ಮೋದಿ ಪದವಿ ಪ್ರಕರಣ: ಕೇಜ್ರಿವಾಲ್ ವಿರುದ್ಧದ ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಸುಪ್ರೀಂ ತಡೆ

Date:

ಮೋದಿ ಪದವಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಸೆರೆಮನೆ ವಾಸದಲ್ಲಿರುವ ಎಎಪಿ ಸಂಸದ ಸಂಜಯ್‌ ಸಿಂಗ್‌ ವಿರುದ್ಧದ ಕ್ರಿಮಿನಲ್‌ ಮೊಕದ್ದಮೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

ಬಿ ಆರ್‌ ಗವಾಯಿ ಹಾಗೂ ಸಂದೀಪ್ ಮೆಹತಾ ಅವರಿದ್ದ ಪೀಠವು ಸಂಜಯ್‌ ಸಿಂಗ್ ಅವರು ವಿಚಾರಣೆಯನ್ನು ಗುಜರಾತ್‌ ಹೊರಗೆ ನಡೆಸುವಂತೆ ಕೋರಿದ್ದ ಮನವಿಯನ್ನು ಪರಿಗಣಿಸಿ ನಾಲ್ಕು ವಾರಗಳ ಕಾಲ ತಡೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಗುಜರಾತ್‌ ವಿವಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.

ವಿಚಾರಣಾ ನ್ಯಾಯಾಲಯವು ಎಎಪಿ ನಾಯಕರ ವಿರುದ್ಧದ ಸಮನ್ಸ್‌ಅನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಮನವಿಯನ್ನು ನಾಲ್ಕು ವಾರಗಳಲ್ಲಿ ನಿರ್ಧರಿಸುವಂತೆ ಗುಜರಾತ್ ಹೈಕೋರ್ಟ್‌ಗೆ ಪೀಠವು ನಿರ್ದೇಶಿಸಿ ಅರ್ಜಿಯನ್ನು ವಜಾಗೊಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸದ ಸಂಜಯ್‌ ಸಿಂಗ್ ಅವರು ಡಿಸೆಂಬರ್‌ 28ರಂದು ವಿಚಾರಣಾ ನ್ಯಾಯಾಲಯ ಸಮನ್ಸ್ ನೀಡಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಪ್ರಸ್ತುತ ಸಂಸದರು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅಕ್ಟೋಬರ್‌ 4 ರಿಂದ ಬಂಧಿತರಾಗಿ ಸೆರೆಮನೆಯಲ್ಲಿದ್ದಾರೆ.

ಅರ್ಜಿದಾರರ ಪರವಾಗಿ ಕಳೆದ ಬುದವಾರದಂದು ಹಾಜರಾಗಿದ್ದ ಹಿರಿಯ ನ್ಯಾಯವಾದಿ ಅಭಿಷೇಕ್ ಮನು ಸಿಂಘ್ವಿ, ಮಾನನಷ್ಟ ಮೊಕದ್ದಮೆಯು ಸಂಸದರನ್ನು ಅಪರಾಧಿಯನ್ನು ತೀರ್ಮಾನಿಸಿ ಅನರ್ಹರೆಂದು ಘೋಷಿಸುವ ಉದ್ದೇಶ ಹೊಂದಿದೆ. ಈ ಕಾರಣದಿಂದ ಪ್ರಕರಣಕ್ಕೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8(3) ಸೆಕ್ಷನ್ ಅಡಿ ಶಾಸಕ/ಸಂಸದ ಎರಡು ಅಥವಾ ಎರಡಕ್ಕಿಂತ ಹೆಚ್ಚು ಅವಧಿ ಜೈಲು ಶಿಕ್ಷೆ ಅನುಭವಿಸಿದರೆ ಶಿಕ್ಷೆಯ ಅವಧಿ ಮುಗಿದ ನಂತರದ 6 ವರ್ಷಗಳ ಕಾಲ ಅನರ್ಹರೆಂದು ಘೋಷಿಸಲಾಗುತ್ತದೆ.

ಪ್ರಕರಣದಲ್ಲಿ ದೂರುದಾರರಾಗಿರುವ ಗುಜರಾತ್‌ ವಿವಿ ವಿರುದ್ಧ ಸಂಜಯ್ ಸಿಂಗ್‌ ಏನನ್ನು ಹೇಳಿಲ್ಲವೆಂದು ಸಿಂಘ್ವಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದರು.

2016ರಲ್ಲಿ ಕೇಂದ್ರ ಮಾಹಿತಿ ಆಯೋಗ ಪ್ರಧಾನಿ ನರೇಂದ್ರ ಮೋದಿಯವರ ಪದವಿ ವಿವರಗಳನ್ನು ಕೇಜ್ರಿವಾಲ್‌ ಅವರಿಗೆ ಒದಗಿಸುವಂತೆ ನೀಡಿದ್ದ ನಿರ್ದೇಶನವನ್ನು ಗುಜರಾತ್ ಹೈಕೋರ್ಟ್ ಮಾರ್ಚ್‌ 21ರಂದು ರದ್ದುಪಡಿಸಿತ್ತು. ಕೇಂದ್ರ ಮಾಹಿತಿ ಆಯೋಗವು ಮಾಹಿತಿ ಹಕ್ಕು ಕಾಯ್ದೆಯಡಿ ಬರುವ ಉನ್ನತ ಮೇಲ್ಮನವಿ ಸಂಸ್ಥೆಯಾಗಿದೆ.

ಈ ತೀರ್ಪಿನ ನಂತರ ಗುಜರಾತ್‌ ವಿವಿಯು ಅರವಿಂದ್ ಕೇಜ್ರಿವಾಲ್ ಹಾಗೂ ಎಎಪಿ ಸಂಸದ ಸಂಜಯ್ ಸಿಂಗ್‌ ವಿರುದ್ಧ ಮೋದಿ ಶೈಕ್ಷಣಿಕ ಅರ್ಹತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾರಣಕ್ಕಾಗಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು 1978ರಲ್ಲಿ ದೆಹಲಿ ವಿವಿಯಿಂದ ಬಿಎ ಪದವಿ ಹಾಗೂ 1983ರಲ್ಲಿ ಎಂಎ ಪದವಿ ಪಡೆದಿರುವುದಾಗಿ ಬಿಜೆಪಿ ಹಕ್ಕು ಸಾಧಿಸುತ್ತ ಬಂದಿದೆ. ಆದರೆ ಎಎಪಿ ಪ್ರಧಾನಿ ಯಾವುದೇ ಪದವಿಗಳನ್ನು ಪಡೆದಿಲ್ಲ ಎಂದು ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...