ಮೊಬೈಲ್ ಲೋನ್ ಆ್ಯಪ್ ಸುಳಿ: ಪತ್ನಿಯ ‘ಅಶ್ಲೀಲ’ ಫೋಟೋ ವೈರಲ್; ಪತಿ ಆತ್ಮಹತ್ಯೆ

Date:

ಮೊಬೈಲ್ ಲೋನ್ ಆ್ಯಪ್ ಮೂಲಕ ಪಡೆದುಕೊಂಡ ಎರಡು ಸಾವಿರ ರೂಪಾಯಿ ಮೊತ್ತದ ಸಾಲ, ಪ್ರೀತಿಸಿ ಮದುವೆಯಾಗಿದ್ದ ಯುವ ದಂಪತಿಯ ಪೈಕಿ ಪತಿಯ ಬಲಿ ಪಡೆದಿದೆ. ಆಂಧ್ರಪ್ರದೇಶದಲ್ಲಿ ನಡೆದಿರುವ ದಾರುಣ ಪ್ರಕರಣವಿದು.

21 ವರ್ಷದ ನರೇಂದ್ರ ಮತ್ತು 24 ವರ್ಷ ವಯಸ್ಸಿನ ಅಖಿಲಾ ಮದುವೆಯಾಗಿ ಎರಡು ತಿಂಗಳೂ ಕಳೆದಿಲ್ಲ. ಮದುವೆಗೆ ಮುನ್ನ ಪಡೆದಿದ್ದ 2,000 ರೂಪಾಯಿ ಮೊಬೈಲ್ ಆ್ಯಪ್ ಸಾಲದ ವಸೂಲಿಗಾಗಿ ಲೋನ್ ಏಜೆಂಟರು ನರೇಂದ್ರನ ಹಿಂದೆ ಬಿದ್ದಿದ್ದರು. ನರೇಂದ್ರನ ಪತ್ನಿ ಅಖಿಲಾ ಫೋಟೋ ಸಂಪಾದಿಸಿ, ಅದನ್ನು ನಗ್ನಚಿತ್ರವಾಗಿ ಬದಲಾಯಿಸಿದರು. ಫೋಟೋದ ಕೆಳಗೆ ‘ರೇಟು’ ಅಂತ ಮೊತ್ತವೊಂದನ್ನು ನಮೂದಿಸಿದರು.

ನರೇಂದ್ರನ ಫೋನಿನಲ್ಲಿದ್ದ ಎಲ್ಲ ನಂಬರುಗಳಿಗೂ ಕಳಿಸಿದರು. ಅಖಿಲಾಗೆ ಕರೆಗಳು ಬರತೊಡಗಿದವು. ನಡೆದದ್ದೇನೆಂದು ಆಕೆಗೆ ತಿಳಿಯಿತು. 2,000 ರೂಪಾಯಿ ಸಾಲವನ್ನು ಮರಳಿಸಿದರು. ಆದರೂ ಆಕೆಯ ಫೋಟೋ ಹಂಚುವುದನ್ನು ನಿಲ್ಲಿಸಲಿಲ್ಲ ಏಜೆಂಟರು. ಪತ್ನಿಯನ್ನು ಬಹುವಾಗಿ ಪ್ರೀತಿಸುತ್ತಿದ್ದ ನರೇಂದ್ರ, ಸೂಕ್ಷ್ಮ ಸ್ವಭಾವದವ. ಅಪಮಾನ ತಾಳಲಾಗದೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಹಾಯಕ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಅಖಿಲಾ ಮನೆಗೆ ಧಾವಿಸುವ ವೇಳೆಗೆ ತಡವಾಗಿತ್ತು. ಪೊಲೀಸರು ಲೋನ್ ಆ್ಯಪ್ ಮತ್ತು ಏಜೆಂಟರ ಪತ್ತೆಯಲ್ಲಿ ತೊಡಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಎರಡು ದಿನಗಳ ಹಿಂದೆಯಷ್ಟೇ ಇಂತಹುದೇ ಸಾಲ (15 ಸಾವಿರ ರೂಪಾಯಿ) ಪಡೆದಿದ್ದ ಆಂಧ್ರದ ಯುವತಿಯೊಬ್ಬಳು ಆತ್ಮಹತ್ಯೆಗೆ ಮುಂದಾಗಿದ್ದಳು. ಶ್ರೀಶೈಲಂ ಜಲಾಶಯಕ್ಕೆ ಧುಮುಕಿದ್ದಳು. ಜಲಾಶಯಕ್ಕೆ ಕಾವಲಿದ್ದ ಪೊಲೀಸರು ಆಕೆಯನ್ನು ರಕ್ಷಿಸಿ ಚಿಕಿತ್ಸೆ ಕೊಡಿಸಿ ಕಾಪಾಡಿದ್ದಾರೆ. 15 ಸಾವಿರ ಸಾಲಕ್ಕೆ ಪ್ರತಿಯಾಗಿ 60 ಸಾವಿರ ರೂಪಾಯಿಯನ್ನು ಪಾವತಿಸಿದ್ದರೂ, ಏಜೆಂಟರ ಕಾಟ ನಿಂತಿರಲಿಲ್ಲ. ಆಕೆಯ ಫೋಟೋವನ್ನು ನಗ್ನವಾಗಿಸಿ ವೈರಲ್ ಮಾಡುವ ಬೆದರಿಕೆ ಹಾಕಿದ್ದರು.

ಇದನ್ನು ಓದಿದ್ದೀರಾ? ಗದಗ | ಅಧಿಕಾರಿಗಳ ನಿರ್ಲಕ್ಷ್ಯ: ಉಳ್ಳಾಗಡ್ಡಿ ಕಣವಾಗಿ ಮಾರ್ಪಟ್ಟ ಇಟಗಿ ಬಸ್ ನಿಲ್ದಾಣ!

ಮೊಬೈಲ್ ಆ್ಯಪ್ ಲೋನ್‌ಗಳ ಜಾಲಕ್ಕೆ ಬೀಳದಿರಿ, ಖಾಸಗಿ ಮಾಹಿತಿಯನ್ನು ಅವುಗಳೊಂದಿಗೆ ಹಂಚಿಕೊಳ್ಳಬೇಡಿ. ಬೆದರಿಕೆ ಬಂದರೆ ಪೊಲೀಸರನ್ನು ಸಂಪರ್ಕಿಸಿ ಎಂದು ಆಂಧ್ರ ಪೊಲೀಸರು ಸಾರ್ವಜನಿಕರನ್ನು ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...