ಪ್ರಾದೇಶಿಕ ಹಿನ್ನಡೆ ಮುಚ್ಚಿಡಲು ಮೋದಿ ಸರ್ಕಾರದಿಂದ ಪ್ರಯತ್ನ: ಜೈರಾಮ್ ರಮೇಶ್

Date:

ಆರು ದಶಕಗಳಲ್ಲಿಯೇ ದೇಶದ ವಿರುದ್ಧ ಉಂಟಾದ ಹೀನ ಪ್ರಾದೇಶಿಕ ಹಿನ್ನಡೆಯನ್ನು ಮುಚ್ಚಿಹಾಕಲು ನರೇಂದ್ರ ಮೋದಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೆಶ್ ಆರೋಪಿಸಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, “ಚೀನಾದ ಸೈನಿಕರು ಮೇ 2020 ರಿಂದ ಲಡಾಖ್‌ ಪೂರ್ವದ ಆಯಕಟ್ಟಿನ ಸ್ಥಳಗಳಾದ ಡೆಪ್ಸಾಂಗ್, ಡೆಮ್‌ಚೋಕ್ ಮತ್ತು ಇತರ ಪ್ರದೇಶಗಳಿಗೆ ಭಾರತೀಯ ಸೈನಿಕರ ಗಸ್ತು ಪ್ರವೇಶವನ್ನು ನಿರಾಕರಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

ಲಡಾಖ್ ಮೂಲದ ರಾಜಕಾರಣಿ ಕೊಂಚೋಕ್ ಸ್ಟಾಂಜಿನ್ ಅವರ ಪೋಸ್ಟ್ ಅನ್ನು ಉಲ್ಲೆಖಿಸಿರುವ ಜೈರಾಮ್ ರಮೇಶ್, “ಲಡಾಖ್‌ನಲ್ಲಿ 1962 ರ ಭಾರತ – ಚೀನಾ ಯುದ್ಧದಲ್ಲಿ ಹುತಾತ್ಮರಾದ ಸೈನಿಕರ ನೆನಪಿನ ಭಾಗವಾಗಿ ನಿರ್ಮಿಸಲಾದ ರೆಜಾಂಗ್ ಲಾ ಸ್ಮಾರಕವನ್ನು ಚೀನಾದೊಂದಿಗೆ ನಡೆದ ಮಾತುಕತೆಯ ಪ್ರಕ್ರಿಯೆಯ ಭಾಗವಾಗಿ ಸೇನೆಯು ಕೆಡವಿರುವುದು ಅತ್ಯಂತ ನೋವಿನ ಸಂಗತಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2021 ರಲ್ಲಿ ಚೀನಾದೊಂದಿಗೆ ಮಾತುಕತೆ ನಡೆಸಿದ್ದ ಸಂದರ್ಭದಲ್ಲಿ ಬಫರ್‌ ವಲಯಗಳನ್ನು ಬಿಟ್ಟುಕೊಡುವುದಕ್ಕಾಗಿ ಮೇಜರ್ ಸಿಂಗ್ ಸ್ಮಾರಕವನ್ನು ಕೆಡವಲಾಗಿದೆ. ಇದು ವೀರ ಯೋಧ ಮೇಜರ್ ಸಿಂಗ್ ಅವರಿಗೆ ಹಾಗೂ ಭಾರತದ ಯೋಧರಿಗೆ ಮಾಡಿದ ದೊಡ್ಡ ಅವಮಾನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

“ಮೋದಿ ಸರ್ಕಾರವು ಮಾತುಕತೆ ನಡೆಸಿದ ಬಫರ್ ವಲಯಗಳು ಈ ಹಿಂದೆ ಭಾರತದಿಂದ ನಿಯಂತ್ರಿಸಲ್ಪಟ್ಟ ಪ್ರದೇಶದಲ್ಲಿವೆ ಎಂಬುದಕ್ಕೆ ವೀರ ಯೋಧ ಮೇಜರ್‌ ಸಿಂಗ್‌ ಸ್ಮಾರಕ ಪ್ರದೇಶ ಬಿಟ್ಟುಕೊಟ್ಟಿರುವುದೇ ಸಾಕ್ಷಿಯಾಗಿದೆ. ಇದು ಖಂಡಿತಾ ಅತ್ಯಂತ ನಾಚಿಕೆಗೇಡಿನ ಸಂಗತಿ” ಎಂದು ಎಕ್ಸ್‌ನಲ್ಲಿ ತಿಳಿಸಿದ್ದಾರೆ.

“ಕಳೆದ ನಾಲ್ಕು ವರ್ಷಗಳಿಂದ, ಮೋದಿ ಸರ್ಕಾರವು ಲಡಾಖ್‌ನ ಡಿಡಿಎಲ್‌ಜೆ ಸಮೀಪದ ಪ್ರದೇಶವನ್ನು ಚೀನಾಕ್ಕೆ ಬಿಟ್ಟುಕೊಟ್ಟಿದ್ದು, ದೇಶಕ್ಕೆ ಆರು ದಶಕಗಳಲ್ಲಿಯೇ ಅತ್ಯಂತ ಹೀನವಾದ ಪ್ರಾದೇಶಿಕ ಹಿನ್ನಡೆಯನ್ನು ಮುಚ್ಚಿಡಲು ಪ್ರಯತ್ನಿಸಿದೆ. ಮೇ 2020 ರಿಂದ, ಚೀನಾದ ಪಡೆಗಳು ಲಡಾಖ್‌ ಪ್ರದೇಶದಲ್ಲಿ ಭಾರತೀಯ ಗಸ್ತುಪಡೆಗೆ ಪ್ರವೇಶವನ್ನು ನಿರಾಕರಿಸುವುದನ್ನು ಮುಂದುವರೆಸಿವೆ”ಎಂದು ಜೈರಾಮ್ ತಿಳಿಸಿದ್ದಾರೆ.

2017 ರಲ್ಲಿ ಲಡಾಕ್‌ನ ಡೋಕ್ಲಾಮ್‌ನಲ್ಲಿ ಭಾರತದ ವಿಜಯೋತ್ಸವವನ್ನು ಚೀನಾ ನಿರಾಕರಿಸಿದ್ದು, ಇದರ ಜೊತೆಗೆ ಭೂತಾನ್ ಭೂಮಿಯಲ್ಲಿಯೂ ತನ್ನ ಅತಿಕ್ರಮಣ ಸ್ಥಾಪಿಸಲು ಹೊರಟಿದೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

“ಭಾರತದ ಜನರಿಗೆ ಪ್ರಧಾನಿ ಸತ್ಯವನ್ನು ಹೇಳುವುದಕ್ಕೆ, ಲಡಾಖ್‌ನಲ್ಲಿ ಯಥಾಸ್ಥಿತಿಯನ್ನು ಹೇಗೆ ಮತ್ತು ಯಾವಾಗ ಪುನಃಸ್ಥಾಪಿಸಲಾಗುತ್ತದೆ ಎಂಬುದನ್ನು ವಿವರಿಸಲು ಇದು ಸುಸಮಯ” ಎಂದು ಜೈರಾಮ್ ರಮೇಶ್ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...