ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್: ರಾಮಚಂದ್ರ ಗುಹಾ

Date:

ಪ್ರಧಾನಿ ನರೇಂದ್ರ ಮೋದಿಯವರ ಬಹುತ್ವವಾದ ಭಾರತದ ಆತ್ಮ ನಾಶಪಡಿಸುವ ವಿಷ, ಕ್ಯಾನ್ಸರ್ ಎಂದು ಭಾರತೀಯ ಇತಿಹಾಸಕಾರ, ಚಿಂತಕ ರಾಮಚಂದ್ರ ಗುಹಾ ಅವರು ಹೇಳಿದ್ದಾರೆ. ಹಾಗೆಯೇ ಪ್ರಧಾನಿ ಅವರನ್ನು ‘ಸರ್ವಾಧಿಕಾರಿ ಪ್ರವೃತ್ತಿ’ ಹೊಂದಿರುವ ಫ್ಯೂಜಿಟಿವ್ ಸರ್ವಾಧಿಕಾರಿ ಎಂದಿದ್ದಾರೆ.

ದಿ ವೈರ್‌ನಲ್ಲಿ ಕರಣ್ ಥಾಪರ್‌ ಅವರು ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಗುಹಾ ಅವರು, “ಮೋದಿಯವರ ಬಹುಸಂಖ್ಯಾತ ಅಜೆಂಡಾವು ಭಾರತದ ಸಾಮಾಜಿಕ ರಚನೆಯನ್ನು ನಾಶಪಡಿಸುತ್ತದೆ” ಎಂದು ಹೇಳಿದರು.

“ಮೋದಿಯವರ ಬಹುತ್ವವಾದವು ಮನಸ್ಸು ಮತ್ತು ಹೃದಯವನ್ನು ವಿಷಪೂರಿತಗೊಳಿಸುತ್ತದೆ. ಅದು ಹುಟ್ಟುಹಾಕುವ ದ್ವೇಷ ಮತ್ತು ಧರ್ಮಾಂಧತೆ ದೇಶದಲ್ಲಿ ರಾಜಕೀಯದ ಮೂಲಕ ಕ್ಯಾನ್ಸರ್‌ನಂತೆ ಹರಡುತ್ತದೆ. ಜನರು ಮತ್ತು ಸಮಾಜವನ್ನು ನಾಗರಿಕತೆ, ಸಭ್ಯತೆ, ಸಹಾನುಭೂತಿ ಮತ್ತು ಮಾನವೀಯತೆಯನ್ನೇ ಕಸಿದುಕೊಳ್ಳುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಸರ್ವಾಧಿಕಾರಿ ಮೋದಿ ಸರ್ಕಾರ ರೈತರ ಧ್ವನಿ ಹತ್ತಿಕ್ಕಲು ಯತ್ನಿಸುತ್ತಿದೆ: ಖರ್ಗೆ

“ಇಂದಿರಾಗಾಂಧಿಯವರ ತುರ್ತುಪರಿಸ್ಥಿತಿಯಲ್ಲಿ ನಿರಂಕುಶಾಧಿಕಾರವನ್ನು ಕೌಟುಂಬಿಕ ಆಡಳಿತದೊಂದಿಗೆ ಸಂಯೋಜನೆ ಹೊಂದಿತ್ತು. ಮೋದಿಯವರು ಇಂದು ಸರ್ವಾಧಿಕಾರವನ್ನು ಹಿಂದೂ ಬಹುಮತವಾದದೊಂದಿಗೆ ಸಂಯೋಜನೆ ಹೊಂದಿದೆ. ಎಲ್ಲಾ ವಾಕ್ ಸ್ವಾತಂತ್ರ್ಯವನ್ನು ಹತ್ತಿಕ್ಕುವುದು ಮೋದಿ ಮತ್ತು ಅಮಿತ್ ಶಾ ಅವರ ಉದ್ದೇಶವಾಗಿದೆ” ಎಂದು ಗುಹಾ ಅಭಿಪ್ರಾಯಿಸಿದ್ದಾರೆ.

“ಮೋದಿ ಸರ್ಕಾರಕ್ಕೆ ಮೂರನೇ ಅವಧಿಯು ಪೂರ್ಣ ಪ್ರಮಾಣದ ಚಿಂತನೆ-ನಿಯಂತ್ರಣದ ಆಡಳಿತಕ್ಕೆ ಪರವಾನಗಿ ನೀಡುತ್ತದೆ” ಎಂದರು.

“ಆದರೆ, ಮೋದಿ ಭರ್ಜರಿ ಗೆಲುವು ಸಾಧಿಸಿ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ, ತಮಿಳುನಾಡು, ಕೇರಳ, ಪಶ್ಚಿಮ ಬಂಗಾಳ, ಕರ್ನಾಟಕ, ತೆಲಂಗಾಣ ಮತ್ತು ಪಂಜಾಬ್‌ನಂತಹ ದೊಡ್ಡ ರಾಜ್ಯಗಳು ಅವರ ಪಾಲಾಗುವುದಿಲ್ಲ. ಆದ್ದರಿಂದಾಗಿ ‘ತುರ್ತು ಪರಿಸ್ಥಿತಿಯ ಸರ್ವಾಧಿಕಾರ’ ಮರಳುವ ಸಾಧ್ಯತೆಯಿಲ್ಲ. ಜನರ ಮೇಲೆ ಪ್ರಾಬಲ್ಯ ಸಾಧಿಸುವ ಅವರ ಪ್ರಯತ್ನವನ್ನು ಈ ರಾಜ್ಯಗಳು ರಾಜಕೀಯವಾಗಿ ವಿರೋಧಿಸುತ್ತವೆ” ಎಂದು ಹೇಳಿದರು.

ಹಾಗೆಯೇ ರಾಮಚಂದ್ರಾ ಗುಹಾ ಅವರು, ದೇಶದ ಸಾಮಾಜಿಕ ರಚನೆ ಮತ್ತು ಅದರ ಜನರ ಆಲೋಚನೆ ಮತ್ತು ನಡವಳಿಕೆಯ ಮೇಲೆ ಮೋದಿಯವರ ಬಹುಮತದ ಪ್ರಭಾವದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...