ಕೇರಳ ಹಾಗೂ ಈಶಾನ್ಯ ಭಾರತಕ್ಕೆ ಕಾಲಿಟ್ಟ ನೈರುತ್ಯ ಮುಂಗಾರು

Date:

ಕೇರಳ ಹಾಗೂ ಈಶಾನ್ಯ ಭಾರತದ ಬಹುಭಾಗಗಳಿಗೆ ಒಂದು ದಿನ ಮುಂಚಿತವಾಗಿ ನೈರುತ್ಯ ಮುಂಗಾರು ಮಳೆ ಕಾಲಿಟ್ಟಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

ಮೇ.15 ರಂದು ಹವಾಮಾನ ಇಲಾಖೆ ತಿಳಿಸಿದಂತೆ ಮುಂಗಾರು ಮಳೆ ಕೇರಳಕ್ಕೆ ಮೇ 31ರಂದು ಕಾಲಿಡಬೇಕಿತ್ತು.

“ಮುಂದಿನ 24 ಗಂಟೆಗಳಲ್ಲಿ ಕೇರಳಕ್ಕೆ ನೈರುತ್ಯ ಮುಂಗಾರು ಆರಂಭವಾಗಲಿದ್ದು,ಪರಿಸ್ಥಿತಿ ಅನುಕೂಲಕರವಾಗಿ ಮುಂದುವರಿಯಲಿದೆ” ಎಂದು ಐಎಂಡಿ ಬುಧವಾರ ತಿಳಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಕ್ಷಿಣ ಅರಬ್ಬಿ ಸಮುದ್ರದ ಕೆಲವು ಪ್ರದೇಶಗಳು, ಉಳಿದ ಪ್ರದೇಶಗಳಾದ ಮಾಲ್ಡೀವ್ಸ್, ಕ್ಯಾಮೊರಿನ್, ಲಕ್ಷದ್ವೀಪ, ನೈರುತ್ಯ ಹಾಗೂ ಕೇಂದ್ರ ಬಂಗಾಳ ಕೊಲ್ಲಿ, ಈಶಾನ್ಯ ಬಂಗಾಳ ಕೊಲ್ಲಿ ಹಾಗೂ ಈಶಾನ್ಯದ ಭಾಗಗಳ ಕೆಲವು ಭಾಗಗಳಲ್ಲಿ ಇದೇ ಸಮಯದಲ್ಲಿ ನೈರುತ್ಯ ಮುಂಗಾರು ಒಂದು ದಿನ ದಿನ ಮುಂಚಿತವಾಗಿ ಆಗಮಿಸಲಿದ್ದು, ಪರಿಸ್ಥಿತಿ ಅನುಕೂಲಕರವಾಗಿ ಮುಂದುವರಿಯಲಿದೆ” ಎಂದು ಐಎಂಡಿ ತಿಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜೈಲಿಗೆ ಕಳಿಸುವ ಮೋದಿ ಗ್ಯಾರಂಟಿಯು ‘ಜನತಂತ್ರದ ಜನನಿ’ಯ ಅಣಕ ಅಲ್ಲವೇ?

ಕೇರಳದಲ್ಲಿ ಕೆಲವು ದಿನಗಳಿಂದ ಹೆಚ್ಚುವರಿ ಮಳೆಯಾಗಿದ್ದು, ಮೇ ತಿಂಗಳಲ್ಲಿ ಬೀಳಬೇಕಿದ್ದ ಮಳೆಗಿಂತ ಹೆಚ್ಚು ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ಅಂಕಿಅಂಶಗಳು ತೋರಿಸಿವೆ.

ಹವಾಮಾನ ಇಲಾಖೆಯ ವಿಜ್ಞಾನಿಗಳ ಪ್ರಕಾರ ರೆಮಲ್‌ ಚಂಡಮಾರುತ ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶದ ಮೂಲಕ ಭಾನುವಾರ ಆಗಮಿಸುವುದರ ಮೂಲಕ ಬಂಗಾಳ ಕೊಲ್ಲಿಗೆ ಮುಂಗಾರು ಮಳೆ ಹರಿವನ್ನು ಎಳೆದುಕೊಳ್ಳಲು ಸಾಧ್ಯವಾಗಿದೆ. ಇದು ಕೂಡ ಈಶಾನ್ಯ ಭಾರತಕ್ಕೆ ಬೇಗನೆ ಮುಂಗಾರು ಮಳೆ ಆಗಮಿಸಲು ಕಾರಣವಾಗಿದೆ.

ಸಾಮಾನ್ಯವಾಗಿ ಮುಂಗಾರು ಮಳೆಯು ಅರುಣಾಚಲ ಪ್ರದೇಶ, ತ್ರಿಪುರ, ನಾಗಲ್ಯಾಂಡ್, ಮೇಘಾಲಯ, ಮಿಜೋರಾಂ, ಮಣಿಪುರ ಹಾಗೂ ಅಸ್ಸಾಂ ರಾಜ್ಯಗಳಿಗೆ ಜೂನ್‌ 5 ರಂದು ಆಗಮಿಸಬೇಕಿತ್ತು.

ಭಾರತದ ಕೃಷಿ ಭೂಮಿಗೆ ಮುಂಗಾರು ಮಳೆ ನಿರ್ಣಾಯಕವಾಗಿದ್ದು, ಶೇ.52 ರಷ್ಟು ಪ್ರದೇಶದ ಉತ್ಪಾದನೆ ಇದರಿಂದ ಅವಲಂಬಿತವಾಗಿದೆ.ದೇಶಾದ್ಯಂತ ವಿದ್ಯುತ್‌ ಉತ್ಪಾದನೆಯ ಹೊರತಾಗಿ ಕುಡಿಯುವ ನೀರಿಗಾಗಿ ಜಲಾಶಯಗಳಿಗೆ ಮರುಪೂರಣಗೊಳಿಸುವುದು ಕೂಡ ನಿರ್ಣಾಯಕವಾಗಿದೆ.

ವಿಜ್ಞಾನಿಗಳ ಪ್ರಕಾರ ಮುಂಗಾರು ಮಳೆ ಕಡಿಮೆಗೊಳಿಸುವ ಎನ್‌ ನಿನೊ ಸದ್ಯ ಚಾಲ್ತಿಯಲ್ಲಿದ್ದರೂ ಮುಂಗಾರನ್ನು ಹೆಚ್ಚಿಸುವ ಲಾ ನಿನೊ ಆಗಸ್ಟ್‌ – ಸೆಪ್ಟೆಂಬರ್‌ನಲ್ಲಿ ಆರಂಭವಾಗಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...