ವಾರಣಾಸಿಯಿಂದ ಗೆಲುವು ಸಾಧಿಸಿದ ನರೇಂದ್ರ ಮೋದಿ: ಗೆಲುವಿನ ಅಂತರದಲ್ಲಿ ಭಾರಿ ಇಳಿಕೆ

Date:

ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿಯಿಂದ ಮೂರನೇ ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಮೋದಿ ಅವರು ಕಾಂಗ್ರೆಸ್‌ನ ಅಜಯ್‌ ರಾಯ್‌ ಅವರನ್ನು 1,52,513 ಮತಗಳ ಅಂತರದಿಂದ ಸೋಲಿಸಿದ್ದಾರೆ.

ನರೇಂದ್ರ ಮೋದಿ 6,129,70 ಮತಗಳನ್ನು ಪಡೆದರೆ, ಅಜಯ್‌ ರಾಯ್‌ 4,604,57 ಮತಗಳನ್ನು ಪಡೆದಿದ್ದಾರೆ ಎಂದು ಚುನಾವಣಾ ಆಯೋಗದ ಅಂಕಿಅಂಶಗಳಿಂದ ತಿಳಿದುಬಂದಿದೆ. ನರೇಂದ್ರ ಮೋದಿ ಗೆಲುವು ಪಡೆದರೂ ಕಳೆದ ಎರಡು ಚುನಾವಣೆಗಳಲ್ಲಿ ಪಡೆದ ಮತಗಳಿಗೆ ಹೋಲಿಸಿದರೆ ಭಾರಿ ಅಂತರದಲ್ಲಿ ಇಳಿಕೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಇಂಡಿಯಾ ಒಕ್ಕೂಟದ ಬಹುಮತ ಸಂಖ್ಯೆಗೆ ತೊಡಕಾದ ಕರ್ನಾಟಕ, ದೆಹಲಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರೇಂದ್ರ ಮೋದಿ 2019ರ ಚುನಾವಣೆಯಲ್ಲಿ 6,74,664 ಮತಗಳನ್ನು ಪಡೆದು ಸಮಾಜವಾದಿ ಪಕ್ಷದ ಅಭ್ಯರ್ಥಿಯ ವಿರುದ್ಧ 4,79,505 ಮತಗಳ ಅಂತರದಿಂದ ಜಯಗಳಿಸಿದ್ದರು. 2014ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿದ್ದ ಚುನಾವಣೆಯಲ್ಲಿ 5,81,022 ಮತಗಳನ್ನು ಪಡೆದು 3,71, 784 ಮತಗಳ ಅಂತರದಲ್ಲಿ ಗೆಲುವು ದಾಖಲಿಸಿದ್ದರು.

ಈ ಬಾರಿ ಒಂದೂವರೆ ಲಕ್ಷ ಮತಗಳ ಅಂತರದಿಂದ ಮಾತ್ರ ಗೆಲುವು ಗಳಿಸಿರುವುದು ಮೋದಿ ಜನಪ್ರಿಯತೆ ಕಡಿಮೆಯಾಗಿರುವ ಸೂಚಕವಾಗಿದೆ. ಅದಲ್ಲದೆ ಮೊದಲ ಆರಂಭಿಕ ಹಂತದ ಕೆಲವು ಸುತ್ತುಗಳಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು.

ಬಿಜೆಪಿ ಉತ್ತರ ಪ್ರದೇಶದಲ್ಲಿ 80 ಸದಸ್ಯ ಸಂಖ್ಯೆಯಲ್ಲಿ ಭಾರಿ ಹಿನ್ನಡೆಯಲ್ಲಿದೆ.2019ರಲ್ಲಿ  62 ಹಾಗೂ 2014ರಲ್ಲಿ 71 ಸ್ಥಾನಗಳನ್ನು ಪಡೆದಿತ್ತು. ಈ ಬಾರಿ 35 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಕಾಯ್ದುಕೊಂಡಿದೆ. ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೇರಿದಂತೆ ಹಲವರು ಪರಾಭವಗೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...