ಮುಂಬೈ ರೈಲುಗಳಲ್ಲಿ ತಾಂತ್ರಿಕ ತೊಂದರೆ; ನಡೆದು ಕಚೇರಿಗೆ ತೆರಳಿದ ಪ್ರಯಾಣಿಕರು

Date:

ಮುಂಬೈ ಸ್ಥಳೀಯ ರೈಲು ಸೇವೆಯಲ್ಲಿ ತಾಂತ್ರಿಕ ತೊಂದರೆಯುಂಟಾದ ಕಾರಣ ಹಲವು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾಯಿತು. ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ಮಾರ್ಗದಲ್ಲಿ 15 ನಿಮಿಷಗಳ ಕಾಲ ತಾಂತ್ರಿಕ ಸಮಸ್ಯೆಯುಂಟಾಗಿದೆ.

ತಾಂತ್ರಿಕ ಸಮಸ್ಯೆಯುಂಟಾಗಿ ಬೇರೆ ಮಾರ್ಗಗಳಲ್ಲಿ ಆಗಮಿಸಿದ ಕಾರಣ ಸುಮಾರು 35 ನಿಮಿಷಗಳ ಕಾಲ ಹಲವು ಸ್ಥಳೀಯ ರೈಲುಗಳ ಸಂಚಾರಕ್ಕೆ ತೊಂದರೆಯಾಯಿತು.

ರೈಲುಗಳು ಸರಿಯಾದ ಸಮಯಕ್ಕೆ ಸಿಗದ ಕಾರಣ ನೂರಾರು ಪ್ರಯಾಣಿಕರು ನಡೆದುಕೊಂಡು ತಮ್ಮ ಕಚೇರಿಗಳಿಗೆ ತೆರಳಿದರು. ಪ್ರಯಾಣಿಕರು ಕಚೇರಿಗಳ ಕಡೆ ತೆರಳಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

“ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ನಡುವೆ ತಾಂತ್ರಿಕ ತೊಂದರೆಯಿಂದ 15 ನಿಮಿಷಗಳ ಕಾಲ ತೊಂದರೆಯುಂಟಾಯಿತು. ಇದರಿಂದ ಸುಮಾರು 7.45 ರಿಂದ 8.20ರವರೆಗೂ ಪ್ರಯಾಣಿಕರು ರೈಲು ಲಭ್ಯತೆಯಲ್ಲಿ ತೊಂದರೆಯುಂಟಾಯಿತು. ಕೆಲವು ರೈಲುಗಳು ಬೇರೆ ಮಾರ್ಗಗಳಿಂದ ಬಂದ ಕಾರಣ ಕೆಲವು ನಿಮಿಷಗಳವರೆಗೆ ತಡೆಯುಂಟಾಯಿತು” ಎಂದು ಕೇಂದ್ರ ರೈಲ್ವೆ ಹೇಳಿಕೆಯಲ್ಲಿ ತಿಳಿಸಿದೆ.

ಮಾತುಂಗ ಹಾಗೂ ಸಿಯಾನ್ ನಿಲ್ದಾಣಗಳ ನಡುವೆಯಿರುವ ಯುಪಿ ಪಾಸ್ಟ್ ಮಾರ್ಗದ ರೈಲ್ವೆ ಹಳಿಯ ಮೇಲೆ ಬಿದರಿನಲ್ಲಿ ನಿರ್ಮಿಸಲಾಗಿದ್ದ ಆಕೃತಿ ಬಿದ್ದ ಕಾರಣ ಈ ಘಟನೆ ಸಂಭವಿಸಿದೆ. ಘಟನೆ ನಡೆದು ರೈಲುಗಳ ಸಂಚಾರಕ್ಕೆ ಅಡ್ಡಿಯುಂಟಾದ ನಂತರ ಹಲವು ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಪರಿಹರಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಸ್ಥಳೀಯ ರೈಲುಗಳಲ್ಲಿ ನಿತ್ಯ 70 ಲಕ್ಷಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಾರೆ. ಕೇಂದ್ರ ರೈಲ್ವೆ ಹಾಗೂ ಪಶ್ಚಿಮ ರೈಲ್ವೆ ಈ ಸೌಲಭ್ಯವನ್ನು ದೊರಕಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...