ಕೊಲೆಯಾಗಿದ್ದ ವ್ಯಕ್ತಿ 3 ವರ್ಷದ ಬಳಿಕ ಜೀವಂತವಾಗಿ ಪತ್ತೆ; ಆರೋಪಿ ಬಿಡುಗಡೆ

Date:

ಮೂರು ವರ್ಷಗಳ ಹಿಂದೆ ಕೊಲೆಯಾಗಿದ್ದಾರೆ ಎಂದು ನಂಬಲಾಗಿದ್ದ ವ್ಯಕ್ತಿ ಇದೀಗ ಬಿಹಾರದಲ್ಲಿ ಪತ್ತೆಯಾಗಿದ್ದಾರೆ. ಆತನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜೈಲು ಶಿಕ್ಷೆಗೆ ಗುರಿಯಾಗಿದ್ದ ಉತ್ತರ ಪ್ರದೇಶದ ವ್ಯಕ್ತಿಯನ್ನು ಇದೀಗ ಬಿಡುಗಡೆ ಮಾಡಲಾಗಿದೆ.

2022ರಲ್ಲಿ, ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲಾ ವ್ಯಾಪ್ತಿಯಲ್ಲಿ ರೈಲಿನಲ್ಲಿ ಪ್ರಯಾಣಿಸುವಾಗ ಮೊಬೈಲ್‌ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಬಿಹಾರದ ನಿವಾಸಿ ಎತಾಬ್ ಎಂಬವರನ್ನು ಅಯೋಧ್ಯೆಯ ಖೇಮಸರೈ ಗ್ರಾಮದ ನರೇಂದ್ರ ದುಬೆ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಪ್ರಕರಣದಲ್ಲಿ ನರೇಂದ್ರ ದುಬೆ ಅವರನ್ನು ಘಟನೆ ಬೆನ್ನಲ್ಲೇ ಬಂಧಿಸಲಾಗಿತ್ತು. ಆತನಿಗೆ ಕೊಲೆ ಆರೋಪದ ಮೇಲೆ ಜೈಲು ಶಿಕ್ಷೆಯನ್ನೂ ವಿಧಿಸಿ, ಜೈಲಿನಲ್ಲಿ ಇರಿಸಲಾಗಿತ್ತು.

ಆದರೆ, ಹತ್ಯೆಯಾಗಿದ್ದಾನೆ ಎಂದು ನಂಬಲಾಗಿದ್ದ ಎತಾಬ್‌ ಅವರು ಇದೀಗ ಪತ್ತೆಯಾಗಿದ್ದಾರೆ. ಇತ್ತೀಚೆಗೆ, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ವಿಡಿಯೋವೊಂದರಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ಈ ಬೆನ್ನಲ್ಲೇ, ಶಿಕ್ಷೆಗೆ ಗುರಿಯಾಗಿದ್ದ ದುಬೆ ಅವರ ಕುಟುಂಬವು ಶಹಜಹಾನ್‌ಪುರ ನ್ಯಾಯಾಲಯದ ಮೊರೆ ಹೋಗಿತ್ತು. ಆ ವ್ಯಕ್ತಿಯನ್ನು ನ್ಯಾಯಾಲಯಕ್ಕೆ ಕರೆಸಿದ ಕೋರ್ಟ್‌, ಕೊಲೆಯಾಗಿದ್ದಾನೆಂದು ನಂಬಲಾಗಿದ್ದ ವ್ಯಕ್ತಿಈತನೇ ಎಂಬುದನ್ನು ಖಾತ್ರಿ ಪಡಿಸಿಕೊಂಡಿದೆ. ಜೈಲು ಶಿಕ್ಷೆಗೆ ಗುರಿಯಾಗಿದ್ದ ನರೇಂದ್ರ ದುಬೆ ಅವರನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಕರಣದ ವಿವರ:

2022ರ ಡಿಸೆಂಬರ್ 16ರಂದು ದೆಹಲಿಯಿಂದ ಅಯೋಧ್ಯೆಗೆ ಯಾಣಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಗಲಾಟೆ ನಡೆದಿತ್ತು. ಶಹಜಹಾನ್‌ಪುರ ಜಿಲ್ಲೆಯ ತಿಲ್ಹಾರ್ ರೈಲು ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಿಂದ ಓರ್ವ ವ್ಯಕ್ತಿ ಮತ್ತೊಬ್ಬ ವ್ಯಕ್ತಿಯನ್ನು ಹೊರಗೆ ತಳ್ಳಿದ್ದಾನೆಂದು ಬರೇಲಿಯಲ್ಲಿ ನಿಯೋಜನೆಗೊಂಡಿದ್ದ ಜಿಆರ್‌ಪಿ ಕಾನ್‌ಸ್ಟೆಬಲ್ ಸತ್ಯವೀರ್ ಸಿಂಗ್ ಅವರಿಗೆ ಮಾಹಿತಿ ದೊರೆತಿತ್ತು.

ಘಟನೆ ಬಗ್ಗೆ ಅಯೋಧ್ಯೆ ನಿವಾಸಿಯಾದ ಅಲೋಕ್ ಎಂಬುವವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಾತ್ರವಲ್ಲದೆ, ಗಲಾಟೆಯ ವಿಡಿಯೋವನ್ನೂ ಒದಗಿಸಿದ್ದರು. ಬಳಿಕ, ಮರುದಿನವೇ ಆರೋಪಿ ನರೇಂದ್ರ ದುಬೆ ಅವರನ್ನು ಪೊಲೀಸರು ಬಂಧಿಸಿದ್ದರು. ಜೊತೆಗೆ, ರೈಲ್ವೇ ಹಳಿಗಳ ಬಳಿ ಮೃತದೇಹವೊಂದನ್ನು ತಿಲ್ಹಾರ್ ಪೊಲೀಸರು ವಶಕ್ಕೆ ಪಡೆದಿದ್ದರು.

ಆ ಮೃತದೇಹವು ಎತಾಬ್ ಅವರದ್ದೇ ಎಂದು ಎತಾಬ್ ಅವರ ತಂದೆ ಮತ್ತು ಸಂಬಂಧಿಗಳು ಗುರುತಿಸಿದ್ದರು. ಎತಾಬ್ ಅವರ ಸಂಬಂಧಿಗಳ ದೃಢೀಕರಣ ಮತ್ತು ಇಬ್ಬರು ಸಹ ಪ್ರಯಾಣಿಕರ ಹೇಳಿಕೆಗಳ ಆಧಾರದ ಮೇಲೆ ಪ್ರಕರಣ ದಾಖಲಿಸಿ, ವಿಚಾರಣೆ ನಡೆಸಿ ದುಬೆ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇದೀಗ, ಎತಾಬ್ ಜೀವಂತವಾಗಿ ಪತ್ತೆಯಾಗಿದ್ದು, ಆತನ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸಿದ್ದ ನರೇಂದ್ರ ದುಬೆಯನ್ನು ಬಿಡುಗಡೆ ಮಾಡಲಾಗಿದೆ.

ಆದಾಗ್ಯೂ, ಎತಾಬ್ ಜೀವಂತವಾಗಿ ಪತ್ತೆಯಾಗಿದ್ದಾರೆ. ಆದರೆ, ಅಂದು ರೈಲ್ವೇ ಹಳಿಗಳ ಬಳಿ ಪತ್ತೆಯಾದ ಮೃತದೇಹ ಯಾರದ್ದು ಎಂಬ ಪ್ರಶ್ನೆ ಇದೀಗ ಮುನ್ನೆಲೆಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...