#MentalHealthMatter | ‘ಪತ್ನಿಯನ್ನು ಎಷ್ಟೊತ್ತು ನೋಡ್ತೀರಿ, 90 ಗಂಟೆ ಕೆಲಸ ಮಾಡಿ’ ಎಂದ ಉದ್ಯಮಿಗೆ ನಟಿ ದೀಪಿಕಾ ಪಡುಕೋಣೆ ತಿರುಗೇಟು

Date:

ಪತ್ನಿಯನ್ನು ಎಷ್ಟು ಸಮಯ ನೋಡುತ್ತೀರಿ. ಭಾನುವಾರವೂ ಸೇರಿದಂತೆ 90 ಗಂಟೆ ಕೆಲಸ ಮಾಡಿ ಎಂದಿದ್ದ ಉದ್ಯಮಿ, ಲಾರ್ಸೆನ್ & ಟೂಬ್ರೊ(ಎಲ್ & ಟಿ) ಅಧ್ಯಕ್ಷ ಎಸ್.ಎನ್. ಸುಬ್ರಹ್ಮಣ್ಯನ್ ವಿರುದ್ಧ ನಟಿ ದೀಪಿಕಾ ಪಡುಕೋಟೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಆಘಾತಕಾರಿ ಮತ್ತು ಮಾನಸಿಕ ಆರೋಗ್ಯದ ವಿಷಯ ಎಂದಿದ್ದಾರೆ.

ಸುಬ್ರಹ್ಮಣ್ಯನ್ ಅವರು ಮಾತನಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, “ಎಷ್ಟು ಕಾಲ ನೀವು ನಿಮ್ಮ ಪತ್ನಿಯ ಮುಖವನ್ನೇ ದಿಟ್ಟಿಸುತ್ತಾ ಕೂರುತ್ತೀರಿ? ಭಾನುವಾರಗಳಲ್ಲೂ ನಾನು ನಿಮ್ಮನ್ನು ಕೆಲಸ ಮಾಡುವಂತೆ ಮಾಡಲು ಸಾಧ್ಯವಾದರೆ, ನಾನು ಹೆಚ್ಚು ಸಂತೋಷಪಡುತ್ತೇನೆ. ನೀವು ಮನೆಯಲ್ಲಿ ಕಡಿಮೆ ಸಮಯ ಕಳೆದು, ಕಚೇರಿಯಲ್ಲಿ ಹೆಚ್ಚು ಸಮಯ ವ್ಯಯಿಸಿ” ಎಂದು ತಮ್ಮ ಉದ್ಯೋಗಿಗಳಿಗೆ ಹೇಳುತ್ತಿರುವುದು ಸೆರೆಯಾಗಿದೆ.

ಅವರ ಹೇಳಿಕೆ ಭಾರೀ ಚರ್ಚೆ ಮತ್ತು ವಿರೋಧಕ್ಕೆ ಗುರಿಯಾಗಿದೆ. ಸುಬ್ರಹ್ಮಣ್ಯನ್ ಹೇಳಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ನಟಿ ದೀಪಿಕಾ ಪಡುಕೋಣೆ, “ಕೆಲಸ-ಜೀವನ ಸಮತೋಲನ ಮತ್ತು ಮಾನಸಿಕ ಆರೋಗ್ಯದ ಮಹತ್ವದ ಅರಿವು ಇರಬೇಕು. ಇಂತಹ ಹಿರಿಯ ಹುದ್ದೆಗಳಲ್ಲಿರುವ ಜನರು ಇಂತಹ ಹೇಳಿಕೆಗಳನ್ನು ನೀಡುವುದನ್ನು ನೋಡುವುದು ಆಘಾತಕಾರಿಯಾಗಿದೆ. ಇದು, ಮಾನಸಿಕ ಆರೋಗ್ಯದ ವಿಷಯ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
image 38 1

ಈ ವರದಿ ಓದಿದ್ದೀರಾ?: ಸಾರಿಗೆ ದರ ಏರಿಕೆ ಖಂಡನೀಯ, ಜೀವ ಹಿಂಡುವ ಜಿಎಸ್‌ಟಿ ಬಗ್ಗೆ ಬಿಜೆಪಿ ಏಕೆ ಬಾಯಿ ಬಿಡುತ್ತಿಲ್ಲ?

ಇತ್ತೀಚೆಗೆ, ಇನ್ಫೋಸಿಸ್ ಸಹ-ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಾರದಲ್ಲಿ 70 ಗಂಟೆಗಳ ಕೆಲಸದ ಬಗ್ಗೆ ಪ್ರಸ್ತಾಪಿಸಿದ್ದರು. ಇದೀಗ, ಅವರ ಸಾಲಿಗೆ ಸುಬ್ರಹ್ಮಣ್ಯನ್ ಸೇರಿಕೊಂಡಿದ್ದಾರೆ. ಆದಾಗ್ಯೂ, 70 ಗಂಟೆ ಕೆಲಸ ಮಾಡುವ ವಿಚಾರವನ್ನು ಹಲವರು ಉದ್ಯಮಿಗಳು ತಿರಸ್ಕರಿಸಿದ್ದಾರೆ. ಉದ್ಯೋಗಿಗಳಿಗೆ ವಿಶ್ರಾಂತಿ ಬೇಕು. ವಿಶ್ರಾಂತಿ ಇಲ್ಲದೆ ಉತ್ತಮವಾದ ಕೆಲಸವನ್ನು ಮಾಡಲು ಮತ್ತು ಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...