ಸಹಜೀವನ ಸಂಗಾತಿಯನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ!

Date:

ವ್ಯಕ್ತಿಯೊಬ್ಬ ತನ್ನ ಸಹ ಜೀವನ ಸಂಗಾತಿ ಮಹಿಳೆಯನ್ನು ಕೊಂದು, ಮೃತದೇಹವನ್ನು ತುಂಡುತುಂಡಾಗಿ ಕತ್ತರಿಸಿ ಕುಕ್ಕರಲ್ಲಿ ಬೇಯಿಸಿದ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ.

56 ವರ್ಷದ ಆರೋಪಿ ಮನೋಜ್ ಸಹಾನಿ ಎಂಬಾತ 32 ವರ್ಷದ ಸರಸ್ವತಿ ವೈದ್ಯ ಮಹಿಳೆಯನ್ನು ಬರ್ಬರವಾಗಿ ಕೊಂದಿದ್ದಾನೆ. ಕಳೆದ ಮೂರು ವರ್ಷಗಳಿಂದ ಮೀರಾ ರೋಡ್ ಪ್ರದೇಶದ ಆಕಾಶಗಂಗಾ ಕಟ್ಟಡದ ಬಾಡಿಗೆ ಫ್ಲಾಟ್‌ನಲ್ಲಿ ಇವರಿಬ್ಬರು ವಾಸವಾಗಿದ್ದರು.

3–4 ದಿನಗಳ ಹಿಂದೆ ಸರಸ್ವತಿಯನ್ನು ಕೊಂದಿದ್ದ ಮನೋಜ್, ಮರ ಕತ್ತರಿಸುವ ಯಂತ್ರವನ್ನು ಖರೀದಿಸಿ ಆಕೆಯ ದೇಹವನ್ನು 12 ತುಂಡು ಮಾಡಿದ್ದ. ಬಳಿಕ, ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಿ, ಹೊರಗೆ ಎಸೆಯುವುದಕ್ಕಾಗಿ ಪ್ಲಾಸ್ಟಿಕ್ ಪೇಪರ್‌ನಲ್ಲಿ ಸುತ್ತಿಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಆರ್‌ಬಿಐ ಹಣಕಾಸು ನೀತಿ ಸಭೆ ಮುಕ್ತಾಯ; ರೆಪೊ ದರ ಯಥಾಸ್ಥಿತಿ ಕಾಯ್ದುಕೊಳ್ಳಲು ನಿರ್ಧಾರ

ಫ್ಲಾಟ್‌ನಲ್ಲಿ ಕೆಟ್ಟ ವಾಸನೆ ಬರುತ್ತಿರುವುದನ್ನು ಗಮನಿಸಿದ ನೆರೆಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದಾಗ ಸರಸ್ವತಿ ಅವರ ಕೊಳೆತ ಮೃತದೇಹ ಕಂಡುಬಂದಿದೆ.

“ಆರೋಪಿ ಮತ್ತು ಹತ್ಯೆಯಾದ ಮಹಿಳೆ ಸಹಜೀವನ ಸಂಬಂಧದಲ್ಲಿ ವಾಸಿಸುತ್ತಿದ್ದರು. ಪ್ರಾಥಮಿಕ ತನಿಖೆಯಲ್ಲಿ ಮಹಿಳೆಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ತನಿಖೆ ನಡೆಯುತ್ತಿದೆ” ಎಂದು ಮುಂಬೈನ ಉಪ ಪೊಲೀಸ್ ಆಯುಕ್ತ ಜಯಂತ್ ಬಜ್ಬಲೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...