ನಟಿ ಸೌಂದರ್ಯ ಸಾವು ಅಪಘಾತವಲ್ಲ ಕೊಲೆ; ಎರಡು ದಶಕಗಳ ಬಳಿಕ ಮೋಹನ್ ಬಾಬು ವಿರುದ್ಧ ದೂರು ದಾಖಲು

Date:

ನಟಿ ಸೌಂದರ್ಯ ಸಾವು ಅಪಘಾತವಲ್ಲ ಕೊಲೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಸೌಂದರ್ಯ ಮೃತಪಟ್ಟ ಸುಮಾರು ಎರಡು ದಶಕಗಳ ಬಳಿಕ ತೆಲುಗಿನ ಹಿರಿಯ ನಟ ಮೋಹನ್ ಬಾಬು ವಿರುದ್ಧ ದೂರು ದಾಖಲಾಗಿದೆ.

ಈ ಸಾವು ಅಪಘಾತದಿಂದ ಸಂಭವಿಸಿರುವುದಲ್ಲ. ಮೋಹನ್ ಬಾಬು ಮತ್ತು ಸೌಂದರ್ಯ ನಡುವೆ ಆಸ್ತಿ ವ್ಯಾಜ್ಯವಿತ್ತು. ಈ ವಿಚಾರದಲ್ಲಿಯೇ ಕೊಲೆಯಾಗಿದೆ ಎಂದು ಆರೋಪಿಸಿ ಆಂಧ್ರಪ್ರದೇಶದ ಖಮ್ಮಂ ಜಿಲ್ಲೆಯ ಪೊಲೀಸ್ ಠಾಣೆಯೊಂದರಲ್ಲಿ ಚಿಟ್ಟಿಮಲ್ಲು ಎಂಬವರು ದೂರು ದಾಖಲಿಸಿದ್ದಾರೆ.

ಇದನ್ನು ಓದಿದ್ದೀರಾ? ಸೌಂದರ್ಯ ಜಗದೀಶ್ ಆತ್ಮಹತ್ಯೆ | ಬಿಸಿನೆಸ್ ಪಾಲುದಾರರ ವಿರುದ್ಧ ಎಫ್‌ಐಆರ್‌ ದಾಖಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೆಲುಗು ನಟ ಮೋಹನ್ ಬಾಬು ಅವರು, ಶಂಶಾಬಾದ್‌ನ ಗ್ರಾಮವೊಂದರಲ್ಲಿ ಇರುವ ಸುಮಾರು ಆರು ಎಕರೆ ಭೂಮಿಯನ್ನು ಮಾರಾಟ ಮಾಡುವಂತೆ ನಟಿ ಸೌಂದರ್ಯ ಮತ್ತು ಅವರ ಸಹೋದರನ ಮೇಲೆ ಒತ್ತಡ ಹಾಕುತ್ತಿದ್ದರು. ಅದರೆ ಇಬ್ಬರೂ ಜಮೀನು ಮಾರಾಟ ಮಾಡಲು ಒಪ್ಪದ ಕಾರಣ ಸೌಂದರ್ಯ ಮತ್ತು ಮೋಹನ್ ಬಾಬು ನಡುವೆ ವೈಮನಸ್ಸು ಉಂಟಾಗಿತ್ತು. ನಟಿ ಮೃತಪಟ್ಟ ಬಳಿಕ ಮೋಹನ್ ಬಾಬು ಆ ಜಮೀನನ್ನು ಬಲವಂತವಾಗಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ.

ಈವರೆಗೆ ದೂರುದಾರ ಮತ್ತು ಸೌಂದರ್ಯ, ಅವರ ಸಹೋದರನ ನಡುವೆ ಯಾವ ಸಂಬಂಧವಿದೆ ಎಂಬುದು ಬಹಿರಂಗವಾಗಿಲ್ಲ. ಹಾಗೆಯೇ ಈ ದೂರಿಗೆ ಸಂಬಂಧಿಸಿದಂತೆ ಯಾವುದೇ ಎಫ್‌ಐಆರ್ ಕೂಡಾ ಈವರೆಗೂ ದಾಖಲಾಗಿಲ್ಲ.

2004ರ ಏಪ್ರಿಲ್ 17ರಂದು ಸೌಂದರ್ಯ ಬಿಜೆಪಿ ಮತ್ತು ಟಿಡಿಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡಲು ಕರೀಂನಗರಕ್ಕೆ ಹೋಗುತ್ತಿದ್ದಾಗ ಅವರ ಖಾಸಗಿ ವಿಮಾನ ಅಪಘಾತಕ್ಕೀಡಾಗಿದ್ದು, ಸೌಂದರ್ಯ ಮೃತಪಟ್ಟಿದ್ದಾರೆ. ಸೌಂದರ್ಯ ದೇಹ ಸಂಪೂರ್ಣವಾಗಿ ಸುಟ್ಟುಹೋಗಿತ್ತು. ಈ ಘಟನೆ ನಡೆದ 21 ವರ್ಷಗಳ ಬಳಿಕ ಇದೀಗ ಸ್ಟಾರ್ ನಟನ ವಿರುದ್ಧ ದೂರು ದಾಖಲಾಗಿದೆ.

ಇದನ್ನು ಓದಿದ್ದೀರಾ? ಸೌಂದರ್ಯ ವಿಕೃತಿ | ಮದುವೆ ಬಳಿಕ ದಪ್ಪ ಆಗಿದ್ದಾರೆಂದು ಪತ್ನಿಗೆ ಪತಿಯಿಂದ ಕಿರುಕುಳ

ಚಿಟ್ಟಿಮಲ್ಲು ಖಮ್ಮಂ ಎಸಿಪಿ ಮತ್ತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂಬ ಬಗ್ಗೆ ಈವರೆಗೂ ಯಾವುದೇ ಪುರಾವೆ ಲಭ್ಯವಾಗಿಲ್ಲ. ಅಷ್ಟು ಮಾತ್ರವಲ್ಲದೆ ಅಪಘಾತವಾದ ಬೆನ್ನಲ್ಲೇ ಮೋಹನ್ ಬಾಬು ಅಕ್ರಮವಾಗಿ ಭೂಮಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ದೂರುದಾರರು ಹೇಳಿದ್ದಾರೆ.

ಹಾಗೆಯೇ ಮೋಹನ್ ಬಾಬು ವಶಪಡಿಸಿಕೊಂಡಿದರುವ ಭೂಮಿಯನ್ನು ಅನಾಥಾಶ್ರಮ, ಪೊಲೀಸರು, ಮಿಲಿಟರಿ ಮತ್ತು ಮಾಧ್ಯಮ ಸ್ನೇಹಿತರಿಗೆ ನೀಡಬೇಕು ಎಂದು ದೂರುದಾರರು ಒತ್ತಾಯಿಸಿದ್ದಾರೆ. ಜೊತೆಗೆ “ನಟ ಮೋಹನ್ ಬಾಬುವಿನಿಂದ ನನ್ನ ಜೀವಕ್ಕೆ ಅಪಾಯವಿದೆ. ಅವರಿಂದ ನನಗೆ ರಕ್ಷಣೆ ಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನು ನಟಿ ಸಾವಿನ ಬೆನ್ನಲ್ಲೇ ಹಲವು ಊಹಾಪೋಹಗಳು ಹರಡಿದ್ದವು. ಇದು ಅಪಘಾತವಲ್ಲ, ಕೊಲೆ ಎಂಬ ಅನುಮಾನಗಳನ್ನು ಹಲವು ಮಂದಿ ವ್ಯಕ್ತಪಡಿಸಿದ್ದರು. ಆದರೆ ದಿನ ಕಳೆದಂತೆ ಈ ಪ್ರಕರಣ ಮುಚ್ಚಿಹೋಗಿತ್ತು. ಅಪಘಾತ ಎಂದು ಘೋಷಿಸಲಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...