ಮೆಸ್ಸಿ ಕಾರ್ಯಕ್ರಮ ಅವ್ಯವಸ್ಥೆ: ಬಂಗಾಳ ಕ್ರೀಡಾ ಸಚಿವ ರಾಜೀನಾಮೆ

Date:

ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಲಿಯೋನೆಲ್ ಮೆಸ್ಸಿ ಅವರ GOAT ಟೂರ್ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ಅವ್ಯವಸ್ಥೆ ಮತ್ತು ಗಲಾಟೆ ಕುರಿತು ತನಿಖೆಗೆ ಪಶ್ಚಿಮ ಬಂಗಾಳ ಸರ್ಕಾರ ಆದೇಶಿಸಿದೆ. ಈ ನಡುವೆ, ಘಟನೆಯ ನೈತಿಕ ಹೊಣೆಹೊತ್ತು ಬಂಗಾಳದ ಕ್ರೀಡಾ ಸಚಿವ ಅರೂಪ್ ಬಿಸ್ವಾಸ್ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಅವ್ಯವಸ್ಥೆಗೆ ಸಂಬಂಧಿಸಿದಂತೆ ಬಿಸ್ವಾಸ್‌ ವಿರುದ್ಧ ಭಾರೀ ಟೀಕೆಗಳು ವ್ಯಕ್ತವಾಗಿವೆ. ಈ ಬೆನ್ನಲ್ಲೇ, ಬಿಸ್ವಾಸ್ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಕೈಬರಹದಲ್ಲಿ ರಾಜೀನಾಮೆ ಪತ್ರ ಬರೆದಿದ್ದಾರೆ. “ಘಟನೆ ಕುರಿತು ಮುಕ್ತ ಮತ್ತು ನ್ಯಾಯಯುತ ತನಿಖೆ ನಡೆಯುವುದನ್ನು ಖಾತ್ರಿಪಡಿಸಲು ರಾಜೀನಾಮೆ ನೀಡುತ್ತಿದ್ದೇನೆ” ಎಂದು ಹೇಳಿದ್ದಾರೆ. ಅವರ ರಾಜೀನಾಮೆಯನ್ನು ಮಮತಾ ಬ್ಯಾನರ್ಜಿ ಅಂಗೀಕರಿಸಿದ್ದಾರೆ.

ಶನಿವಾರ ಬೆಳಗ್ಗೆ, ಕೋಲ್ಕತ್ತಾದ ಸಾಲ್ಟ್‌ ಲೇಕ್‌ ಕ್ರೀಡಾಂಗಣದಲ್ಲಿ ಮೆಸ್ಸಿ ಅವರ 2 ಗಂಟೆಗಳ ಕಾರ್ಯಕ್ರಮ ಅಯೋಜಿಸಲಾಗಿತ್ತು. ಮೆಸ್ಸಿ ಅವರನ್ನು ಕ್ರೀಡಾಂಗಣದಲ್ಲಿ ಸುತ್ತು ಹಾಕುವಾಗ, ಅವರನ್ನು ಹಲವು ರಾಜಕಾರಣಿಗಳು ಮತ್ತು ಪ್ರಭಾವಿಗಳು ಸುತ್ತುವರಿದಿದ್ದರು. ಪರಿಣಾಮ, ಕ್ರೀಡಾಂಗಣಕ್ಕೆ ಟಿಕೆಟ್‌ ಪಡೆದು ಬಂದಿದ್ದ ಅಭಿಮಾನಿಗಳು ಮೆಸ್ಸಿಯನ್ನು ನೋಡಲು ಸಾಧ್ಯವಾಗದೆ ಗಲಾಟೆ ನಡೆಸಿದರು. ಈ ಬೆನ್ನಲ್ಲೇ, ಕ್ರೀಡಾಂಗಣದ ಕಾರ್ಯಕ್ರಮವು ಕೇವಲ 20 ನಿಮಿಷದಲ್ಲೇ ಮೊಟಕುಗೊಂಡಿತ್ತು. ಮೆಸ್ಸಿ ಕ್ರೀಡಾಂಗಣದಲ್ಲಿ ಹೊರಹೋದರು. ಕೋಪಗೊಂಡ ಅಭಿಮಾನಿಗಳು ಸ್ಟೇಡಿಯಂನಲ್ಲಿದ್ದ ಕುರ್ಚಿಗಳನ್ನು ಮುರಿದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ಘಟನೆ ಕುರಿತು ತನಿಖೆ ನಡೆಸಲು ನಿವೃತ್ತ ನ್ಯಾಯಮೂರ್ತಿ ಅಸಿಮ್ ಕುಮಾರ್ ರಾಯ್ ನೇತೃತ್ವದ ವಿಚಾರಣಾ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿಯು ಪ್ರಾಥಮಿಕ ವರದಿ ಸಲ್ಲಿಸಿದ್ದು, ಸರ್ಕಾರವು ಹಿರಿಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡಿದೆ. ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ರಾಜೀವ್ ಕುಮಾರ್ ಅವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಅಂತೆಯೇ, ಬಿಧಾನ್ನಗರ ಪೊಲೀಸ್ ಮುಖ್ಯಸ್ಥರು ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗೂ ನೋಟಿಸ್‌ ನೀಡಲಾಗಿದ್ದು, 24 ಗಂಟೆಗಳಲ್ಲಿ ಉತ್ತರ ನೀಡುವಂತೆ ಸೂಚಿಸಲಾಗಿದೆ. ಉಪ ಪೊಲೀಸ್ ಆಯುಕ್ತ ಅನೀಶ್ ಸರ್ಕಾರ್ ಅವರನ್ನು ಅಮಾನತು ಮಾಡಲಾಗಿದೆ.

ಮಮತಾ ಅವರ ಅತ್ಯಂತ ವಿಶ್ವಾಸಾರ್ಹರೂ, ಟಿಎಂಸಿಯ ಪ್ರಭಾವಿ ನಾಯಕರೂ ಆಗಿರುವ ಬಿಸ್ವಾಸ್ ಅವರ ರಾಜೀನಾಮೆಯು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗಮನಾರ್ಹ ಪ್ರಭಾವ ಬೀರುವ ಸಾಧ್ಯತೆ ಇದೆ. ಈ ರಾಜೀನಾಮೆಯನ್ನು ನೈತಿಕತೆ ಮತ್ತು ಹೊಣೆಗಾರಿಕೆಯನ್ನು ಪ್ರದರ್ಶಿಸಿದ ಪಕ್ಷವೆಂದು ಜನರ ಗಮನ ಸೆಳೆಯಲೂ ಟಿಎಂಸಿಗೆ ಇದು ಅವಕಾಶ ನೀಡಬಹುದು ಎನ್ನಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...