ಎಕ್ಸ್ ಖಾತೆ ಸ್ಥಗಿತಗೊಳಸಲು ಹೊರಟ ಕ್ರಮ ಪ್ರಜಾಪ್ರಭುತ್ವದ ಕಗ್ಗೊಲೆ: ಕಾಂಗ್ರೆಸ್ ಆಕ್ರೋಶ

Date:

ಕೇಂದ್ರ ಗೃಹ ಇಲಾಖೆಯ ಮನವಿಯ ಮೇರೆಗೆ ರೈತರ ಹೋರಾಟದಲ್ಲಿ ಭಾಗಿಯಾದ 177 ಖಾತೆಗಳ ತಾತ್ಕಾಲಿಕ ಸ್ಥಗಿತಕ್ಕೆ ಸಾಮಾಜಿಕ ಮಾಧ್ಯಮ ಎಕ್ಸ್‌ ಗೆ ಆದೇಶಿಸಿದ್ದ ಕೇಂದ್ರ ಮಾಹಿತಿ ತಂತ್ರಜ್ಞಾನ ಇಲಾಖೆ ವಿರುದ್ಧ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಈ ಬಗ್ಗೆ ಎಕ್ಸ್‌ನಲ್ಲಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ ಇದು ಭಾರತದ ಪ್ರಜಾಪ್ರಭುತ್ವದ ಕಗ್ಗೊಲೆ” ಎಂದು ತಿಳಿಸಿದ್ದಾರೆ.

“ಕೇಂದ್ರ ಸರ್ಕಾರ ‘ಎಕ್ಸ್‌’ ಸಂಸ್ಥೆಗೆ ಗಮನಾರ್ಹ ದಂಡಗಳು ಹಾಗೂ ಸೆರೆವಾಸದೊಂದಿಗೆ ಸಂಭಾವ್ಯ ದಂಡಗಳನ್ನು ಒಳಗೊಂಡು ನಿರ್ದಿಷ್ಟ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಾತ್ಕಾಲಿಕವಾಗಿ ರದ್ದುಪಡಿಸಲು ಆದೇಶಿಸಿತ್ತು. ಆದೇಶದ ಅನುಸರಣೆಯೊಂದಿಗೆ ನಾವು ಭಾರತದಲ್ಲಿ ಮಾತ್ರ ಈ ಖಾತೆಗಳು ಮತ್ತು ಪೋಸ್ಟ್‌ಗಳನ್ನು ತಡೆ ಹಿಡಿಯುತ್ತೇವೆ. ಆದಾಗ್ಯೂ ಈ ರೀತಿಯ ಕ್ರಮಗಳನ್ನು ನಾವು ಒಪ್ಪಿಕೊಳ್ಳುವುದಿಲ್ಲ.ಈ ಪೋಸ್ಟ್‌ಗಳಿಗ ಅಭಿವ್ಯಕ್ತ ಸ್ವಾತಂತ್ರವನ್ನು ವಿಸ್ತರಿಸಲು ಬಯಸುತ್ತೇವೆ” ಎಂದು ಎಕ್ಸ್ ಖಾತೆಯ ಜಾಗತಿಕ ಸರ್ಕಾರಿ ವ್ಯವಹಾರಗಳ ಸಂಸ್ಥೆ ಪ್ರತಿಕ್ರಿಯೆ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ರೈತ ಹೋರಾಟ | ಖಾತೆಗಳು, ಪೋಸ್ಟ್‌ಗಳನ್ನು ತಡೆಹಿಡಿಯಲು ಕೇಂದ್ರ ಸರ್ಕಾರ ಆದೇಶಿಸಿದೆ: ಎಕ್ಸ್‌

“ಕಾನೂನು ನಿರ್ಬಂಧಗಳ ಕಾರಣದಿಂದ ನಾವು ಸರ್ಕಾರಿ ಆದೇಶವನ್ನು ಪ್ರಕಟಿಸಲು ಸಾಧ್ಯವಿಲ್ಲ. ಆದರೆ ಅವುಗಳನ್ನು ಸಾರ್ವಜನಿಕಗೊಳಿಸುವುದು ಪಾರದರ್ಶಕತೆಯ ಅಗತ್ಯತೆ ಎಂದು ನಾವು ನಂಬುತ್ತೇವೆ. ಈ ರೀತಿಯ ಬಹಿರಂಗಗೊಳಿಸದಿರುವುದು ಪಾರದರ್ಶಕತೆ ಕೊರತೆ ಹಾಗೂ ಅನಿಯಂತ್ರಿತ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಕಾರಣವಾಗಬಹುದು”ಎಂದು ಎಕ್ಸ್‌ ಖಾತೆಯಲ್ಲಿ ತಿಳಿಸಲಾಗಿತ್ತು.

ಕಂಪನಿಯು ಪ್ರಭಾವಿತ ಬಳಕೆದಾರರಿಗೆ ಸಂಸ್ಥೆಯ ನೀತಿಯ ಅನುಸಾರವಾಗಿ ಸರ್ಕಾರಿ ಆದೇಶದ ಕ್ರಮದ ಬಗ್ಗೆ ಸೂಚನೆಗಳನ್ನು ನೀಡಲಾಗಿದೆ ಎಂದು ಹೇಳಲಾಗಿತ್ತು.

ಎಂಎಸ್‌ಪಿ ಹಾಗೂ ಇತರ ಬೇಡಿಕೆಗಳಿಗಾಗಿ ದೇಶಾದ್ಯಂತವಿರುವ 200ಕ್ಕೂ ಹೆಚ್ಚು ರೈತ ಸಂಘಟನೆಗಳು ದೆಹಲಿ ಚಲೋ ಮೂಲಕ ಪ್ರತಿಭಟನೆ ಹಮ್ಮಿಕೊಂಡಿದೆ.

ನಿನ್ನೆ(ಫೆ.22) ಹರಿಯಾಣ ಹಾಗೂ ಪಂಜಾಬ್‌ ಗಡಿಯಲ್ಲಿ ಪ್ರತಿಭಟನಾ ಸಮಯದಲ್ಲಿ ಪೊಲೀಸರು ನಡೆಸಿದ ದಾಳಿಯ ಪರಿಣಾಮ ಯುವ ರೈತನೊಬ್ಬ ಮೃತಪಟ್ಟಿದ್ದಾನೆ. ಘಟನೆಯಲ್ಲಿ 12 ಕ್ಕೂ ಹೆಚ್ಚು ಪೊಲೀಸರು ಸಹ ಗಾಯಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...