ಪಠ್ಯಪುಸ್ತಕಗಳಲ್ಲಿ ಸಣ್ಣ ಬದಲಾವಣೆ ಕುರಿತು ಸೂಚಿಸಬೇಕಿಲ್ಲ: ಎನ್‌ಸಿಇಆರ್‌ಟಿ

Date:

  • ಪ್ರತಿವರ್ಷ ಪಠ್ಯಪರಿಷ್ಕರಣೆ ಸಾಮಾನ್ಯ ಎಂದ ಮಂಡಳಿ
  • 12ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಅನೇಕ ವಿಷಯ ಕಡಿತ

ಶಾಲಾ ಪಠ್ಯಪುಸ್ತಕಗಳಲ್ಲಿ ಸಣ್ಣ ಬದಲಾವಣೆ ಮಾಡುವುದು ಸ್ವಾಭಾವಿಕ. ಅವುಗಳ ಬಗ್ಗೆ ಸೂಚನೆ ನೀಡಬೇಕಾಗಿಲ್ಲ ಎಂದು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಹೇಳಿದೆ.

ಮಂಡಳಿ ನೀಡುವ ಸಿಬಿಎಸ್‌ಇ 12ನೇ ತರಗತಿಯ ಪ್ರಸಕ್ತ ವರ್ಷದ ಇತಿಹಾಸ ಪಠ್ಯದಲ್ಲಿ ನಾಥೂರಾಮ್‌ ಗೋಡ್ಸೆ, ಹಿಂದೂ ಭಯೋತ್ಪಾದಕರ ಪಾತ್ರ, 2002ರ ಗುಜರಾತ್‌ ಹಿಂಸಾಚಾರ ಕುರಿತ ಕೆಲವು ವಾಕ್ಯಗಳನ್ನು ಕಡಿತಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದವು.

ಈ ಕುರಿತು ಮಂಡಳಿ ತನ್ನ ಅಧಿಕೃತ ಜಾಲತಾಣದಲ್ಲಿ ಭಾನುವಾರ (ಏಪ್ರಿಲ್‌ 16) ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, “ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಉಂಟಾಗುವ ಯಾವುದೇ ಗೊಂದಲ ತಪ್ಪಿಸಲು ಸಣ್ಣ ಅಳಿಸುವಿಕೆಗಳನ್ನು ಸೂಚಿಸದ ಕಾರಣ ಕಳೆದ ವರ್ಷ ಪ್ರಕಟಿಸಿದ ಅಳಿಸುವಿಕೆಗಳ ಅಧಿಕೃತ ಪಟ್ಟಿಯಲ್ಲಿ ತೆರವುಗೊಳಿಸಿದ ಭಾಗಗಳು ಕಾಣಿಸಿಕೊಂಡಿಲ್ಲ” ಎಂದು ಮಂಡಳಿ ಪ್ರಕಟಣೆಯಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರಿಷ್ಕರಿಸಿದ ಪಠ್ಯಪುಸ್ತಕಗಳು ಮುದ್ರಣದಲ್ಲಿದ್ದಾಗ ಪ್ರತಿ ಪುಸ್ತಕದ ಪರಿಷ್ಕರಣೆಯ ವಿವರಗಳನ್ನು ಪಠ್ಯಪುಸ್ತಕದೊಂದಿಗೆ ಪಿಡಿಎಫ್ ರೂಪದಲ್ಲಿ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪಠ್ಯಪುಸ್ತಕಗಳ ಮರುಮುದ್ರಣ ಕಾರ್ಯ ಪ್ರತಿ ವರ್ಷ ನಡೆಯುವ ನಿಯಮಿತ ಪ್ರಕ್ರಿಯೆ” ಎಂದು ಎನ್‌ಸಿಇಆರ್‌ಟಿ ಹೇಳಿಕೆಯಲ್ಲಿ ತಿಳಿಸಿದೆ.

“ಪರಿಷ್ಕರಣೆಯ ಹಂತದಲ್ಲಿ ಪಠ್ಯದಲ್ಲಿನ ಒಂದು ವಾಕ್ಯ, ಪದ, ಅನೇಕ ವಾಕ್ಯಗಳನ್ನು ತೆರವುಗೊಳಿಸಲಾಗಿದೆ. ಇವುಗಳನ್ನು ಪರಿಷ್ಕರಣೆಯ ಪಟ್ಟಿಯಲ್ಲಿ ತಿಳಿಸಿಲ್ಲ. ಪಠ್ಯಪುಸ್ತಕಗಳ ಮರುಮುದ್ರಣದಲ್ಲಿ ಇದು ಸಾಮಾನ್ಯ” ಎಂದು ಮಂಡಳಿ ಹೇಳಿಕೆ ತಿಳಿಸಿದೆ.

“2022-23ರ ಶೈಕ್ಷಣಿಕ ವರ್ಷದಲ್ಲಿ ಪಠ್ಯಪುಸ್ತಕಗಳ ಪರಿಷ್ಕರಿಸಿದ ನಂತರ ಪಠ್ಯದಲ್ಲಿ ಯಾವ ವಿಷಯವನ್ನೂ ತೆರವುಗೊಳಿಸಿಲ್ಲ. ಪಠ್ಯಪುಸ್ತಕಗಳಲ್ಲಿ ಸಣ್ಣ ಬದಲಾವಣೆ ಹಳೆಯದಾದ, ಹೆಚ್ಚಿನ ಮಾಹಿತಿ ಒಳಗೊಂಡಿತ್ತು. ವಿದ್ಯಾರ್ಥಿಗಳ ಅಧ್ಯಯನ ದೃಷ್ಟಿಯಿಂದ ಇವುಗಳನ್ನು ಸರಳಗೊಳಿಸಲಾಗಿದೆ” ಎಂದು ಎನ್‌ಸಿಇಆರ್‌ಟಿ ತನ್ನ ಕ್ರಮವನ್ನು ಸಮರ್ಥಿಸಿಕೊಂಡಿದೆ.

ಈ ಸುದ್ದಿ ಓದಿದ್ದೀರಾ? ಮಹಾರಾಷ್ಟ್ರ ಸರ್ಕಾರ ಸಮಾರಂಭದಲ್ಲಿ ಬಿಸಿಲಿನ ಝಳಕ್ಕೆ 11 ಮಂದಿ ಸಾವು

2022ರ ಜೂನ್‌ನಲ್ಲಿ ಮರುಮುದ್ರಣ ಪುಸ್ತಕಗಳಲ್ಲಿ ಕಡಿತಗೊಳಿಸಿದ ಭಾಗಗಳನ್ನು ಎನ್‌ಸಿಇಆರ್‌ಟಿ ಪ್ರಕಟಿಸಿತ್ತು. ಆ ಪಠ್ಯಪುಸ್ತಕಗಳು ಇತ್ತೀಚೆಗೆ ಮಾರುಕಟ್ಟೆಗೆ ಬಂದಿವೆ.

ಆದರೆ ಮಹಾತ್ಮ ಗಾಂಧಿ ಹಾಗೂ ಇತರ ವಿಷಯಗಳ ಅಳಿಸುವಿಕೆಯ ಬಗ್ಗೆ ಮಂಡಳಿ ಸೂಚನೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...