ಮನರೇಗಾ ವೇತನ ಪರಿಷ್ಕರಣೆ | ದಿನಗೂಲಿಯಲ್ಲಿ ಹರಿಯಾಣ ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶದಲ್ಲಿ ಕನಿಷ್ಠ ಕೂಲಿ

Date:

ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯವು 2024-25ನೇ ಹಣಕಾಸು ವರ್ಷಕ್ಕಾಗಿ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ(ಮನರೇಗಾ)ಯಡಿ ಪರಿಷ್ಕೃತ ವೇತನಗಳನ್ನು ಪ್ರಕಟಿಸಿದ್ದು, ಸೋಮವಾರ(ಏ.1)ದಿಂದ ಜಾರಿಗೆ ಬರಲಿವೆ.

ಕಾಯ್ದೆಯ ವ್ಯಾಪ್ತಿಗೊಳಪಟ್ಟಿರುವ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವೇತನಗಳನ್ನು ಹೆಚ್ಚಿಸಲಾಗಿದೆ. ಆದರೆ ಮೊತ್ತಗಳು ರಾಜ್ಯದಿಂದ ರಾಜ್ಯಕ್ಕೆ ಬದಲಾಗುತ್ತವೆ. ಕಾಯ್ದೆಯು ವಿಶೇಷ ಅಧಿಸೂಚಿತ ದಿನಗೂಲಿಗಳಲ್ಲಿ ಗ್ರಾಮೀಣ ಕುಟುಂಬಗಳಿಗೆ ನೂರು ದಿನಗಳ ಉದ್ಯೋಗದ ಖಾತರಿಯನ್ನು ನೀಡುತ್ತದೆ.

ದೇಶದಲ್ಲಿ ಅತ್ಯಧಿಕ ಮನರೇಗಾ ವೇತನವನ್ನು ನೀಡುವ ರಾಜ್ಯವಾಗಿ ಹರಿಯಾಣ ಮುಂದುವರೆದಿದೆ. ರಾಜ್ಯದಲ್ಲಿ ಪರಿಷ್ಕೃತ ದಿನಗೂಲಿಯು 374 ರೂ.ಗಳಿದ್ದು, ಕಳೆದ ವರ್ಷದ 357 ರೂ.ಗಳಿಗೆ ಹೋಲಿಸಿದರೆ ಶೇ.4.8ರಷ್ಟು ಹೆಚ್ಚಳವಾಗಿದೆ. ಇತ್ತೀಚಿನ ಪರಿಷ್ಕರಣೆಯಂತೆ ಗೋವಾ(356 ರೂ.) ಮತ್ತು ಕರ್ನಾಟಕ (349 ರೂ.) ನಂತರದ ಸ್ಥಾನಗಳಲ್ಲಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಕ್ಕಿಮ್‌ನ ಗ್ನಾಥಾಂಗ್, ಲಾಚುಂಗ್ ಮತ್ತು ಲಾಚೆನ್ ಗ್ರಾಮ ಪಂಚಾಯಿತಿಗಳಲ್ಲಿ ಮನರೇಗಾ ವೇತನ ದಿನವೊಂದಕ್ಕೆ 374 ರೂ.ಗಳಾಗಿದ್ದರೆ ರಾಜ್ಯದ ಇತರ ಭಾಗಗಳಲ್ಲಿ ದಿನಕ್ಕೆ 249 ರೂ.ಆಗಿದೆ.

ಸೋಮವಾರದಿಂದ ನಾಗಾಲ್ಯಾಂಡ್, ಅರುಣಾಚಲ ಪ್ರದೇಶ ಮತ್ತು ಹಿಮಾಚಲ ಪ್ರದೇಶಗಳ ಅನುಸೂಚಿತವಲ್ಲದ ಪ್ರದೇಶಗಳು ಅನುಕ್ರಮವಾಗಿ ₹234, ₹234 ಮತ್ತು ₹236ರಂತೆ ಕನಿಷ್ಠ ಮನರೇಗಾ ವೇತನಗಳನ್ನು ಹೊಂದಿರಲಿವೆ.

ಕಳೆದ ವರ್ಷಕ್ಕೆ ಹೋಲಿಸಿದರೆ ಗೋವಾದಲ್ಲಿ ದಿನವೊಂದಕ್ಕೆ 34 ರೂ.ಗಳ ಗರಿಷ್ಠ ಏರಿಕೆಯನ್ನು ಮಾಡಲಾಗಿದೆ. ಕಳೆದ ವರ್ಷ 322 ರೂ.ಗಳ ದಿನಗೂಲಿ ನೀಡುತ್ತಿದ್ದ ಗೋವಾ ಏಪ್ರಿಲ್‌ 1ರಿಂದ 356 ರೂ.ಗಳ (ಶೇ.10.56ರಷ್ಟು ಹೆಚ್ಚಳ) ದಿನಗೂಲಿಯನ್ನು ನೀಡಲಿದೆ. ಕರ್ನಾಟಕ (33 ರೂ.ಏರಿಕೆ), ಆಂಧ್ರಪ್ರದೇಶ ಮತ್ತು ತೆಲಂಗಾಣ (ತಲಾ 28 ರೂ.ಏರಿಕೆ ) ನಂತರದ ಸ್ಥಾನಗಳಲ್ಲಿವೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಮೂರು ರಾಜ್ಯಗಳಲ್ಲಿ ಮನರೇಗಾ ದಿನಗೂಲಿಯಲ್ಲಿ ಅನುಕ್ರಮವಾಗಿ ಶೇ.10.44, ಶೇ.10.29 ಮತ್ತು ಶೇ.10.29ರಷ್ಟು ಏರಿಕೆಯಾಗಿದೆ.

ಉತ್ತರ ಪ್ರದೇಶ, ಉತ್ತರಾಖಂಡ (ತಲಾ 7ರೂ. ಏರಿಕೆ) ಮತ್ತು ನಾಗಾಲ್ಯಾಂಡ್ (10 ರೂ.ಏರಿಕೆ)ಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಅತ್ಯಂತ ಕಡಿಮೆ ಹೆಚ್ಚಳವಾಗಿದೆ. ಶೇಕಡಾವಾರು ಲೆಕ್ಕದಲ್ಲಿ ಉತ್ತರ ಪ್ರದೇಶ ಮತ್ತು ಉತ್ತರಾಖಂಡ ಕಳೆದ ವರ್ಷಕ್ಕೆ ಹೋಲಿಸಿದರೆ ಅತ್ಯಂತ ಕಡಿಮೆ ಏರಿಕೆ(ತಲಾ ಶೇ.3.04)ಯನ್ನು ಕಂಡಿವೆ. ಇವುಗಳಿಗಿಂತ ಮೇಲಿನ ಸ್ಥಾನದಲ್ಲಿರುವ ಲಕ್ಷದ್ವೀಪದಲ್ಲಿ ಶೇ.3.62ರಷ್ಟು ವೇತನ ಹೆಚ್ಚಳವಾಗಿದೆ.

2024-25ನೇ ಸಾಲಿಗೆ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರಾಸರಿ ವೇತನವು ದಿನವೊಂದಕ್ಕೆ 284 ರೂ.ಗಳಾಗಿದ್ದು, ಕಳೆದ ವರ್ಷ ಅದು 267 ರೂ.ಆಗಿತ್ತು.

ಗ್ರಾಹಕ ಬೆಲೆ ಸೂಚ್ಯಂಕದ ಕೃಷಿ ಕಾರ್ಮಿಕ ಆಯಾಮ (ಸಿಪಿಐ-ಎಎಲ್)ದಲ್ಲಿ ಬದಲಾವಣೆಗಳನ್ನು ಆಧರಿಸಿ ಪ್ರತಿವರ್ಷ ಮನರೇಗಾ ವೇತನಗಳನ್ನು ಪರಿಷ್ಕರಿಸಲಾಗುತ್ತದೆ.

ಈ ವರ್ಷದ ಫೆಬ್ರವರಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಕುರಿತ ಸಂಸದೀಯ ಸ್ಥಾಯಿ ಸಮಿತಿಯು, 2010-11ರ ಸಿಪಿಐ-ಎಎಲ್ ಮೌಲ್ಯಗಳನ್ನು ಆಧಾರವಾಗಿಟ್ಟುಕೊಂಡು ವೇತನ ಪರಿಷ್ಕರಣೆ ಪದ್ಧತಿಯು ಈಗಿನ ಹಣದುಬ್ಬರ ಮತ್ತು ಜೀವನವೆಚ್ಚಕ್ಕೆ ಹೊಂದಿಕೆಯಾಗುವುದಿಲ್ಲವೆಂದು ತನ್ನ ವರದಿಯಲ್ಲಿ ಹೇಳಿತ್ತು.

ಈ ಸುದ್ದಿ ಓದಿದ್ದೀರಾ? ಬಿಜೆಪಿಗೆ ₹4,600 ಕೋಟಿ ದಂಡ ವಿಧಿಸದ ಐಟಿ, ಕಾಂಗ್ರೆಸ್‌ನಿಂದ ₹135 ಕೋಟಿಗೆ ಬೇಡಿಕೆ ಇಟ್ಟಿದೆ: ಖರ್ಗೆ

ಭಾರತದಲ್ಲಿ ಅಗತ್ಯಾಧಾರಿತ ಕನಿಷ್ಠ ವೇತನವನ್ನು ದಿನಕ್ಕೆ 375 ರೂ.ಗಳಿಗೆ ನಿಗದಿಪಡಿಸಬೇಕೆಂದು 2019ರಲ್ಲಿ ಶಿಫಾರಸು ಮಾಡಿದ್ದ ತಜ್ಞರ ಸಮಿತಿಯೊಂದರ ವರದಿಯನ್ನು ಉಲ್ಲೇಖಿಸಿದ್ದ ಸ್ಥಾಯಿ ಸಮಿತಿಯು, ಅದರಂತೆ ಮನರೇಗಾ ವೇತನಗಳನ್ನು ಪರಿಷ್ಕರಿಸುವಂತೆ ಸಲಹೆ ನೀಡಿತ್ತು. ಆದರೆ ಪರಿಷ್ಕೃತ ವೇತನಗಳಂತೆ ಯಾವುದೇ ರಾಜ್ಯವು 374 ರೂ.ಗಿಂತ ಹೆಚ್ಚಿನ ದಿನಗೂಲಿಯನ್ನು ನೀಡುವುದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...