ಮುರ್ಶಿದಾಬಾದ್ ಗಲಭೆ | ಸುಳ್ಳು ಹರಡುತ್ತಿರುವ ಗೋದಿ ಮೀಡಿಯಾಗಳು: ಮಮತಾ ಬ್ಯಾನರ್ಜಿ

Date:

ಮುರ್ಶಿದಾಬಾದ್‌ ಗಲಭೆಯು ಪೂರ್ವಯೋಜಿತ, ಈ ಬಗ್ಗೆ ಗೋದಿ ಮೀಡಿಯಾಗಳು ಸುಳ್ಳು ಮಾಹಿತಿಯನ್ನು ಹರಡುತ್ತಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಮಾಮ್‌ಗಳೊಂದಿಗಿನ ತನ್ನ ಸಭೆಯಲ್ಲಿ ಹೇಳಿದ್ದಾರೆ. ಜೊತೆಗೆ ಈ ಸಂದರ್ಭದಲ್ಲೇ ಈ ಗಲಭೆಯಲ್ಲಿ ಟಿಎಂಸಿ ಕೈವಾಡವಿದೆ ಎಂಬ ಬಿಜೆಪಿ ಆರೋಪಕ್ಕೂ ಪ್ರತಿಕ್ರಿಯಿಸಿದ್ದಾರೆ.

“ಮುರ್ಶಿದಾಬಾದ್ ಗಲಭೆಯು ಪೂರ್ವಯೋಜಿತವಾಗಿದೆ. ವಿಪಕ್ಷಗಳು ಹೇಳುವಂತೆ ಈ ವಕ್ಫ್ ಗಲಭೆಯಲ್ಲಿ ಟಿಎಂಸಿ ಕೈವಾಡವಿದ್ದಿದ್ದರೆ ನಮ್ಮ ನಾಯಕರ ಮನೆಗಳನ್ನು ಧ್ವಂಸ ಮಾಡುತ್ತಿರಲಿಲ್ಲ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಹಾಗೆಯೇ ವಕ್ಫ್ ವಿರುದ್ಧ ಟಿಎಂಸಿ ನಿಲುವು ಸ್ಪಷ್ಟವಾಗಿದೆ. ವಕ್ಫ್ ವಿರುದ್ಧ ನಮ್ಮ ಹೋರಾಟ ಮುಂದುವರೆಯುತ್ತದೆ. ನಾವು ಈ ವಿವಾದಾತ್ಮಕ ಕಾನೂನನ್ನು ರಾಜ್ಯದಲ್ಲಿ ಜಾರಿ ಮಾಡಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನು ಓದಿದ್ದೀರಾ? ವಕ್ಫ್ ಮಸೂದೆ | ಮುರ್ಶಿದಾಬಾದ್‌ ಕೋಮುಗಲಭೆ: ಊರು ಬಿಡುವುದೊಂದೇ ಜನರಿಗೆ ಕಂಡ ದಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಗಲಭೆಯಲ್ಲಿ ಬಾಂಗ್ಲಾದೇಶ ಭಾಗಿಯಾಗಿದೆ ಎಂದು ಗೃಹ ಸಚಿವಾಲಯ ಹೇಳಿರುವುದಾಗಿ ಉಲ್ಲೇಖಿಸಿದ ಸುದ್ದಿಯೊಂದನ್ನು ನಾನು ನೋಡಿದೆ. ಇದು ನಿಜವಾಗಿದ್ದರೆ, ಕೇಂದ್ರ ಸರ್ಕಾರ ಇದಕ್ಕೆ ಕಾರಣವಾಗಿದೆ. ಗಡಿಯನ್ನು ಬಿಎಸ್‌ಎಫ್ ನೋಡಿಕೊಳ್ಳುತ್ತದೆ, ರಾಜ್ಯ ಸರ್ಕಾರವಲ್ಲ. ಬಿಜೆಪಿಯ ಜನರು ಹೊರಗಿನಿಂದ ಬಂದು, ಗಲಾಟೆ ಮಾಡಿ ಓಡಿಹೋಗಲು ನೀವು ಯಾಕೆ ಅವಕಾಶ ಮಾಡಿಕೊಟ್ಟಿದ್ದೀರಿ” ಎಂದು ಪ್ರಶ್ನಿಸಿದರು.

ಇನ್ನು ಕೇಂದ್ರ ಸರ್ಕಾರ ಮತ್ತು ಗೋದಿ ಮೀಡಿಯಾಗಳನ್ನು ಗುರಿಯಾಗಿಸಿಕೊಂಡ ಮಮತಾ ಬ್ಯಾನರ್ಜಿ, “ಗೋದಿ ಮೀಡಿಯಾಗಳು ತಪ್ಪು ಮಾಹಿತಿಯನ್ನು ಹರಡುತ್ತಿದೆ. ಬಂಗಾಳವನ್ನು ಅನ್ಯಾಯವಾಗಿ ಗುರಿಯಾಗಿಸಿಕೊಂಡಿದೆ” ಎಂದು ಆರೋಪಿಸಿದರು.

“ಕೇಂದ್ರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಿದೆ. ಆದರೆ ಕೆಲವು ಗೋದಿ ಮೀಡಿಯಾಗಳು ಬಂಗಾಳದ ವಿರುದ್ಧ ಮತ್ತು ನನ್ನ ವಿರುದ್ಧ ಮಾತ್ರ ಮಾತನಾಡುತ್ತಿದೆ. ತಪ್ಪು ಮಾಹಿತಿ ಹರಡುವ ಬದಲು ನೇರವಾಗಿ ನನ್ನೊಂದಿಗೆ ಮಾತನಾಡಿ” ಎಂದು ಸವಾಲು ಹಾಕಿದರು.

“ಬಿಜೆಪಿ ಬೆಂಬಲಿತ ಕೆಲವು ಮಾಧ್ಯಮ ಸಂಸ್ಥೆಗಳು ರಾಜ್ಯವನ್ನು ಕೆಣಕಲು ನಕಲಿ ವಿಡಿಯೋಗಳನ್ನು ಪ್ರಸಾರ ಮಾಡಿವೆ. ನಾವು ಅವರನ್ನು ಬಂಧಿಸಿದ್ದೇವೆ. ಕೆಲವು ಕರ್ನಾಟಕದ್ದು, ಕೆಲವು ಉತ್ತರ ಪ್ರದೇಶ, ಬಿಹಾರ ಅಥವಾ ರಾಜಸ್ಥಾನದ ವಿಡಿಯೋಗಳಾಗಿವೆ. ಬಂಗಾಳದ ಹೆಸರು ಹಾಳು ಮಾಡಲು ಈ ರೀತಿ ದುಷ್ಕೃತ್ಯ ಎಸಗಲಾಗಿದೆ” ಎಂದು ಹೇಳಿದರು.

ಇನ್ನೊಂದೆಡೆ ಮುರ್ಶಿದಾಬಾದ್‌ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಸರ್ಕಾರವು ಹಿಂದೂ ಸಮುದಾಯದ ಮೇಲೆ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದೆ. ಈ ಸಂಬಂಧ ಹಲವು ನಕಲಿ ವಿಡಿಯೋಗಳನ್ನು ಹರಿಬಿಟ್ಟಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...