ಥಾಣೆ ಹತ್ಯೆ ಪ್ರಕರಣ | ಎಚ್‌ಐವಿ ಸೋಂಕಿತನಾಗಿದ್ದ ಹಂತಕ; ಮಹಿಳೆಯದು ಆತ್ಮಹತ್ಯೆ ಎಂದು ಹೇಳಿಕೆ!

Date:

ದೆಹಲಿಯ ಶ್ರದ್ದಾ ವಾಕರ್ ಹತ್ಯೆ ಪ್ರಕರಣದ ರೀತಿಯಲ್ಲಿಯೇ ಮಹಾರಾಷ್ಟ್ರದ ಥಾಣೆಯಲ್ಲಿ ಮಹಿಳೆಯೊಬ್ಬರನ್ನು ಬರ್ಬರವಾಗಿ ತುಂಡು ತುಂಡಾಗಿ ಕತ್ತರಿಸಿ ಹತ್ಯೆ ಮಾಡಿದ ಆರೋಪಿಯ ಬಗ್ಗೆ ಹಲವು ಆಘಾತಕಾರಿ ಮಾಹಿತಿ ಬೆಳಕಿಗೆ ಬರುತ್ತಿವೆ.

ಥಾಣೆ ಅಪಾರ್ಟ್‌ಮೆಂಟ್‌ನಲ್ಲಿ ಸರಸ್ವತಿ ವೈದ್ಯ ಅವರನ್ನು ಕೊಲೆ ಮಾಡಿದ ಆರೋಪಿ ಮನೋಜ್ ರಮೇಶ್ ಸಾನೆ(56)ಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು ವಿಚಾರಣೆ ವೇಳೆ ತಾನು 2008ರಿಂದ ಎಚ್‌ಐವಿ-ಪಾಸಿಟಿವ್ ನಿಂದ ಬಳಲುತ್ತಿದ್ದು, ಅಂದಿನಿಂದ ತಾನು ಔಷಧಿ ತೆಗೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದಾನೆ. ಈ ಹಿಂದೆ ಆತ ಅಪಘಾತಕ್ಕೆ ಒಳಗಾದಾಗ ಚಿಕಿತ್ಸೆಯ ಸಮಯದಲ್ಲಿ ಸೋಂಕಿತ ರಕ್ತವನ್ನು ಬಳಸಿದ್ದರಿಂದ ಎಚ್‌ಐವಿ ರೋಗಕ್ಕೆ ತುತ್ತಾಗಿದ್ದ. ಅಲ್ಲದೆ 32 ವರ್ಷದ ಸರಸ್ವತಿ ವೈದ್ಯಯೊಂದಿಗೆ ದೈಹಿಕ ಸಂಬಂಧವನ್ನು ಹೊಂದಿರಲಿಲ್ಲ. ಅವಳು “ತನ್ನ ಮಗಳಂತೆ” ಎಂದು ಆರೋಪಿ ತಿಳಿಸಿದ್ದಾನೆ.

ಸರಸ್ವತಿ ವೈದ್ಯ ತುಂಬಾ ಅನುಮಾನಿಸುವ ಸ್ವಭಾವದವಳಾಗಿದ್ದಳು. ಸಾನೆ ತಡವಾಗಿ ಮನೆಗೆ ಹಿಂದಿರುಗಿದಾಗಲೆಲ್ಲಾ ವಿಶ್ವಾಸದ್ರೋಹ ಮಾಡುತ್ತಿದ್ದಾನೆ ಎಂದು ಶಂಕಿಸುತ್ತಿದ್ದಳು. ಆಕೆ 10 ನೇ ತರಗತಿಯ ಎಸ್‌ಎಸ್‌ಸಿ ಪರೀಕ್ಷೆಗೆ ಹಾಜರಾಗಲು ಯೋಜಿಸುತ್ತಿದ್ದಳು. ಹೀಗಾಗಿ ಸಾನೆ ಅವಳಿಗೆ ಗಣಿತ ಕಲಿಸುತ್ತಿದ್ದನು. ಏಳನೇ ಮಹಡಿಯ ಫ್ಲಾಟ್‌ನ ಗೋಡೆಯೊಂದರ ಮೇಲೆ ಗಣಿತದ ಸಮೀಕರಣಗಳನ್ನು ಬರೆದಿರುವ ಬೋರ್ಡ್ ಅನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯು ಸರಸ್ವತಿಯನ್ನು ಭೇಟಿಯಾದಾಗ ಆಕೆ ಪಡಿತರ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು. ಆಕೆಯ ಬಳಿ ಇಂಡಸ್ಟ್ರಿಯಲ್ ಟ್ರೈನಿಂಗ್ ಇನ್‌ಸ್ಟಿಟ್ಯೂಟ್ ಸರ್ಟಿಫಿಕೇಟ್ ಇರುವುದು ಇದೀಗ ಬೆಳಕಿಗೆ ಬಂದಿದೆ. ಸರ್ಟಿಫಿಕೇಟ್ ಇದ್ದರೂ ಯೋಗ್ಯವಾದ ಕೆಲಸ ಸಿಗದ ಕಾರಣ ಸಾನೆ 10 ವರ್ಷಗಳಿಂದ ಪಿಡಿಎಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದಳು. ಆದರೆ ಮನೋಜ್ ಸಾನೆ ಆಕೆ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದು ತಾನು ಕೊಲೆ ಮಾಡಿಲ್ಲ ಎಂದು ಹೇಳಿದ್ದಾನೆ.

ಈ ಸುದ್ದಿ ಓದಿದ್ದೀರಾ? ಸಹಜೀವನ ಸಂಗಾತಿಯನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ!

ಆರೋಪಿಯು ಕೆಲವು ದಿನಗಳ ಹಿಂದೆ ಸುಮಾರು ಸಮಯದಿಂದ ಮಲಗಿದ್ದಳು. ತುಂಬ ಹೊತ್ತು ಆಕೆ ಎದ್ದೇಳಲಿಲ್ಲ. ನಂತರ ತಾನು ಆಕೆಯ ನಾಡಿಮಿಡಿತವನ್ನು ಪರೀಕ್ಷಿಸಿದಾಗ ಅವಳು ಸತ್ತಿರುವುದನ್ನು ತಿಳಿದ ಬಳಿಕ ಪೊಲೀಸರ ಕ್ರಮಕ್ಕೆ ಹೆದರಿ ದೇಹವನ್ನು ಕಾಣದಂತೆ ಈ ರೀತಿ ಮಾಡಿರುವುದಾಗಿ ವಿಚಾರಣೆ ವೇಳೆ ಹೇಳಿಕೊಂಡಿದ್ದಾನೆ.

ಆರೋಪಿ ರಮೇಶ್ ಸಾನೆಯು ಸರಸ್ವತಿ ವೈದ್ಯಳ ದೇಹವನ್ನು ಮರ ಕತ್ತರಿಸುವ ಯಂತ್ರದಿಂದ ಸಣ್ಣ ಭಾಗಗಳಾಗಿ ಕತ್ತರಿಸಿ ಅದರ ಭಾಗಗಳನ್ನು ಪ್ರೆಶರ್ ಕುಕ್ಕರ್‌ನಲ್ಲಿ ಕುದಿಸಿ ಗ್ಯಾಸ್‌ನಲ್ಲಿ ಹುರಿದು ಅವುಗಳನ್ನು ಸುಲಭವಾಗಿ ವಿಲೇವಾರಿ ಮಾಡಿದ್ದಾನೆ. ಗುರುವಾರ ಪೊಲೀಸರು ಅಡುಗೆಮನೆಯಲ್ಲಿ ಮೂರು ಬಕೆಟ್‌ಗಳಲ್ಲಿ ರಕ್ತ ತುಂಬಿರುವುದನ್ನು ಪತ್ತೆ ಮಾಡಿದ್ದಾರೆ. ಬಕೆಟ್‌ಗಳಲ್ಲಿ ದೇಹದ ಸಣ್ಣ ತುಂಡುಗಳಿದ್ದವು ಎನ್ನಲಾಗಿದೆ.

ಅಡುಗೆ ಮನೆಯಿಂದ ಸಂಗ್ರಹಿಸಲಾದ ದೇಹದ ಭಾಗಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಗಾಗಿ ಸರ್ ಜೆಜೆ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಯಂತ್ ಬಜ್ಬಲೆ ಹೇಳಿರುವುದಾಗಿ ಐಇ ವರದಿ ತಿಳಿಸಿದೆ.

ಪೊಲೀಸರು ವೈದ್ಯಕೀಯ ತಜ್ಞರ ಸಹಾಯವನ್ನು ಪಡೆಯುತ್ತಿದ್ದಾರೆ ಮತ್ತು ದೇಹದ ಯಾವ ಭಾಗಗಳು ಎಲ್ಲಿ ಕಾಣೆಯಾಗಿವೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಸ್ಥಳೀಯ ಪೊಲೀಸರು, ಸಾನೆಯನ್ನು ಥಾಣೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೂನ್ 16 ರವರೆಗೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...