ಜೂನಿಯರ್‌ ಇಂಜಿನಿಯರ್‌ ಕಪಾಳಕ್ಕೆ ಬಾರಿಸಿದ ಬಿಜೆಪಿ ಬೆಂಬಲಿತ ಶಾಸಕಿ

Date:

ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ವೇಳೆ ಶಾಸಕಿಯೊಬ್ಬರು ಜೂನಿಯರ್‌ ಇಂಜಿನಿಯರ್‌ ಕಪಾಳಕ್ಕೆ ಬಾರಿಸಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಶಾಸಕಿಯ ನಡೆ ಭಾರೀ ವಿವಾದಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದ ಮೀರಾ ಭಯಂದರ್ ಮುನ್ಸಿಪಲ್ ಕಾರ್ಪೊರೇಷನ್ (ಎಂಬಿಎಂಸಿ) ವ್ಯಾಪ್ತಿಯ ವಾರ್ಡ್ ಸಂಖ್ಯೆ 6ರಲ್ಲಿ ಮಂಗಳವಾರ, ಜೂನಿಯರ್ ಇಂಜಿನಿಯರ್ ಶುಭಂ ಪಾಟೀಲ್ ನೇತೃತ್ವದಲ್ಲಿ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ ಸ್ಥಳಕ್ಕೆ ಬಂದ ಮೀರಾ-ಭಯಂದರ್ ಶಾಸಕಿ ಗೀತಾ ಜೈನ್ ಅವರು ಕಾರ್ಯಾಚಾರಣೆ ಕುರಿತು ಮಾಹಿತಿ ಪಡೆದಿದ್ದಾರೆ. ಆದರೆ ಇಂಜಿನಿಯರ್‌ ಬಳಿ ಮಾತನಾಡುತ್ತಿರುವಾಗಲೇ ಏಕಾಏಕಿ ಕೋಪಗೊಂಡ ಶಾಸಕಿ, ಶುಭಂ ಪಾಟೀಲ್‌ರನ್ನು ದೂಡಿದ ಬಳಿಕ ಕಪಾಳಕ್ಕೆ ಬಾರಿಸಿದ್ದಾರೆ.

ಅಕ್ರಮ ಕಟ್ಟಡ ನೆಲಸಮ ಕಾರ್ಯಾಚರಣೆ ವೇಳೆ ಆರು ತಿಂಗಳ ಪುಟ್ಟ ಮಗುವನ್ನು ಹೊಂದಿದ್ದ ಕುಟುಂಬವೊಂದು ವಾಸವಾಗಿದ್ದ ಜೋಪಡಿಯನ್ನು ತೆರವುಗೊಳಿಸಲಾಗಿತ್ತು. ಇದೇ ವೇಳೆ ಅನೇಕ ವಯಸ್ಸಾದವರು ಸೇರಿದಂತೆ ನಿವಾಸಿಗಳನ್ನು ಬಲವಂತವಾಗಿ ಹೊರಹಾಕಲಾಗಿತ್ತು ಎಂದು ಆರೋಪಿಸಲಾಗಿದೆ. ಈ ರೀತಿಯ ಅಮಾನವೀಯ ವರ್ತನೆಯಿಂದ ಕೋಪಗೊಂಡ ಗೀತಾ ಜೈನ್, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಳೆಗಾಲದಲ್ಲಿ ವಸತಿ ಕಟ್ಟಡಗಳನ್ನು ಕೆಡವುದರ ವಿರುದ್ಧ ಸರ್ಕಾರ ನಿರ್ಣಯ ಅಂಗೀಕರಿಸಿದ್ದರೂ ಸಹ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ ಎಂದು ಶಾಸಕಿ ಆರೋಪಿಸಿದ್ದಾರೆ. ಶಾಸಕಿಯ ಕೋಪಕ್ಕೆ ತುತ್ತಾದ ಜೂನಿಯರ್ ಇಂಜಿನಿಯರ್ ಶುಭಂ ಪಾಟೀಲ್, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ..

ಪಶ್ಚಾತ್ತಾಪವಿಲ್ಲ ಎಂದ ಶಾಸಕಿ ಗೀತಾ ಜೈನ್

ಘಟನೆಯು ವಿವಾದವಾಗುತ್ತಲೇ ಸ್ಪಷ್ಟನೆ ನೀಡಿರುವ ಶಾಸಕಿ, ʻಮಾಹಿತಿ ಕೇಳಿದ ವೇಳೆ ಜೂನಿಯರ್‌ ಇಂಜಿನಿಯರ್‌ ನಗುತ್ತಿದ್ದರು. ಹೀಗಾಗಿ  ಕಪಾಳಮೋಕ್ಷ ಮಾಡಿದ್ದೇನೆ. ಈ ಕುರಿತು ‘ನನಗೆ ಯಾವುದೇ ವಿಷಾದವಿಲ್ಲ’ ಎಂದು ಬಿಜೆಪಿಗೆ ಬೆಂಬಲ ನೀಡಿರುವ ಸ್ವತಂತ್ರ ಶಾಸಕಿ ಗೀತಾ ಜೈನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...