ಕಳೆದ 10 ವರ್ಷಗಳಲ್ಲಿ 22 ಮಂದಿಯನ್ನು ಬಿಲೇನಿಯರ್‌ಗಳನ್ನಾಗಿ ಮಾಡಿದ ಮೋದಿ: ರಾಹುಲ್ ಗಾಂಧಿ ವಾಗ್ದಾಳಿ

Date:

ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರು ಬಿಜೆಪಿ ಹಾಗೂ ನರೇಂದ್ರ ಮೋದಿ ವಿರುದ್ಧದ ವಾಗ್ದಾಳಿಯನ್ನು ಮುಂದುವರಿಸಿದ್ದು, ಬುಡಕಟ್ಟು ಸಮುದಾಯದವರಿಗೆ ಸೇರಿದ ಭೂಮಿಯನ್ನು ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ನೀಡಿದೆ ಎಂದರು.

ಜಾರ್ಖಂಡ್‌ನ ಚೈಬಾಸಾದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮಗೆ ಮತ ನೀಡಿ ಅಧಿಕಾರಕ್ಕೆ ತಂದರೆ ಕೋಟ್ಯಂತರ ಜನರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದು ಭರವಸೆ ನೀಡಿದರು.

ಈ ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಮತ್ತು ಬುಡಕಟ್ಟು ಜನರು, ಬಡವರು ಹಾಗೂ ಹಿಂದುಳಿದ ವರ್ಗಗಳ ಹಕ್ಕುಗಳನ್ನು ಉಳಿಸಬೇಕಾಗಿದೆ.ಭಾರತ ಒಕ್ಕೂಟದ ನಾಯಕರು ಸಂವಿಧಾನವನ್ನು ಉಳಿಸಲು ತಮ್ಮ ಜೀವವನ್ನು ತ್ಯಾಗ ಮಾಡಲು ಸಿದ್ಧರಿದ್ದಾರೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

“ಪ್ರಧಾನಿ ಬುಡಕಟ್ಟು ಜನರ ಭೂಮಿಯನ್ನು 14 ರಿಂದ 15 ಕೈಗಾರಿಕೋದ್ಯಮಿಗಳಿಗೆ ನೀಡಲು ಬಯಸಿದ್ದಾರೆ. ಈಗಾಗಲೇ ಕಳೆದ 10 ವರ್ಷದ ಅವಧಿಯಲ್ಲಿ 22 ಮಂದಿಯನ್ನು ಬಿಲೇನಿಯರ್‌ಗಳಾಗಿ ಮಾಡಿದ್ದಾರೆ. ತಮಗೆ ಅಧಿಕಾರ ನೀಡಿದರೆ ಕೋಟ್ಯಂತರ ಜನರನ್ನು ಲಕ್ಷಾಧೀಶರನ್ನಾಗಿ ಮಾಡಲಿದ್ದು, ಬಡ ಮಹಿಳೆಯರಿಗೆ ವಾರ್ಷಿಕವಾಗಿ 1 ಲಕ್ಷ ರೂ. ನೀಡುವುದಾಗಿ ತಿಳಿಸಿದರು.

ಪದವಿ ಹಾಗೂ ಡಿಪ್ಲೊಮೊ ಪಡೆದ ನಿರುದ್ಯೋಗಿ ಯುವಕರಿಗೆ ಒಂದು ವರ್ಷ ವೇತನ ಸಹಿತ ಉದ್ಯೋಗ ತರಬೇತಿ ನೀಡುವ ಭರವಸೆಯನ್ನು ರಾಹುಲ್ ಗಾಂಧಿ ನೀಡಿದರು.

“ಇಂದು ಮೂರನೇ ಹಂತದ ಚುನಾವಣೆ ನಡೆಯಲಿದೆ.ದೊಡ್ಡ ಸಂಖ್ಯೆಯಲ್ಲಿ ಬಂದು ಮತದಾನ ಮಾಡಿ ನಿಮ್ಮ ಹಕ್ಕುಗಳನ್ನು ರಕ್ಷಿಸಬೇಕೆಂದು ನಾನು ನಿಮ್ಮೆಲ್ಲರಿಗೂ ಮನವಿ ಮಾಡುತ್ತೇನೆ. ಇದು ಸಾಮಾನ್ಯ ಚುನಾವಣೆಯಲ್ಲ, ಇದು ಸಂವಿಧಾನ ಹಾಗೂ ದೇಶದ ಪ್ರಜಾಪ್ರಭುತ್ವವನ್ನು ಸಂರಕ್ಷಿಸುವ ಚುನಾವಣೆಯಾಗಿದೆ” ಎಂದು ರಾಹುಲ್‌ ಗಾಂಧಿ ಟ್ವೀಟ್‌ ಮೂಲಕ ತಿಳಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...