ನು ಟೀಕಿಸಿವೆ.

“ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಬಗ್ಗೆ ನೀವು ಏನು ಹೇಳುತ್ತೀರಿ?” ಎಂದು ಪತ್ರಕರ್ತರು ಪ್ರಶ್ನೆ ಕೇಳಿದಾಗ ತನ್ನ ಸಹಾಯಕರೊಂದಿಗೆ, “ಹೊರಡಿ, ಹೊರಡಿ” ಎಂದು ಹಿಂದಿಯಲ್ಲಿ ಹೇಳುತ್ತಾ ಸಚಿವೆ ತನ್ನ ಕಾರಿನತ್ತ ಧಾವಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೊದಲು “ಪ್ರತಿಭಟಿಸುವ ಕುಸ್ತಿಪಟುಗಳ ಬಗ್ಗೆ ನೀವು ಏನು ಹೇಳುತ್ತೀರಿ?” ಎಂದು ಸಚಿವರನ್ನು ಕೇಳಲಾಯಿತು. “ಕಾನೂನು ಪ್ರಕ್ರಿಯೆ ನಡೆಯುತ್ತಿದೆ” ಎಂದು ಮೀನಾಕ್ಷಿ ಲೇಖಿ ಉತ್ತರಿಸಿದರು. ಕುಸ್ತಿಪಟುಗಳು ಮಂಗಳವಾರ ಹರಿದ್ವಾರಕ್ಕೆ ತೆರಳುವ ಮೊದಲು ಈ ಸಂವಾದ ನಡೆದಿದೆ. ಪದಕಗಳನ್ನು ಎಸೆಯುವ ಯೋಜನೆ ಕುರಿತು ಪ್ರಶ್ನೆ ಕೇಳಿದಾಗ ಸಚಿವರು ಎದ್ದು ಬಿದ್ದು ಓಡಿದರು.

ಸಚಿವರು ಓಡಿದ ಕ್ರಮವನ್ನು ಟೀಕಿಸಿರುವ ಕಾಂಗ್ರೆಸ್, “ಮಹಿಳಾ ಕುಸ್ತಿಪಟುಗಳ ವಿಚಾರವಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಕಳೆದ ವರ್ಷ 10ನೇ ತರಗತಿಯಲ್ಲಿ 27 ಲಕ್ಷ ವಿದ್ಯಾರ್ಥಿಗಳು ಅನುತ್ತೀರ್ಣ; ಕೇಂದ್ರ ಶಿಕ್ಷಣ ಸಚಿವಾಲಯ ಮಾಹಿತಿ

ಬಿಜೆಪಿ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಕುಸ್ತಿಪಟುಗಳು ದೆಹಲಿಯಲ್ಲಿ 37 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಮಂಗಳವಾರ, ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಗೆ ಎಸೆಯುವ ಮೂಲಕ ಪ್ರತಿಭಟನೆಯನ್ನು ಮತ್ತಷ್ಟು ತೀವ್ರಗೊಳಿಸುವುದನ್ನು ನಿರ್ಧರಿಸಿದ್ದರು.

ಆದರೆ, ರೈತ ಮುಖಂಡ ನರೇಶ್ ಟಿಕಾಯತ್ ಪದಕಗಳನ್ನು ಎಸೆಯದಂತೆ ಕುಸ್ತಿಪಟುಗಳನ್ನು ತಡೆದರು. ಪ್ರತಿಭಟನಾಕಾರರು ತಮ್ಮ ಬೇಡಿಕೆಯನ್ನು ಈಡೇರಿಸಲು ಸರಕಾರಕ್ಕೆ ಐದು ದಿನಗಳ ಗಡುವು ನೀಡಿದ್ದಾರೆ. ಈ ನಡುವೆ ಕುಸ್ತಿಪಟುಗಳನ್ನು ಬೆಂಬಲಿಸಿ ಜೂನ್ 1ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...