ಆಗ್ರಾದಲ್ಲಿ ಭಾರಿ ಮಳೆಯ ಆರ್ಭಟ: ತಾಜ್ ಮಹಲ್‌ ಗೋಡೆಗಳಲ್ಲಿ ಬಿರುಕು

Date:

ಆಗ್ರಾದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ವಿಶ್ವ ವಿಖ್ಯಾತ ಪ್ರವಾಸಿ ತಾಣ ತಾಜ್ ಮಹಲ್‌ನ ಗೋಡೆಗಳು, ನೆಲ ಹಾಗೂ ಹಲವೆಡೆ ಬಿರುಕುಗಳು ಆಣಿಸಿಕೊಂಡಿವೆ.

ಈ ಕುರಿತಾಗಿ ಭಾರತೀಯ ಟೂರಿಸ್ಟ್‌ ಗೈಡ್ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಶಕೀಲ್ ಚೌಹಾಣ್ ಅವರು ಮಾಹಿತಿ ನೀಡಿದ್ದು, ತಾಜ್ ಮಹಲ್‌ನ ಮುಖ್ಯ ಗುಮ್ಮಟದ ಸುತ್ತ ಇರುವ ಬಾಗಿಲುಗಳ ಮೇಲೆ ಅರೇಬಿಕ್ ಭಾಷೆಯಲ್ಲಿ ಕುರಾನ್‌ನ ಸಾಲುಗಳನ್ನ ಬರೆಯಲಾಗಿದೆ. ಈ ಸಾಲುಗಳು ಅಳಿಸಿ ಹೋಗುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಗೋಡೆಗಳಿಗೆ ಅಳವಡಿಕೆ ಮಾಡಲಾಗಿದ್ದ ಅಮೂಲ್ಯ ಶಿಲೆಗಳೂ ಕೂಡಾ ಸವೆಯುತ್ತಿವೆ. ನೆಲ ಹಾಸಿನಲ್ಲಿ ಇದ್ದ ಕಲ್ಲುಗಳೂ ಕಿತ್ತು ಹೋಗುತ್ತಿವೆ. ಗುಮ್ಮಟಗಳು, ಗೋಡೆಗಳು, ವಸ್ತು ಸಂಗ್ರಹಾಲಯದ ನೆಲ ಹಾಸುಗಳು ಬಿರುಕು ಬಿಟ್ಟಿರುವುದನ್ನು ಕಾಣಬಹುದು ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ ಭಾರತೀಯ ಪುರಾತತ್ವ ಇಲಾಖೆ ಮಾತ್ರ ಈ ಕಟ್ಟಡಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಹೇಳುತ್ತಿದೆ. ಇದು ತಪ್ಪು ಎಂದು ಟೂರಿಸ್ಟ್‌ ಗೈಡ್‌ಗಳ ಶ್ರೇಯೋಭಿವೃದ್ದಿ ಒಕ್ಕೂಟದ ಅಧ್ಯಕ್ಷ ದೀಪಕ್ ದಾನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಜ್ ಮಹಲ್ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಪ್ರವಾಸಿ ತಾಣ. ಈ ತಾಣಕ್ಕೆ ಹಾನಿಯಾಗಿದೆ ಎಂಬ ಮಾಹಿತಿ ಹೊರ ಬಿದ್ದರೆ ಅದು ತಪ್ಪಾಗುತ್ತದೆ. ಹೀಗಾಗಿ, ರಾಷ್ಟ್ರದ ಅತಿ ದೊಡ್ಡ ಪ್ರವಾಸಿ ತಾಣವಾದ ತಾಜ್ ಮಹಲ್‌ನ ಅಭಿವೃದ್ದಿಗೆ ಹಾಗೂ ಹಾನಿ ಸರಿಪಡಿಸುವ ಕೆಲಸಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿಯ ‘ಪಾಕಿಸ್ತಾನ’ ಹೇಳಿಕೆ: ಸುಪ್ರೀಂನಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಆದರೆ, ಭಾರತೀಯ ಪುರಾತತ್ವ ಇಲಾಖೆ ಮಾತ್ರ ಗಂಭೀರ ಪ್ರಮಾಣದ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಹೇಳುತ್ತಿದೆ. ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಇರುವ ತಾಜ್ ಮಹಲ್‌ಗೆ ಸುರಕ್ಷತೆ ಬೇಕಿದೆ. ಬೇಜವಾಬ್ದಾರಿತನ, ಭ್ರಷ್ಟಾಚಾರ ಹಾಗೂ ದುರಾಡಳಿತದಿಂದಾಗಿ ತಾಜ್ ಮಹಲ್‌ಗೆ ಬಳಕೆ ಆಗಬೇಕಿದ್ದ ಅನುದಾನ ದುರ್ಬಳಕೆ ಆಗುತ್ತಿದೆ ಎಂದು ಕೆಲವರು ಆಪಾದಿಸಿದ್ದಾರೆ. ಆದರೆ, ಭಾರತೀಯ ಪುರಾತತ್ವ ಇಲಾಖೆ ಮಾತ್ರ ತಾಜ್‌ ಮಹಲ್‌ಗೆ ನೀಡಲಾಗುವ ಅನುದಾನದ ಕುರಿತಾಗಿ ಕಾಲ ಕಾಲಕ್ಕೆ ಲೆಕ್ಕ ಪತ್ರ ಪರಿಶೀಲನೆ ನಡೆಯುತ್ತಿದೆ ಎಂದೇ ಸ್ಪಷ್ಟನೆ ನೀಡಿದೆ.

ಈ ಕುರಿತು ಮಾಹಿತಿ ನೀಡಿರುವ ಪುರಾತತ್ವ ತಜ್ಞ ರಾಜಕುಮಾರ್ ಪಟೇಲ್, ತಾಜ್ ಮಹಲ್ ರಕ್ಷಣೆಗೆ ಆಗಾಗ ಕಾಮಗಾರಿ ನಡೆಯುತ್ತಿದೆ. ಅಲ್ಲಲ್ಲಿ ದುರಸ್ತಿ ಹಾಗೂ ತೇಪೆ ಹಾಕುವ ಕೆಲಸವನ್ನೂ ಮಾಡುತ್ತಿದ್ದೇವೆ. ಇದಕ್ಕಾಗಿ ನಾವು ವೈಜ್ಞಾನಿಕ ಮಾರ್ಗಸೂಚಿಯನ್ವಯ ಕೆಲಸ ಮಾಡುತ್ತಿದ್ದೇವೆ. ಸ್ಮಾರಕದ ರಕ್ಷಣೆಯೇ ನಮ್ಮ ಗುರಿ ಎಂದು ಮಾಹಿತಿ ನೀಡಿದ್ದಾರೆ.

ಆದರೆ ತಾಜ್ ಮಹಲ್‌ನ ಗೋಡೆಗಳಲ್ಲಿ ಗಿಡಗಳು ಬೆಳೆಯುತ್ತಿವೆ. ಅದರಲ್ಲೂ ತಾಜ್ ಮಹಲ್‌ನ ಕೇಂದ್ರೀಯ ಗುಮ್ಮಟದ ಬಳಿಯಲ್ಲೇ ಗಿಡ ಬೆಳೆದಿದೆ. ಜೊತೆಗೆ ಅಲ್ಲಲ್ಲಿ ಮಳೆ ನೀರು ಕೂಡ ನಿಲ್ಲುತ್ತಿದೆ. ಕೆಲವು ದಿನಗಳ ಹಿಂದೆ ಕಟ್ಟಡದ ಒಳಗೆ ಮಳೆ ಬಂದಾಗ ನೀರು ಸೋರುತ್ತಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...