ಶಾಸಕಿ ಸರೋಜ್ ಅಹಿರೆ ಅಜಿತ್ ಪವಾರ್ ಬಣ ಸೇರ್ಪಡೆ

Date:

  • ಅಹಿರೆ ಮೂಲಕ ನಾಸಿಕ್‌ನ ಆರು ಶಾಸಕರು ಅಜಿತ್ ಪವಾರ್ ಬಣ ಸೇರ್ಪಡೆ
  • ಏಕನಾಥ್ ಶಿಂಧೆ ಸರ್ಕಾರದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರ

ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಶಾಸಕಿ ಸರೋಜ್ ಅಹಿರೆ ಅವರು ಶನಿವಾರ (ಜುಲೈ 15) ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ಬಣ ಸೇರ್ಪಡೆಯಾಗಿದ್ದಾರೆ.

ಆ ಮೂಲಕ ನಾಸಿಕ್ ಜಿಲ್ಲೆಯ ಆರು ಶಾಸಕರು ಎನ್‌ಸಿಪಿಯ ಅಜಿತ್ ಪವಾರ್ ಪಾಳಯ ಸೇರಿದಂತಾಗಿದೆ.

ಅಹಿರೆ ಅವರು ನಾಸಿಕ್‌ನ ಡಿಯೋಲಲಿ ಕ್ಷೇತ್ರದ ಶಾಸಕಿಯಾಗಿದ್ದಾರೆ. ಎನ್‌ಸಿಪಿ ಎರಡು ಬಣಗಳಾಗಿ (ಶರದ್ ಪವಾರ್ ಬಣ ಮತ್ತು ಅಜಿತ್ ಪವಾರ್ ಬಣ) ವಿಭಜನೆಯಾದ ದಿನದಿಂದಲೂ ಅವರು ಯಾವುದೇ ಪಕ್ಷಕ್ಕೆ ಬಹಿರಂಗವಾಗಿ ತಮ್ಮ ಬೆಂಬಲ ಘೋಷಿಸಿರಲಿಲ್ಲ. ಇದೀಗ ಅಧಿಕೃತವಾಗಿ ಅಜಿತ್ ಪವಾರ್ ಬಣ ಸೇರಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಭಿವೃದ್ಧಿಗಾಗಿ ಅಧಿಕಾರದಲ್ಲಿ ಉಳಿಯುವುದು ಅವಶ್ಯಕವಾಗಿದೆ. ನಾನು ಅಜಿತ್ ದಾದಾ ಜೊತೆಗಿದ್ದೇನೆ. ಈ ಹಿಂದೆ ನನ್ನ ಕ್ಷೇತ್ರದ ಅಭಿವೃದ್ಧಿಗೆ ಅಜಿತ್ ಪವಾರ್ ಅವರು ಸಹಕಾರ ನೀಡಿದ್ದರು. ಭವಿಷ್ಯದಲ್ಲಿಯೂ ಇದೇ ರೀತಿ ಮುಂದುವರಿಯುವಂತೆ ಅವರಲ್ಲಿ ಕೇಳುತ್ತೇನೆ” ಎಂದು ಅಹಿರೆ ಹೇಳಿದ್ದಾರೆ.

ಶುಕ್ರವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಅಜಿತ್ ಪವಾರ್ ಅವರು ನಾಸಿಕ್‌ಗೆ ಬಂದಿದ್ದು, ಈ ವೇಳೆ ಅವರನ್ನು ಸರೋಜ್ ಅಹಿರೆ ಸ್ವಾಗತಿಸಿದ್ದರು.

ಸರೋಜ್ ಅಹಿರೆ ಅವರ ಬೆಂಬಲದೊಂದಿಗೆ ನಾಸಿಕ್ ಜಿಲ್ಲೆಯ ಎಲ್ಲ ಆರು ಎನ್ಸಿಪಿ ಶಾಸಕರು (ಛಗನ್ ಭುಜಬಲ್, ನಿತಿನ್ ಪವಾರ್, ಮಾಣಿಕ್ರಾವ್ ಕೊಕಾಟೆ, ನರಹರಿ ಜಿರ್ವಾಲ್, ದಿಲೀಪ್ ಬಣಕಾರ್ ಮತ್ತು ಸರೋಜ್ ಅಹಿರೆ) ಅಜಿತ್ ಪವಾರ್ ಪರ ಬಾವುಟ ಬೀಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಆಫ್ರಿಕಾದಿಂದ ಕರೆತಂದಿದ್ದ 8ನೇ ಚೀತಾ ಸಾವು

ಜುಲೈ ಆರಂಭದಲ್ಲಿ ಎನ್‌ಸಿಪಿ ಪಕ್ಷದಲ್ಲಿ ರಾಜಕೀಯ ಕೋಲಾಹಲ ಉಂಟಾಗಿ ಶರದ್ ಪವಾರ್ ವಿರುದ್ಧ ಅಜಿತ್ ಪವಾರ್ ಬಂಡಾಯವೆದ್ದಿದ್ದರು. ಏಕನಾಥ್ ಶಿಂದೆ ಸರ್ಕಾರಕ್ಕೆ ತಮ್ಮ ಬೆಂಬಲವನ್ನು ಘೋಷಿಸುವ ಮೂಲಕ ಶಿವಸೇನೆ (ಶಿಂದೆ ಬಣ) ಮತ್ತು ಬಿಜೆಪಿಯೊಂದಿಗೆ ಕೈಜೋಡಿಸಿದ್ದರು.

ಎನ್‌ಸಿಪಿ ಇಬ್ಬಾಗವಾದ ಬೆನ್ನಲ್ಲೇ ಶಾಸಕರ ವಿಶ್ವಾಸ ಪಡೆದುಕೊಳ್ಳಲು ಎನ್ಸಿಪಿಯ ಎರಡು ಬಣಗಳು ಪೈಪೋಟಿಯಲ್ಲಿ ಬಿದ್ದಿದ್ದವು. ಏಕನಾಥ್ ಶಿಂಧೆ ಸರ್ಕಾರದಲ್ಲಿ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...