ನಾಗಾಲ್ಯಾಂಡ್ ನಾಗರಿಕರ ಹತ್ಯೆ | 30 ಸೇನಾ ಸಿಬ್ಬಂದಿ ವಿಚಾರಣೆಗೆ ನಿರಾಕರಿಸಿದ ರಕ್ಷಣಾ ಸಚಿವಾಲಯ

Date:

  • 30 ಸೇನಾ ಸಿಬ್ಬಂದಿ ತಪ್ಪಿತಸ್ಥರೆಂದು ನಾಗಾಲ್ಯಾಂಡ್ ಎಸ್ಐಟಿ ಚಾರ್ಜ್‌ಶೀಟ್‌
  • ತಿರು-ಓಟಿಂಗ್ ಪ್ರದೇಶದಲ್ಲಿ ಸ್ಥಳೀಯ ಕಲ್ಲಿದ್ದಲು ಗಣಿಗಾರರ ಮೇಲೆ ಸೇನೆ ದಾಳಿ

ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದಂತೆ ಸೇನಾ ಪಡೆ ನಾಗಾಲ್ಯಾಂಡ್ ಗ್ರಾಮವೊಂದರಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ನಾಗರಿಕರ ಹತ್ಯೆ ಆರೋಪದಲ್ಲಿ ಸೇನಾ ಸಿಬ್ಬಂದಿಯ ವಿಚಾರಣೆ ನಡೆಸಲು ಕೇಂದ್ರ ರಕ್ಷಣಾ ಸಚಿವಾಲಯ ಗುರುವಾರ (ಏಪ್ರಿಲ್ 14) ಅನುಮತಿ ನಿರಾಕರಿಸಿದೆ.

2021ರ ಡಿಸಂಬರ್‌ನಲ್ಲಿ ರಾಜ್ಯದ ಓಟಿಂಗ್‌ ಗ್ರಾಮದಲ್ಲಿ ಸೇನಾ ಪಡೆ ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆ ಕೈಗೊಂಡಿತ್ತು. ಈ ವೇಳೆ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ 6 ನಾಗರಿಕರು ಮೃತಪಟ್ಟಿದ್ದರು.

ಘಟನೆಗೆ ಸಂಬಂಧಿಸಿ ಸೇನಾ ಸಿಬ್ಬಂದಿ ವಿಚಾರಣೆಗೆ ಅನುಮತಿ ನೀಡಲು ರಕ್ಷಣಾ ಸಚಿವಾಲಯದ ಅಡಿಯ ಮಿಲಿಟರಿ ವ್ಯವಹಾರಗಳ ಸಚಿವಾಲಯ ನಿರಾಕರಿಸಿ ಗುರುವಾರ ಅಧಿಸೂಚನೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುಂಡಿನ ದಾಳಿಯ ಬಗ್ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಿದೆ. ಇದರಲ್ಲಿ 30 ಸೇನಾ ಯೋಧರನ್ನು ಹೆಸರಿಸಲಾಗಿತ್ತು.

ಎಲ್ಲ 30 ಸೇನಾ ಸಿಬ್ಬಂದಿ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ನೀಡಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯ ಸಕ್ಷಮ ಪ್ರಾಧಿಕಾರವಾದ ಮಿಲಿಟರಿ ವ್ಯವಹಾರಗಳ ಇಲಾಖೆ ನಿರಾಕರಿಸಿದೆ ಎಂದು ನಾಗಾಲ್ಯಾಂಡ್ ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ರಕ್ಷಣಾ ಸಚಿವಾಲಯದ ಅನುಮತಿ ನಿರಾಕರಣೆಯನ್ನು ನ್ಯಾಯಾಲಯಕ್ಕೆ ತಿಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

2021ರಲ್ಲಿ ಮೋನ್ ಜಿಲ್ಲೆಯ ತಿರು-ಓಟಿಂಗ್ ಪ್ರದೇಶದಲ್ಲಿ ಆರು ಸ್ಥಳೀಯ ಕಲ್ಲಿದ್ದಲು ಗಣಿಗಾರರನ್ನು ಭಾರತೀಯ ಸೇನೆಯ 21 ಅರೆ ವಿಶೇಷ ಪಡೆಗಳ ಸೈನಿಕರು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಗಣಿಗಾರರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಮೇಲೆ ಸೇನೆ ಗುಂಡು ಹಾರಿಸಿತ್ತು. ಇದು ತಪ್ಪಾದ ಗುರುತಿನ ಪ್ರಕರಣ ಎಂದು ಸೇನೆ ಹೇಳಿಕೊಂಡಿದೆ.

ಘಟನೆಯ ನಂತರ, ಕೋಪಗೊಂಡ ನಾಗಾಲ್ಯಾಂಡ್ ಗ್ರಾಮದ ಜನರು ಎರಡು ಭದ್ರತಾ ವಾಹನಗಳನ್ನು ಸುಟ್ಟು ಹಾಕಿದರು. ಸೇನಾ ಪಡೆಗಳಿಂದ ಮತ್ತೊಂದು ಸುತ್ತಿನ ಗುಂಡಿನ ದಾಳಿ ನಡೆಯಿತು. ಇದರಲ್ಲಿ ಕನಿಷ್ಠ ಏಳು ಗ್ರಾಮಸ್ಥರು ಮತ್ತು ಒಬ್ಬ ಭದ್ರತಾ ಸಿಬ್ಬಂದಿ ಮೃತಪಟ್ಟಿದ್ದರು. ಮಾರನೇ ದಿನ ಸೋಮ ಪಟ್ಟಣದಲ್ಲಿ ಭದ್ರತಾ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮತ್ತೊಬ್ಬ ನಾಗಾ ಯುವಕನನ್ನು ಹತ್ಯೆ ಮಾಡಲಾಯಿತು.

ರಾಜ್ಯದ ಪೊಲೀಸ್ ಮುಖ್ಯಸ್ಥರ ನೇತೃತ್ವದ ವಿಶೇಷ ತನಿಖಾ ತಂಡ ಘಟನೆಯ ಬಗ್ಗೆ ತನಿಖೆ ನಡೆಸಿ ದೋಷಾರೋಪಪಟ್ಟಿ ಸಲ್ಲಿಸಿತು. 2022ರ ಮಾರ್ಚ್ 24ರಂದು ಆರೋಪಿತ 30 ಸೇನಾ ಯೋಧರನ್ನು ವಿಚಾರಣೆಗೆ ಒಳಪಡಿಸಲು ಕೇಂದ್ರ ರಕ್ಷಣಾ ಸಚಿವಾಲಯದ ಅನುಮತಿ ಕೋರಿತು.

2022ರ ಮೇ 30ರಂದು 21 ಅರೆ ವಿಶೇಷ ಪಡೆಗಳ 30 ಸಿಬ್ಬಂದಿ ಹೆಸರನ್ನು ಎಸ್ಐಟಿ ನ್ಯಾಯಾಲಯಕ್ಕೆ ತನ್ನ ದೋಷಾರೋಪ ಪಟ್ಟಿಯಲ್ಲಿ ಸಲ್ಲಿಸಿತು. ಗಣಿಗಾರರನ್ನು ಕೊಲ್ಲುವ ಸ್ಪಷ್ಟ ಉದ್ದೇಶದಿಂದ ಗುಂಡು ಹಾರಿಸಲಾಗಿದೆ ಎಂದು ಎಸ್ಐಟಿ ದೂರಿತ್ತು.

ಈ ಸುದ್ದಿ ಓದಿದ್ದೀರಾ? ಲಲಿತ್ ಮೋದಿ ನ್ಯಾಯಾಂಗ ನಿಂದನೆ ಪ್ರಕರಣ; ಸುಪ್ರೀಂ ಕೋರ್ಟ್‌ ಛೀಮಾರಿ

ಸೇನೆಯು ಘಟನೆಯ ಬಗ್ಗೆ ತೀರ್ಮಾನಿಸಲು ಸ್ವತಂತ್ರ ನ್ಯಾಯಾಲಯ ಸ್ಥಾಪಿಸಿತು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿತು. ಆದರೆ, ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಸೇನೆ ಹೇಳಿದೆ.

ನಾಗಾಲ್ಯಾಂಡ್ ಪೊಲೀಸ್ ಎಫ್ಐಆರ್ ಮತ್ತು ಎಸ್ಐಟಿಯ ವರದಿ ರದ್ದುಗೊಳಿಸುವಂತೆ ಆರೋಪಿ ಭದ್ರತಾ ಪಡೆ ಸಿಬ್ಬಂದಿಯ ಪತ್ನಿಯರು ಮನವಿ ಮಾಡಿದ ನಂತರ ಸುಪ್ರೀಂ ಕೋರ್ಟ್ ಕಳೆದ ವರ್ಷ ಜುಲೈ 19ರಂದು ಪ್ರಕರಣಕ್ಕೆ ತಡೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...