‘400 ಮಹಿಳೆಯರ ಅತ್ಯಾಚಾರಿ’ ಪ್ರಜ್ವಲ್‌ಗೆ ಜರ್ಮನಿಗೆ ಹೋಗಲು ಮೋದಿ ಸಹಾಯ: ರಾಹುಲ್ ವಾಗ್ದಾಳಿ

Date:

ಸಮೂಹ ಅತ್ಯಾಚಾರಿ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣನಿಗೆ ಜರ್ಮನಿಗೆ ಹಾರಲು ಸಹಾಯ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಎಲ್ಲ ಮಹಿಳೆಯರಿಗೂ ಕ್ಷಮೆ ಕೋರಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಆಗ್ರಹಿಸಿದರು.

ಶಿವಮೊಗ್ಗದ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡ ಅವರು, ದೇಶದ ಎಲ್ಲ ಸಂಸ್ಥೆಗಳ ನಿಯಂತ್ರಣ ಹೊಂದಿರುವ ನರೇಂದ್ರ ಮೋದಿ ಅವರು ಪ್ರಜ್ವಲ್‌ ರೇವಣ್ಣಗೆ ಜರ್ಮನಿಗೆ ಹೋಗಲು ಸಹಾಯ ಮಾಡಿದ್ದಾರೆ ಎಂದು ಆರೋಪಿಸಿದರು.

“ಇದು ಲೈಂಗಿಕ ಹಗರಣವಲ್ಲ, ಇದೊಂದು ಸಮೂಹ ಅತ್ಯಾಚಾರ. 400 ಮಹಿಳೆಯರನ್ನು ಅತ್ಯಾಚಾರ ಮಾಡಿರುವ ಪ್ರಜ್ವಲ್‌ಗೆ ಮೋದಿ ಚುನಾವಣಾ ಪ್ರಚಾರ ಮಾಡಿರುವುದು ನಾಚಿಕೆಗೇಡು” ಎಂದು ಛೀಮಾರಿ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ನೋಟಾವನ್ನು ಅಭ್ಯರ್ಥಿಯನ್ನಾಗಿ ಪರಿಗಣಿಸಲು ಇದು ಸಕಾಲ

ಬಿಜೆಪಿ ಸಮೂಹ ಅತ್ಯಾಚಾರಿಯನ್ನು ರಕ್ಷಿಸುತ್ತಿದೆ.ಇದು ಮೋದಿಯ ಗ್ಯಾರಂಟಿ. ಆದರೆ ಕಾಂಗ್ರೆಸ್ ಅತ್ಯಾಚಾರಿಯ ವಿರುದ್ಧ ಕ್ರಮ ಕೈಗೊಳ್ಳಲಿದೆ. ದೇಶದ ಇತಿಹಾಸದಲ್ಲಿಯೇ ಯಾವ ಪ್ರಧಾನಿಯೂ ಸಮೂಹ ಅತ್ಯಾಚಾರಿಯ ಪರವಾಗಿ ಮತದಾರರ ಬೆಂಬಲ ಕೇಳಿರಲಿಲ್ಲ. ಆದರೆ ಮತಯಾಚಿಸಿರುವ ನರೇಂದ್ರ ಮೋದಿ ದೇಶದ ಮಹಿಳೆಯರನ್ನು ಅವಮಾನಿಸಿದ್ದಾರೆ. ಹಾಗಾಗಿ ಮೋದಿ ಮಹಿಳೆಯರ ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು.

“ಒಂದು ವೇಳೆ ಸಂವಿಧಾನ ಬದಲಾದರೆ ದಲಿತರು, ಒಬಿಸಿಗಳು ತಮ್ಮ ಜಮೀನುಗಳನ್ನು ಕಳೆದುಕೊಳ್ಳಲಿದ್ದಾರೆ. ಹಿಂದುಳಿದ ವರ್ಗದವರು ಇಂದು ರಾಜಕೀಯ ಅಧಿಕಾರ ಪಡೆದಿದ್ದರೆ ಅದಕ್ಕೆ ಭಾರತೀಯ ಸಂವಿಧಾನ ಕಾರಣ.ಬಿಜೆಪಿಯವರು ಎಸ್‌ಸಿ, ಎಸ್‌ಟಿ ಅವರ ಮೀಸಲಾತಿಯನ್ನು ನೀಡಲು ಬಯಸುತ್ತಿಲ್ಲ. ಅವರು ಅದನ್ನು ನಿಷೇಧಿಸುತ್ತಾರೆ. ಆದರೆ ಕಾಂಗ್ರೆಸ್ ಯಾವಾಗಲು ಸಂವಿಧಾನವನ್ನು ರಕ್ಷಿಸುತ್ತದೆ” ಎಂದು ರಾಹುಲ್ ಗಾಂಧಿ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಜನರಿಂದ ಮತಯಾಚಿಸಿದ ರಾಹುಲ್ ಅವರು, ಪಕ್ಷವು ಅಧಿಕಾರಕ್ಕೆ ಬಂದರೆ ದೇಶದ ಬಡ ಕುಟುಂಬಗಳ ಮಹಿಳೆಯರಿಗೆ ಒಂದು ಲಕ್ಷ ರೂ. ಒಳಗೊಂಡು ಐದು ಗ್ಯಾರಂಟಿ ನೀಡುವುದಾಗಿ ಭರವಸೆ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೆರಿ ಚುನಾವಣೆ | ‘ಇಂಡಿಯಾ’ ಗೊಂದಲ ನಿವಾರಣೆ: ಕಾಂಗ್ರೆಸ್ 16, ಡಿಎಂಕೆ 14 ಕ್ಷೇತ್ರಗಳಲ್ಲಿ ಸ್ಪರ್ಧೆ

ಪುದುಚೆರಿಯ 'ಇಂಡಿಯಾ' ಮೈತ್ರಿಕೂಟದ ಪ್ರಮುಖ ಪಕ್ಷಗಳಾದ ಡಿಎಂಕೆ ಮತ್ತು ಕಾಂಗ್ರೆಸ್‌ ಪಕ್ಷಗಳ...

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...