ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13ರ ಬಾಲಕ ಪೊಲೀಸ್ ವಶಕ್ಕೆ

Date:

ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಮೇಲ್ ಕಳುಹಿಸಿದ ಆರೋಪದಲ್ಲಿ 13 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ಉತ್ತರ ಪ್ರದೇಶದ ಮೀರತ್‌ನ ಬಾಲಕ ಕಳೆದ ಮಂಗಳವಾರ ‘ಕೇವಲ ಮೋಜಿಗಾಗಿ’ ಬೆದರಿಕೆ ಮೇಲ್ ಕಳುಹಿಸಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾನೆ. ಇತ್ತೀಚೆಗೆ ವಿವಿಧ ಶಾಲೆಗಳಲ್ಲಿ ಇದೇ ರೀತಿಯ ಬೆದರಿಕೆ ಕರೆ ಬಂದಿರುವುದನ್ನು ನೋಡಿ ತಾನು ಮೋಜಿಗಾಗಿ ಈ ರೀತಿ ನಕಲಿ ಬೆದರಿಕೆ ಮೇಲ್ ಮಾಡಿರುವುದಾಗಿ ಬಾಲಕ ಹೇಳಿಕೊಂಡಿದ್ದಾನೆ.

ತಾನು ನಕಲಿ ಬೆದರಿಕೆ ಇಮೇಲ್ ಮಾಡಿದ ಬಳಿಕ ಅಧಿಕಾರಿಗಳು ತನ್ನನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತದೆಯೇ ಎಂದು ತಿಳಿಯುವ ನಿಟ್ಟಿನಲ್ಲಿ ಬಾಂಬ್ ಬೆದರಿಕೆ ಇಮೇಲ್ ಮಾಡಲಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಈ ಬಾಲಕ ಬಾಂಬ್ ಬೆದರಿಕೆ ಇಮೇಲ್ ಕಳುಹಿಸಲು ನಕಲಿ ಇಮೇಲ್ ಐಡಿಯನ್ನು ರಚಿಸಿದ್ದರು. “ಅವನು ತನ್ನ ಫೋನ್‌ನಿಂದ ಮೇಲ್ ಕಳುಹಿಸಿದನು, ಅದಕ್ಕಾಗಿ ತನ್ನ ತಾಯಿಯ ವೈಫೈ ಬಳಸಿಕೊಂಡಿದ್ದಾನೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ?  ದೆಹಲಿ ನಂತರ ಜೈಪುರ ಶಾಲೆಗಳಿಗೆ ಬಾಂಬ್ ಬೆದರಿಕೆ

ಬಾಂಬೆ ಬೆದರಿಕೆಯ ಇಮೇಲ್ ಕಳುಹಿಸಿದ ಕೂಡಲೇ ಬಾಲಕ ತಕ್ಷಣವೇ ಇಮೇಲ್ ಐಡಿಯನ್ನು ಡಿಲೀಟ್ ಮಾಡಿದ್ದಾನೆ ಎಂದು ವರದಿಯಾಗಿದೆ.

“ಮರುದಿನ ದೆಹಲಿ ವಿಮಾನ ನಿಲ್ದಾಣದಲ್ಲಿ ನಕಲಿ ಬಾಂಬ್ ಬೆದರಿಕೆ ಸುದ್ದಿಯನ್ನು ಮಾಧ್ಯಮಗಳಲ್ಲಿ ಬರುತ್ತಿರುವುದನ್ನು ನೋಡಿದ ಬಾಲಕ ಉತ್ಸುಕರಾಗಿದ್ದಾಗ ನಮಗೆ ತಿಳಿಸಿದ್ದಾನೆ. ಆದರೆ ಆತನಿಗೆ ಭಯವೂ ಇತ್ತು ಅದರಿಂದಾಗಿ ಭಯದಿಂದ ತನ್ನ ಪೋಷಕರಿಗೆ ಯಾವುದೇ ಮಾಹಿತಿಯನ್ನು ಬಾಲಕ ನೀಡಿಲ್ಲ” ಎಂದು ಉಪ ಆಯುಕ್ತೆ ಉಷಾ ರಂಗನಾನಿ ಹೇಳಿದರು.

ಇದನ್ನು ಓದಿದ್ದೀರಾ?  ಪ್ಯಾರಿಸ್- ಮುಂಬೈ ವಿಸ್ತಾರಾ ವಿಮಾನಕ್ಕೆ ಬಾಂಬ್ ಬೆದರಿಕೆ

ದೆಹಲಿ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (ಡಿಐಎಎಲ್) ಕಚೇರಿಗೆ ಕಳೆದ ಮಂಗಳವಾರ (ಜೂನ್ 12) ರಾತ್ರಿ 10.50ಕ್ಕೆ ಇಮೇಲ್ ಬಂದಿದ್ದು, ಇದರಿಂದಾಗಿ ವಿಮಾನವು ಸುಮಾರು 12 ಗಂಟೆಗಳ ಕಾಲ ವಿಳಂಬವಾಗಿತ್ತು. ಸಂಪೂರ್ಣ ತಪಾಸಣೆಯ ನಂತರ, ವಿಮಾನದಲ್ಲಿ ಏನೂ ಪತ್ತೆಯಾಗದ ಬಳಿಕ ಇದು ಸುಳ್ಳು ಬೆದರಿಕೆ ಎಂದು ಘೋಷಿಸಲಾಗಿತ್ತು.

ತನಿಖೆಯ ಸಮಯದಲ್ಲಿ, ಇಮೇಲ್ ಮೀರತ್‌ನಲ್ಲಿ ಪತ್ತೆಯಾಗಿದೆ. ನಂತರ ದೆಹಲಿ ಪೊಲೀಸರ ತಂಡ ಅಲ್ಲಿಗೆ ಹೋಗಿ ಬಾಲಕನ ವಿಚಾರಣೆ ಮಾಡಿದ್ದಾರೆ. ಪೊಲೀಸರು ಆತನ ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದು, ಬಾಲಕನ ಕೌನ್ಸಿಲಿಂಗ್ ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...