ಮುಸ್ಲಿಂ ದ್ವೇಷಕ್ಕೆ ಅನುಮತಿ ಹಾಗೂ ಮೋದಿ ನಿಂದಿಸುವ ಜಾಹೀರಾತುಗಳಿಗೆ ತಡೆ ನೀಡಿದ ಮೆಟಾ

Date:

ಪ್ರಸ್ತುತ ಭಾರತದಲ್ಲಿ ಲೋಕಸಭಾ ಚುನಾವಣೆಗಳು ನಡೆಯುತ್ತಿದ್ದು, ಐದು ಹಂತದಲ್ಲಿ ಮತದಾನ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಕೃತಕ ಬುದ್ಧಿಮತ್ತೆ(ಎಐ) ನಿರ್ಮಿತ ವಿಡಿಯೋಗಳು ಕೋಮು ಸಾಮರಸ್ಯ ಹಾಳು ಮಾಡಿ ಅಪಪ್ರಚಾರಗೊಳಿಸುತ್ತಿರುವುದು ಪ್ರಮುಖ ಬೆದರಿಕೆಯಾಗಿ ಹೊರಹೊಮ್ಮಿದೆ.

ವರದಿಗಳ ಪ್ರಕಾರ ಫೇಸ್‌ಬುಕ್‌, ವಾಟ್ಸಾಪ್‌, ಇನ್ಸ್‌ಟಾ ಮಾತೃಸಂಸ್ಥೆ ಮೆಟಾ ಸಂಸ್ಥೆಯು ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಯಲ್ಲಿ ದ್ವೇಷವನ್ನು ಹರಡಲು ಕೃತಕ ಬುದ್ಧಿಮತ್ತೆಯ ಮೂಲಕ ತಿರುಚುವ ಹಲವು ರಾಜಕೀಯ ಜಾಹೀರಾತುಗಳಿಗೆ ಅನುಮೋದನೆ ನೀಡಿದೆ.

ಭಾರತದಲ್ಲಿನ ಮುಸ್ಲಿಂ ಸಮುದಾಯವನ್ನು ನಿಂದಿಸುವುದನ್ನು ಒಳಗೊಂಡಿರುವ ಜಾಹೀರಾತುಗಳಿಗೆ ಫೇಸ್‌ಬುಕ್‌ ಅನುಮೋದನೆ ನೀಡಿದೆ. ‘ಈ ಕ್ರಿಮಿಕೀಟಗಳನ್ನು ಸುಟ್ಟುಬಿಡೋಣ’ ‘ಹಿಂದೂಗಳ ರಕ್ತ ಚೆಲ್ಲುತ್ತದೆ’,  ಈ ಆಕ್ರಮಣಕಾರರನ್ನು ಖಂಡಿತಾ ಸುಡಬೇಕು’ ರೀತಿಯ ಒಂದು ಧರ್ಮವನ್ನು ಪ್ರಚೋದಿಸುವ ರಾಜಕೀಯ ನಾಯಕರ ದ್ವೇಷ ಹರಡುವ ಪ್ರಚಾರಗಳನ್ನು ಒಳಗೊಂಡ ಜಾಹೀರಾತುಗಳಿಗೆ ಮೆಟಾ ಅನುಮತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವರದಿಯ ಪ್ರಕಾರ ಮುಸ್ಲಿಂ ಸಮುದಾಯವನ್ನು ಕೆರಳಿಸುವ’ ಹಿಂದೂಗಳನ್ನು ಭಾರತದಿಂದ ಅಳಿಸಿ’ ಎಂಬ ಸಾಮರಸ್ಯ ಹದಗೆಡಿಸುವ ಒಂದು ಜಾಹೀರಾತಿಗೂ ಮೆಟಾ ಅನುಮೋದಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಆಟ, ಹುಚ್ಚಾಟ, ಜೂಜಾಟ ಮತ್ತು ಧೋನಿಯ ದುಗುಡ

ಕರ್ನಾಟಕ ಬಿಜೆಪಿ ಘಟಕ ಪ್ರಕಟಿಸಿದ್ದ ಕೋಮು ದ್ವೇಷ ಬಿತ್ತುವ ಜಾಹೀರಾತನ್ನು ಅಳಿಸುವಂತೆ ಸಾಮಾಜಿಕ ಮಾಧ್ಯಮ ಎಕ್ಸ್‌ಗೆ ಚುನಾವಣಾ ಆಯೋಗದ ಆದೇಶ ನೀಡಿದ ನಂತರ ಈ ಘಟನೆಗಳು ಬೆಳಕಿಗೆ ಬಂದಿವೆ.

ಹಾನಿಕಾರಕ ರಾಜಕೀಯ ಜಾಹೀರಾತುಗಳನ್ನು ಪತ್ತೆ ಹಚ್ಚಲು ಹಾಗೂ ನಿರ್ಬಂಧಿಸುವುದಕ್ಕೆ ಇಂಡಿಯಾ ಸಿವಿಲ್ ವಾಚ್‌ ಇಂಟರ್‌ನ್ಯಾಷನಲ್‌ ಹಾಗೂ ಎಕೊ ಎಂಬ ಕಾರ್ಪೋರೇಟ್ ಹೊಣೆಗಾರಿಗಾ ಸಂಸ್ಥೆಗಳನ್ನು ಸ್ಥಾಪಿಸಲಾಗಿದೆ.

ಈ ಸಂಸ್ಥೆಗಳು ಇಂಗ್ಲಿಷ್, ಹಿಂದಿ, ಬಂಗಾಳಿ, ಗುಜರಾತಿ ಹಾಗೂ ಕನ್ನಡ ಸೇರಿ 14 ಭಾಷೆಗಳ ದ್ವೇಷ ಬಿತ್ತುವ 22 ಜಾಹೀರಾತುಗಳಿಗೆ ಮೆಟಾ ಒಪ್ಪಿಗೆ ನೀಡಿರುವುದನ್ನು ಪತ್ತೆ ಹಚ್ಚಿವೆ. ಆದಾಗ್ಯೂ ಅನುಮೋದನೆ ಪಡೆದು ಪ್ರಕಟಣೆಗೂ ಮೊದಲೂ ಈ ಸಂಶೋಧನಾ ಸಂಸ್ಥೆಗಳು ತಕ್ಷಣವೇ ಜಾಹೀರಾತನ್ನು ನಿರ್ಬಂಧಿಸಿವೆ.

ಎಐ ಬಳಕೆಯಿಂದ ತಿರುಚಲಾದ ಅನುಮೋದಿತ ಎಲ್ಲ ಜಾಹೀರಾತುಗಳನ್ನು ಪತ್ತೆ ಹಚ್ಚಲು ಮೆಟಾ ಸಂಸ್ಥೆ ವಿಫಲವಾಗಿದೆ ಎಂದು ಸಂಶೋಧನಾ ಸಂಸ್ಥೆಗಳು ಅಭಿಪ್ರಾಯ ಪಟ್ಟಿವೆ.

ಮೆಟಾ ಸಂಸ್ಥೆಯು ದ್ವೇಷ ಹರಡುವ 5 ಜಾಹೀರಾತುಗಳನ್ನು ಮಾತ್ರ ತಿರಸ್ಕರಿಸಿದೆ. ಅವುಗಳಲ್ಲಿ ಮೋದಿ ವಿರುದ್ಧ ಇರುವ ಒಂದು ದ್ವೇಷ ಭಾಷಣ ಕೂಡ ಒಳಗೊಂಡಿದೆ. ಆದರೆ ಮುಸ್ಲಿಮರನ್ನು ದ್ವೇಷಿಸುವ ವಿವಿಧ ವಿಷಯವಿರುವ 14 ಇತರ ಜಾಹೀರಾತುಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಸಂಶೋಧನಾ ಸಂಸ್ಥೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...