‘ಇಂಡಿಯಾ’ದ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಎನ್‌ಡಿಎ ಸೇರ್ಪಡೆ ಸಾಧ್ಯತೆ!

Date:

ಬಿಹಾರ ಸಿಎಂ ನಿತೀಶ್ ಕುಮಾರ್ ಎನ್‌ಡಿಎ ಸೇರ್ಪಡೆಯ ನಂತರ ‘ಇಂಡಿಯಾ’ ಒಕ್ಕೂಟಕ್ಕೆ ಮತ್ತೊಂದು ಹಿನ್ನೆಡೆಯಾಗುವ ಸಾಧ್ಯತೆಯಿದೆ. ಇಂಡಿಯಾ ಒಕ್ಕೂಟದ ಆರ್‌ಎಲ್‌ಡಿ ನಾಯಕ ಜಯಂತ್ ಚೌಧರಿ ಬಿಜೆಪಿ ನಾಯಕರೊಂದಿಗೆ ಮಾತುಕತೆ ನಡೆಸಿದ್ದು,ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಒಕ್ಕೂಟ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ.

ನಿಕಟ ಮೂಲಗಳ ಬೆಳವಣಿಗೆಗಳ ಪ್ರಕಾರ, ಬಿಜೆಪಿಯು ಆರ್‌ಎಲ್‌ಡಿಗೆ ನಾಲ್ಕು ಲೋಕಸಭಾ ಸ್ಥಾನಗಳನ್ನು ಬಿಟ್ಟುಕೊಡುವ ಸಾಧ್ಯತೆಯಿದೆ.

ಮೂಲಗಳು ಹೇಳುವಂತೆ ಬಿಜೆಪಿ ನಾಯಕರನ್ನು ಜಯಂತ್‌ ಚೌಧರಿ ದೆಹಲಿಯಲ್ಲಿ ಇಂದು ಭೇಟಿ ಮಾಡಿದ್ದು, ಎರಡೂ ಪಕ್ಷಗಳು ಕೆಲವೇ ತಿಂಗಳು ಬಾಕಿಯಿರುವ ಲೋಕಸಭಾ ಚುನಾವಣೆಯಲ್ಲಿ ಕೈಜೋಡಿಸಲಿವೆ ಎನ್ನುವುದು ಊಹಾಪೋಹಗಳಿಗೆ ಮತ್ತಷ್ಟು ಉತ್ತೇಜನ ನೀಡುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚಿನ ದಿನಗಳಲ್ಲಿ ಜಯಂತ್ ಚೌಧರಿ ಕೂಡ ಇಂಡಿಯಾ ಒಕ್ಕೂಟದಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಉತ್ತರ ಪ್ರದೇಶದ ಚಪ್ರೋಲಿಯಲ್ಲಿ ನಡೆಯಬೇಕಿದ್ದ ಜಯಂತ್ ಚೌಧರಿ ತಾತ ಮಾಜಿ ಪ್ರಧಾನಿ ಚೌಧರಿ ಚರಣ್‌ ಸಿಂಗ್‌ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ರದ್ದುಗೊಳಿಸಿದ್ದರು. ಮತ್ತೊಂದು ಊಹಾಪೋಹಗಳಂತೆ ಆರ್‌ಎಲ್‌ಡಿ ಎನ್‌ಡಿಎ ಕೂಟಕ್ಕೆ ಸೇರ್ಪಡೆಯಾದರೆ ನರೇಂದ್ರ ಮೋದಿ ಅವರು ಚೌಧರಿ ಚರಣ್‌ ಸಿಂಗ್‌ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರ ರಥ, ರಕ್ತ ಮತ್ತು ಭಾರತ ರತ್ನ

ಇತ್ತೀಚಿನ ದಿನಗಳಲ್ಲಿ ಜಯಂತ್ ಅವರು ಸಂಸತ್ತಿಗೂ ಗೈರು ಹಾಜರಾಗುತ್ತಿರುವುದು ಕೂಡ ಆಡಳಿತ ಪಕ್ಷದೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ ಎನ್ನುತ್ತಿದೆ ಮತ್ತೊಂದು ಮೂಲಗಳು.

ಇಂಡಿಯಾ ಒಕ್ಕೂಟದ ಮತ್ತೊಂದು ಪಕ್ಷವಾದ ಎಸ್‌ಪಿ ಹಾಗೂ ಆರ್‌ಎಲ್‌ಡಿ ನಡುವಿನ ಸಂಬಂಧ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ವಿಷಯವಾಗಿ ಹೆಚ್ಚಿನ ಸ್ಪಷ್ಟತೆ ಕೂಡ ಕಂಡುಬಂದಿಲ್ಲ. ಜನವರಿ 19 ರಂದು ನಡೆದ ಎರಡೂ ಪಕ್ಷಗಳ ಸಭೆಯಲ್ಲಿ ಆರ್‌ಎಲ್‌ಡಿಗೆ 7 ಕ್ಷೇತ್ರ ನೀಡಲಾಯಿತು. ಆದರೆ ಮೂರು ಕ್ಷೇತ್ರಗಳಲ್ಲಿ ಆರ್‌ಎಲ್‌ಡಿ ಪಕ್ಷದ ಚಿಹ್ನೆಯಡಿ ಎಸ್‌ಪಿ ಅಭ್ಯರ್ಥಿಗಳು ಕಣಕ್ಕಿಳಿಯಬೇಕು ಎಂದು ಷರತ್ತು ವಿಧಿಸಿದ ಕಾರಣ ಉಭಯ ಪಕ್ಷಗಳಲ್ಲಿ ಆಂತರಿಕ ಭಿನ್ನಾಭಿಪ್ರಾಯ ವ್ಯಕ್ತವಾಯಿತು.

ಒಟ್ಟು 80 ಲೋಕಸಭಾ ಕ್ಷೇತ್ರಗಳ ಉತ್ತರ ಪ್ರದೇಶದಲ್ಲಿ 11 ಕ್ಷೇತ್ರಗಳನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವುದಾಗಿ ಎಸ್‌ಪಿ ಹೇಳಿದೆ. 2019ರಲ್ಲಿ ಎಸ್‌ಪಿ 65 ಕ್ಷೇತ್ರಗಳಲ್ಲಿ ಸ್ಪರ್ಧಿಸಿ 5ರಲ್ಲಿ ಗೆಲುವು ಸಾಧಿಸಿತ್ತು. ಬಿಜೆಪಿ 62, ಬಿಎಸ್‌ಪಿ 10, ಅಪ್ನಾದಳ 2 ಹಾಗೂ ಕಾಂಗ್ರೆಸ್ 1 ಕ್ಷೇತ್ರಗಳಲ್ಲಿ ಜಯಗಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...