ಸಂಸತ್ ಮುಂಗಾರು ಅಧಿವೇಶನ | ಮಣಿಪುರದ ಬಗ್ಗೆ ಚರ್ಚೆಗೆ ಒತ್ತಾಯ; ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ

Date:

ಮಣಿಪುರದಲ್ಲಿನ ಹಿಂಸಾಚಾರದ ಬಗ್ಗೆ ಚರ್ಚೆ ನಡೆಸಲು ಅನುಮತಿ ನೀಡಬೇಕೆಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿಲುವನ್ನು ಖಂಡಿಸಿ ವಿಪಕ್ಷಗಳ ಸದಸ್ಯರು ಬುಧವಾರ ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದರು.

ಸಂಸತ್ತಿನ ಮೇಲ್ಮನೆ ಮಧ್ಯಾಹ್ನದ ಊಟದ ನಂತರದ ಅವಧಿಗೆ ಮತ್ತೆ ಸೇರಿದಾಗ, ಉಪಸಭಾಪತಿ ಹರಿವಂಶ್ ಅವರು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರನ್ನು ಕರೆದು ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ (ಮೂರನೇ ತಿದ್ದುಪಡಿ) ಮಸೂದೆ, 2022 ಅನ್ನು ಮಂಡಿಸಲು ಒತ್ತಾಯಿಸಿದರು.

ನಂತರ ಅವರು ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮಾತನಾಡಲು ಅವಕಾಶ ನೀಡಿದರು,  ಆಗ ಖರ್ಗೆ ಅವರು ತಮಾಷೆಯಾಗಿ ‘ಮೈಕ್ ಆಫ್ ಮಾಡಬೇಡಿ’ ಎಂದು ಉಪಸಭಾಪತಿಗೆ ಹೇಳಿದರು. ಹರಿವಂಶ್ ಅವರು, ‘ನೀವು ಮಾತನಾಡಿದ ನಂತರ ನನ್ನ ಮಾತನ್ನೂ ಕೇಳಿ’ ಎಂದು ಖರ್ಗೆ ಅವರಿಗೆ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಣಿಪುರ ವಿಷಯದ ಬಗ್ಗೆ ಚರ್ಚೆ ಮತ್ತು ಆ ಕುರಿತ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ಪ್ರತಿಪಕ್ಷಗಳು ಬಯಸಿವೆ ಮತ್ತು ನಾವೆಲ್ಲ ಅದಕ್ಕಾಗಿ ಕಾಯುತ್ತಿದ್ದೇವೆ. ಐದು ದಿನಗಳ ನಂತರವೂ, ಪ್ರಧಾನಿ ಸದನಕ್ಕೆ ಬಂದಿಲ್ಲ ಮತ್ತು ಅವರು ತಮ್ಮ ಕಚೇರಿಯಲ್ಲಿ ಕುಳಿತು ಕಲಾಪವನ್ನು ನೋಡುತ್ತಿದ್ದಾರೆ” ಎಂದು ಖರ್ಗೆ ಹೇಳಿದರು.

ಈ ಸುದ್ದಿ ಓದಿದ್ದೀರಾ: ಈ ದಿನ ಸಂಪಾದಕೀಯ | ಮಂತ್ರಾಲಯದಲ್ಲಿ ರಾಮನ ವಿಗ್ರಹ; ಆಂಧ್ರದಲ್ಲಿ ಬಿಜೆಪಿಯ ಪ್ರತಿಮಾ ರಾಜಕಾರಣ

“ಇದರ ಪರಿಣಾಮವಾಗಿ, ಇಡೀ ದೇಶವೇ ಕಾಯುತ್ತಿದ್ದರೂ, ಪ್ರತಿಪಕ್ಷಗಳಿಗೆ ಮಣಿಪುರದ ಬಗೆಗಿನ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಸರ್ಕಾರವು ವಿರೋಧ ಪಕ್ಷಗಳಿಗೆ ವಿಷಯ ಮಂಡನೆಗೆ ಅವಕಾಶವನ್ನೂ ನೀಡುತ್ತಿಲ್ಲ ಮತ್ತು ತಮ್ಮ ಬೇಡಿಕೆಗೆಳಿಗೆ ಕಿವಿಗೊಡುತ್ತಿಲ್ಲ. ಸರ್ಕಾರದ ನಿಲುವನ್ನು ವಿರೋಧಿಸಿ, ನಾವು ಸಭಾತ್ಯಾಗ ಮಾಡುತ್ತಿದ್ದೇವೆ” ಎಂದು ಖರ್ಗೆ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...