ಇತಿಹಾಸ ತಿರುಚಿದ ಮೋದಿ: ಪಟೇಲ್-ನೆಹರೂ ಇಬ್ಬರೂ ದೇಶಭಕ್ತರು ಎಂದು ಚಿದಂಬರಂ ಸ್ಪಷ್ಟನೆ

Date:

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನದಂದು ಕಾಶ್ಮೀರ ವಿಷಯದಲ್ಲಿ ಮಾಡಿದ ಹೇಳಿಕೆ ಕುರಿತು ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚಿದಂಬರಂ ಅವರು ತಮ್ಮ ಅಧಿಕೃತ ಎಕ್ಸ್‌ (ಹಿಂದಿನ ಟ್ವಿಟರ್) ಖಾತೆಯಲ್ಲಿ ಇತಿಹಾಸಕಾರ ಮತ್ತು ಪ್ರೊಫೆಸರ್ ‘ಡಾ. ಜಿ. ರಾಮಚಂದ್ರನ್’ ಅವರ ಬರಹವನ್ನು ಹಂಚಿಕೊಂಡು, “ಮೋದಿ ಅವರು ಪಂಡಿತ್ ಜವಾಹರಲಾಲ್ ನೆಹರೂ ಬಗ್ಗೆ ಕೆಟ್ಟದಾಗಿ ಇತಿಹಾಸವನ್ನು ತಿರುಚಿದ್ದಾರೆ” ಎಂದು ಹೇಳಿದ್ದಾರೆ.

ಡಾ. ರಾಮಚಂದ್ರನ್ ಅವರ ಲೇಖನದ ಪ್ರಕಾರ, ಮೋದಿ ಅವರು ಏಕತಾ ದಿವಸ್‌ನಲ್ಲಿ ಮಾತನಾಡಿ, ಸರ್ದಾರ್‌ ವಲ್ಲಬಾಯ್‌ ಪಟೇಲ್ ಅವರು ಕಾಶ್ಮೀರವನ್ನು ಸಂಪೂರ್ಣವಾಗಿ ಭಾರತಕ್ಕೆ ಸೇರಿಸಬೇಕೆಂದಿದ್ದರು, ಆದರೆ ನೆಹರೂ ಅದನ್ನು ಸಾಧ್ಯವಾಗದಂತೆ ಮಾಡಿದರು. ನಾನು ಅವರ ಅಪೂರ್ಣ ಕಾರ್ಯವನ್ನು ಪೂರ್ಣಗೊಳಿಸಿದ್ದೇನೆ” ಎಂದು ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಡಿಕೆಶಿ – ತೇಜಸ್ವಿ ಸೂರ್ಯ ಕಚ್ಚಾಟದಲ್ಲಿ ಬೆಂಗಳೂರಿಗಿಲ್ಲ ಲಾಭ!

ಇತಿಹಾಸಕಾರ ಡಾ. ರಾಮಚಂದ್ರನ್ ಅವರ ಲೇಖನದ ಪ್ರಕಾರ ವಾಸ್ತವವಾಗಿ ಪಟೇಲ್ ಅವರು ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಬಿಟ್ಟುಕೊಡಲು ಸಿದ್ಧರಿದ್ದರು. ಅವರ ಕಾರ್ಯದರ್ಶಿ ವಿ. ಶಂಕರ್ ಪ್ರಕಾರ, ಜಿನ್ನಾ ಹೈದರಾಬಾದ್ ಮತ್ತು ಜುನಾಗಢ್ ಅನ್ನು ಭಾರತಕ್ಕೆ ಬಿಟ್ಟಿದ್ದರೆ ಕಾಶ್ಮೀರವನ್ನು ಪಾಕಿಸ್ತಾನಕ್ಕೆ ಕೊಡುವುದಾಗಿ ಪಟೇಲ್ ಯೋಚಿಸಿದ್ದರು. ಆದರೆ ಜಿನ್ನಾ ಒಪ್ಪಲಿಲ್ಲ. ಪಟೇಲ್ ಅವರೇ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿ 370ನೇ ವಿಧಿಯನ್ನು ಸಂವಿಧಾನಕ್ಕೆ ಸೇರಿಸಲು ಒಪ್ಪಿದ್ದರು ಎಂದು ಚಿದಂಬರಂ ಅವರು ತಿಳಿಸಿದ್ದಾರೆ.

ಮೋದಿ ಅವರು 370ನೇ ವಿಧಿಯನ್ನು ರದ್ದುಗೊಳಿಸಿದಷ್ಟೇ ಅಲ್ಲದೆ, ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಎರಡು ಒಕ್ಕೂಟ ಪ್ರದೇಶಗಳಾಗಿ ವಿಭಜಿಸಿದ್ದು ರಾಜಕೀಯ ಉದ್ದೇಶಕ್ಕಾಗಿ ಮಾತ್ರ. ಈ ಕ್ರಮವು ಶಾಶ್ವತ ಪರಿಹಾರಕ್ಕೆ ವಿರುದ್ಧವಾದದ್ದು ಎಂದು ಅವರು ಡಾ. ರಾಮಚಂದ್ರನ್ ಅವರ ಹೇಳಿಕೆಯನ್ನು ಚಿದಂಬರಂ ತಿಳಿಸಿದ್ದಾರೆ

ಚಿದಂಬರಂ ತಮ್ಮ ಟ್ವೀಟ್‌ನ ಅಂತ್ಯದಲ್ಲಿ, ಪಟೇಲ್ ಮತ್ತು ನೆಹರೂ ಇಬ್ಬರೂ ಮಹಾನ್ ದೇಶಭಕ್ತರು. 1947-1950ರಲ್ಲಿ ದೇಶದ ಹಿತಕ್ಕಾಗಿ ಒಟ್ಟಾಗಿ ನಿರ್ಧಾರ ತೆಗೆದುಕೊಂಡರು. ಇಬ್ಬರಿಗೂ ನಮನ. ಈ ವಿವಾದ ರಾಜಕೀಯದಲ್ಲಿ ಐತಿಹಾಸಿಕ ಸತ್ಯಗಳನ್ನು ಚರ್ಚಿಸುವಂತೆ ಮಾಡಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...