ಆದಿವಾಸಿ ನಾಯಕ ಬಿರ್ಸಾ ಮುಂಡಾ ಬಗ್ಗೆ ತಪ್ಪು ಮಾಹಿತಿ ನೀಡಿದ ಮೋದಿ: ಟ್ರೋಲಾದ ಪ್ರಧಾನಿ

Date:

ಸ್ವತಂತ್ರೋತ್ಸವದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಾರ್ಖಂಡ್ ರಾಜ್ಯದ ಆದಿವಾಸಿ ನಾಯಕ ಬಿರ್ಸಾ ಮುಂಡಾ ಬಗ್ಗೆ ತಪ್ಪು ಮಾಹಿತಿ ನೀಡಿರುವುದು ಎಲ್ಲಡೆ ವೈರಲ್‌ ಆಗಿದೆ.

ಮೋದಿ ತಮ್ಮ ಭಾಷಣದಲ್ಲಿ ಬಿರ್ಸಾ ಮುಂಡಾ 1857ರ ಮೊದಲ ಸ್ವಾತಂತ್ರ ಸಂಗ್ರಾಮದಲ್ಲಿ ಭಾಗವಹಿಸಿದ್ದರು ಎಂದು ಹೇಳಿದ್ದರು. ಆದರೆ ವಾಸ್ತವವಾಗಿ ಬಿರ್ಸಾ ಮುಂಡಾ ಆ ಸಂದರ್ಭದಲ್ಲಿ ಜನಿಸಿರಲಿಲ್ಲ. ಮುಂಡಾ ಜನಿಸಿದ್ದು 1875 ನವೆಂಬರ್‌ 15ರಂದು. ಬುಡಕಟ್ಟು ನಾಯಕರೊಬ್ಬರ ಬಗ್ಗೆ ತಪ್ಪು ಮಾಹಿತಿ ನೀಡಿರುವುದು ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಜಾರ್ಖಂಡ್‌ನ ಛೋಟನಾಗಪುರ್‌ನಲ್ಲಿರುವ ಮುಂಡಾ ಬುಡಕಟ್ಟು ಸಮುದಾಯಕ್ಕೆ ಸೇರಿದ ಬಿರ್ಸಾ ಮುಂಡಾ 19ನೇ ಶತಮಾನದ ಅಂತ್ಯದಲ್ಲಿ ಬದುಕಿದ್ದವರು. ಬ್ರಿಟಿಷರ ವಿರುದ್ಧ ಹೋರಾಡುತ್ತಾ, ತಮ್ಮ ಬುಡಕಟ್ಟು ಸಮುದಾಯಗಳ ಪಾಲಿಗೆ ಆರಾಧ್ಯ ದೈವವಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಈ ದಿನ.ಕಾಮ್ ಇಟ್ಟ ಎರಡು ಪುಟ್ಟ ಹೆಜ್ಜೆಗಳು; ನಮ್ಮ ಪ್ರಯತ್ನ ನಿಮ್ಮ ಭಾಗೀದಾರಿಕೆ

1875ರಲ್ಲಿ ಹುಟ್ಟಿ 25 ವರ್ಷಗಳ ಕಾಲ ಬದುಕಿದ್ದ ಬಿರಸಾ ಮುಂಡ ತಮ್ಮ ಕಿರಿಯ ವಯಸ್ಸಿನಲ್ಲೇ ದೊಡ್ಡ ಹೋರಾಟ ಮಾಡಿದವರು. ಆಗಿನ ಬೆಂಗಾಲ್ ಪ್ರೆಸಿಡೆನ್ಸಿಯಲ್ಲಿ ಮುಂಡಾ ಬುಡಕಟ್ಟು ಸಮುದಾಯದ ಜನರ ದೊಡ್ಡ ಆಂದೋಲನ ಕಟ್ಟಿದವರು.
ಬಿರ್ಸಾ ಮುಂಡಾ ತನ್ನದೇ ಒಂದು ಮತ ಸ್ಥಾಪಿಸುತ್ತಾರೆ. ಬಿರ್ಸಾಯತ್ ಎನ್ನುವ ಈ ಮತದ ಮೂಲಕ ಆದಿವಾಸಿಗಳನ್ನು ಒಗ್ಗೂಡಿಸತೊಡುತ್ತಾರೆ. ತಮ್ಮ ಮೂಲ ಬುಡಕಟ್ಟು ಸಂಸ್ಕೃತಿ, ಧರ್ಮವನ್ನು ಮತ್ತೆ ಅಳವಡಿಸಿಕೊಳ್ಳುವಂತೆ ಅವರು ಬೋಧಿಸುತ್ತಾರೆ. ಅಲ್ಲಿನ ಜನರ ಪಾಲಿಗೆ ಬಿರಸಾ ಮುಂಡಾ ಪವಾಡ ಪುರುಷ ಎನಿಸುತ್ತಾರೆ.

ಆದಿವಾಸಿಗಳ ಮೇಲೆ ತೆರಿಗೆ ಹೇರುತ್ತಿದ್ದುದು ಮತ್ತು ಮತಾಂತರ ಮಾಡುತ್ತಿದ್ದುದು ಮುಂಡಾ ಅವರನ್ನು ಆಕ್ರೋಶಗೊಳಿಸುತ್ತದೆ. ಈ ಚಟುವಟಿಕೆ ವಿರುದ್ಧ ವಿವಿಧ ಆದಿವಾಸಿ ಸಮುದಾಯಗಳಲ್ಲಿ ಜಾಗೃತಿ ಮೂಡಿಸಿ ದೊಡ್ಡ ಆಂದೋಲನ ಕಟ್ಟುತ್ತಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...