ಮಧ್ಯಪ್ರದೇಶ: ದಲಿತ ಸರಪಂಚರಿಗೆ ಸ್ವಾತಂತ್ರ್ಯ ದಿನದ ಧ್ವಜಾರೋಹಣಕ್ಕೆ ಶಾಲಾ ಪ್ರಾಂಶುಪಾಲರಿಂದ ತಡೆ

Date:

ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಂದು ದಲಿತ ಸಮುದಾಯರೆಂಬ ಕಾರಣಕ್ಕೆ ಗ್ರಾಮದ ಸರಪಂಚರೊಬ್ಬರಿಗೆ ಮೇಲ್ಜಾತಿಗೆ ಸೇರಿದ ಶಾಲಾ ಪ್ರಾಂಶುಪಾಲರೊಬ್ಬರು ರಾಷ್ಟ್ರೀಯ ಧ್ವಜವನ್ನು ಹಾರಿಸುವುದಕ್ಕೆ ತಡೆಯೊಡ್ಡುವುದರ ಜೊತೆಗೆ ಜಾತಿ ನಿಂದನೆ ಮಾಡಿರುವ ಘಟನೆ ಮಧ್ಯಪ್ರದೇಶದ ವಿಧಿಶಾ ಜಿಲ್ಲೆಯ ಭಗವಂತಪುರ ಗ್ರಾಮದ ಶಾಲೆಯಲ್ಲಿ ನಡೆದಿದೆ.

ದಲಿತ ಸಮುದಾಯರೆಂಬ ಕಾರಣಕ್ಕೆ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಮೇಲ್ಜಾತಿಯ ಪ್ರಾಂಶುಪಾಲರಾದ ಶೋಭಾ ಶ್ರೀವಾಸ್ತವ್ ರಾಷ್ಟ್ರೀಯ ಧ್ವಜವನ್ನು ಹಾರಿಸಲು ಸರಪಂಚ ಬರೆಲಾಲ್ ಅಹಿರ್ವರ್ ಅವರಿಗೆ ಅವಕಾಶ ನೀಡಲು ನಿರಾಕರಿಸಿದ್ದಾರೆ ಎಂದು ಗ್ರಾಮದ ಮುಖ್ಯಸ್ಥರು ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿದ್ದ ಪಂಚಾಯತ್ ಕಾರ್ಯದರ್ಶಿ ಅಮೀರ್ ಹಮ್ಜಾ, “ಸಾಮಾನ್ಯವಾಗಿ, ಸರಪಂಚರು ಮೊದಲು ಪಂಚಾಯತ್ ಕಟ್ಟಡದಲ್ಲಿ ಧ್ವಜಾರೋಹಣ ಮಾಡುತ್ತಾರೆ. ನಂತರ ಸರಿಯಾದ ಸೂಚನೆ ಪಡೆದ ನಂತರ ಧ್ವಜಾರೋಹಣ ಮಾಡಲು ಶಾಲೆಗೆ ಹೋಗುತ್ತಾರೆ. ಆದರೆ ಸರಪಂಚರಿಗೆ ಧ್ವಜಾರೋಹಣ ಮಾಡಲು ನಿರಾಕರಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿ ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಹಗರಣ ತಾಂಡವ | ಚಿಕಿತ್ಸೆಗೆ ಫಲಾನುಭವಿಗಳಿಂದ ಹಣ ಪಾವತಿ; ಸಿಎಜಿ ವರದಿಯಲ್ಲಿ ಉಲ್ಲೇಖ

“ಶಾಲಾ ಪ್ರಾಂಶುಪಾಲರು ನೀವು ದಲಿತರು, ನಿಮಗೆ ಏನು ಗೊತ್ತು ಎಂದು ಕೇಳುತ್ತಾರೆ. ಇಂದು(ಆಗಸ್ಟ್‌ 15), ಸ್ವಾತಂತ್ರ್ಯ ದಿನದಂದು, ನನ್ನನ್ನು ಶಾಲೆಗೆ ಆಹ್ವಾನಿಸಲಾಗಿಲ್ಲ ಹಾಗೂ ಪಂಚಾಯತಿ ರಾಜ್ ಕಾಯ್ದೆಯ ನಿಬಂಧನೆಗಳ ಹೊರತಾಗಿಯೂ, ಧ್ವಜವನ್ನು ಹಾರಿಸಲು ಬೇರೊಬ್ಬರಿಗೆ ಅವಕಾಶ ನೀಡಲಾಯಿತು. ನಾನು ಇದನ್ನು ವಿರೋಧಿಸಿದಾಗ, ಪ್ರಾಂಶುಪಾಲರು ನನ್ನನ್ನು ಜಾತಿ ಆಧಾರಿತದಲ್ಲಿ ನಿಂದಿಸಿದರು. ಒಂದೆಡೆ ದೇಶ ಸ್ವಾತಂತ್ರ್ಯ ಸಂಭ್ರಮದಲ್ಲಿದ್ದರೆ, ಮತ್ತೊಂದೆಡೆ ದಲಿತರ ವಿರುದ್ಧ ಜಾತಿ ಆಧಾರಿತ ತಾರತಮ್ಯ ನಡೆಯುತ್ತಿದೆ” ಎಂದು ಸರಪಂಚ ಅಹಿರ್ವರ್ ಬೇಸರ ವ್ಯಕ್ತಪಡಿಸಿದರು.

ಸ್ಥಳೀಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ ಹರ್ಷಲ್ ಚೌಧರಿ, ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಪಂಚಾಯಿತಿ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಜಾತಿ ಆಧಾರಿತ ನಿಂದನೆ ಆರೋಪಗಳು ನಿಜವೆಂದು ಕಂಡುಬಂದರೆ, ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಚೌಧರಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...