ಬಿಜೆಪಿಗೆ 100 ಕೋಟಿ ರೂ. ಕೊಟ್ಟು 14,400 ಕೋಟಿ ರೂ. ಗುತ್ತಿಗೆ ಪಡೆದ ಮೇಘಾ ಇಂಜಿನಿಯರಿಂಗ್ ಕಂಪನಿ

Date:

ಚುನಾವಣಾ ಬಾಂಡ್‌ ರೂಪದಲ್ಲಿ 100 ಕೋಟಿ ರೂ. ದೇಣಿಗೆ ಕೊಟ್ಟ ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) 14,400 ಕೋಟಿ ರೂ.ಗಳ ಗುತ್ತಿಗೆ ಪಡೆದಿದೆ ಎಂದು ಹಿರಿಯ ನ್ಯಾಯವಾದಿ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಶಾಂತ್ ಭೂಷಣ್, ಏಪ್ರಿಲ್‌ 11, 2023ರಲ್ಲಿ ಚುನಾವಣಾ ಬಾಂಡ್‌ ರೂಪದಲ್ಲಿ ಮಹಾರಾಷ್ಟ್ರದ ಬಿಜೆಪಿ ಸರ್ಕಾರಕ್ಕೆ 100 ಕೋಟಿ ರೂ. ದೇಣಿಗೆ ನೀಡಿತ್ತು. ದೇಣಿಗೆ ನೀಡಿ ಒಂದು ತಿಂಗಳ ನಂತರ ಮಹಾರಾಷ್ಟ್ರ ಸರ್ಕಾರದಿಂದ ಥಾಣೆ-ಬೊರಿವಲಿಯಲ್ಲಿ 14,400 ಕೋಟಿ ರೂ. ವೆಚ್ಚದ ಅವಳಿ ಸುರಂಗ ಯೋಜನೆಯನ್ನು ಗುತ್ತಿಗೆ ಪಡೆದಿತ್ತು ಎಂದಿದ್ದಾರೆ.

ಎಸ್‌ಬಿಐ ಅಂಕಿಅಂಶಗಳಲ್ಲಿ ಬಾಂಡ್‌ಗಳ ಸಂಖ್ಯೆಗಳನ್ನು ಮುಚ್ಚಿಟ್ಟಿದೆ. ಕೆಲವು ದಾನಿಗಳು ಮತ್ತು ಪಕ್ಷಗಳ ಹೊಂದಾಣಿಕೆಯನ್ನು ಇಲ್ಲಿ ಊಹಿಸಬಹುದು. ಹಲವು ದೇಣಿಗೆದಾರರು ದೇಣಿಗೆ ಕೊಟ್ಟು ಲಾಭ ಪಡೆದುಕೊಂಡಿದ್ದಾರೆ ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ ಘೋಷಿಸಿದ ಐದು ಗ್ಯಾರಂಟಿ ಮತ್ತು ಆರ್ಥಿಕತೆಯ ನಿಜನೋಟ

ಎಸ್‌ಬಿಐ ಬಿಡುಗಡೆ ಮಾಡಿರುವ ಅಂಕಿಅಂಶಗಳಲ್ಲಿ ಅತಿ ಹೆಚ್ಚು ದೇಣಿಗೆ ನೀಡಿದ ಪಕ್ಷಗಳಲ್ಲಿ ಮೇಘಾ ಇಂಜಿನಿಯರಿಂಗ್ ಕಂಪನಿ 966 ಕೋಟಿ ರೂ. ದೇಣಿಗೆ ನೀಡುವುದರೊಂದಿಗೆ ಎರಡನೇ ಸ್ಥಾನದಲ್ಲಿದೆ.

ಮೇ 11, 2023 ರಂದು ಮೇಘಾ ಇಂಜಿನಿಯರಿಂಗ್ ಕಂಪನಿ 7,464 ಕೋಟಿ ರೂ. ಬಿಡ್‌ ಮಾಡಿ ಥಾಣೆ-ಬೊರಿವಲಿಯಲ್ಲಿ 5.57 ಕಿ.ಮೀ ದೂರದ ಅವಳಿ ಸುರಂಗ ಯೋಜನೆಯನ್ನು ಗುತ್ತಿಗೆ ಪಡೆದಿತ್ತು.

ಸುರಂಗ ನಿರ್ಮಿಸಿದ ಎಂಇಐಎಲ್ ಕಂಪನಿ ಕಾರ್ಯವೈಖರಿ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಯಲ್ಲಿ ಹೊಗಳಿದ್ದರು.

ಹೈದರಾಬಾದ್‌ ಮೂಲದ ಎಂಇಐಎಲ್ ಕಂಪನಿ ಎಲ್‌ ಅಂಡ್‌ ಟಿ ಬಿಡ್‌ ಮಾಡಿದ 6,625 ಕೋಟಿ ರೂ. ಹೆಚ್ಚು ಬಿಡ್‌ ಮಾಡಿ 14,400 ಕೋಟಿ ರೂ. ಗುತ್ತಿಗೆಯನ್ನು ತನ್ನದಾಗಿಸಿಕೊಂಡಿತ್ತು. ಪಿ ಪಿ ರೆಡ್ಡಿ ಎಂಇಐಎಲ್‌ ಸಂಸ್ಥೆಯ ಕಾರ್ಯನಿರ್ವಾಹಕ ಅಧ್ಯಕ್ಷರಾಗಿದ್ದು, ಭಾರತದ ಶ್ರೀಮಂತರ ಪಟ್ಟಿಯಲ್ಲಿ ಪ್ರಮುಖ ಸ್ಥಾನದಲ್ಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...