ಉತ್ತರ ಪ್ರದೇಶ | ಕಳ್ಳನೆಂದು ಮುಸ್ಲಿಂ ಯುವಕನನ್ನು ಮರಕ್ಕೆ ಕಟ್ಟಿ ʼಜೈ ಶ್ರೀರಾಮ್ʼ ಹೇಳುವಂತೆ ಹಲ್ಲೆ

Date:

ಮುಸ್ಲಿಂ ಯುವಕನೊಬ್ಬನನ್ನು ಮೊಬೈಲ್ ಕಳ್ಳನೆಂದು ಶಂಕಿಸಿ ಆತನನ್ನು ಮರಕ್ಕೆ ಕಟ್ಟಿ, ಹಲ್ಲೆ ನಡೆಸಿ ‘ಜೈ ಶ್ರೀರಾಮ್’ ಎಂದು ಹೇಳುವಂತೆ ಒತ್ತಾಯಿಸಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ.

ಜೂ.13 ರಂದು ಸಾಹಿಲ್‌ ಎಂಬುವರು ತನ್ನ ಗ್ರಾಮದ ಬಸ್‌ ನಿಲ್ದಾಣದಲ್ಲಿ ನಿಂತಿದ್ದರು. ಈ ವೇಳೆ ಮೂವರು ಯುವಕರು ಬಂದು ಆತನನ್ನು ಬಲವಂತವಾಗಿ ತಮ್ಮ ಬೈಕ್‌ನಲ್ಲಿ ಕೂರಿಸಿಕೊಂಡು ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಮೊಬೈಲ್‌ ಕಳವಿನ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ತಾನು ಮೊಬೈಲ್‌ ಕದ್ದಿಲ್ಲ ಎಂದು ಹೇಳಿದಾಗ ಸಾಹಿಲ್‌ನನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸುವುದರ ಜೊತೆ ತಲೆಯನ್ನು ಬೋಳಿಸಿದ್ದಾರೆ. ನಂತರ ಬಲವಂತವಾಗಿ “ಜೈ ಶ್ರೀರಾಮ್” ಹೇಳುವಂತೆ ಹಲ್ಲೆ ಮಾಡಿದ್ದಾರೆ.

ಸಾಹಿಲ್‌ ಅವರು ಘಟನಾ ಸ್ಥಳದಿಂದ ತಪ್ಪಿಸಿಕೊಂಡು ಪೊಲೀಸ್‌ ಠಾಣೆಗೆ ಬಂದಿದ್ದಾರೆ. ಆದರೆ ಪ್ರಕರಣದ ಬಗ್ಗೆ ಮಾಹಿತಿಯನ್ನು ತಿಳಿದ ಬಳಿಕ ಪೊಲೀಸರು ಆರೋಪಿಗಳನ್ನು ಬಂಧಿಸುವ ಬದಲು, ಮೊಬೈಲ್‌ ಕಳ್ಳನೆಂದು ಸಾಹಿಲ್‌ ಅವರನ್ನೇ ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಂಡವಾಳಶಾಹಿ ಸ್ನೇಹಿತರ ಲಾಭಕ್ಕೆ ಪಿಎಸ್‌ಯುಗಳಿಂದ 2 ಲಕ್ಷ ಉದ್ಯೋಗ ಕಡಿತ: ರಾಹುಲ್‌ ಗಾಂಧಿ ಆಕ್ರೋಶ

ಈ ಬಗ್ಗೆ ಜೂನ್ 17 ರಂದು, ಸಾಹಿಲ್‌ನ ಪೋಷಕರು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ) ಅವರನ್ನು ಸಂಪರ್ಕಿಸಿ ದೂರು ನೀಡಿದ್ದಾರೆ. ಆನಂತರ ತನಿಖೆ ನಡೆಸಿದ ಬಳಿಕ ಮೂವರು ಆರೋಪಿಗಳಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿರುವ ವಿಡಿಯೋವನ್ನು ಗಮನದಲ್ಲಿಟ್ಟುಕೊಂಡು, ಕಳ್ಳತನದ ಶಂಕೆಯಲ್ಲಿ ಅದೇ ಗ್ರಾಮದ ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿರುವುದು ನಮ್ಮ ಗಮನಕ್ಕೆ ಬಂದಿದೆ. ಸಂತ್ರಸ್ತನ ಕುಟುಂಬದವರು ನೀಡಿದ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಜರುಗಿಸಲಾಗುತ್ತಿದೆ ಎಂದು ಎಎಸ್‌ಪಿ ಎಸ್ ಎನ್ ತಿವಾರಿ ತಿಳಿಸಿದ್ದಾರೆ.

‌“ಈ ಮೊದಲು ಪೊಲೀಸರು ತಮ್ಮನ್ನು ಬೆದರಿಸಿದ್ದು ಮಾತ್ರವಲ್ಲದೆ ತಮ್ಮ ದೂರನ್ನು ಹಿಂಪಡೆಯುವಂತೆ ಒತ್ತಡ ಹೇರಿದ್ದರು. ಅವರು ಶ್ರೀಮಂತ ಜನರು. ನಾವು ಬಡವರು. ಆರೋಪಿಗಳು ಇನ್ನೂ ಬೆದರಿಕೆ ಹಾಕುತ್ತಲೇ ಇದ್ದಾರೆ” ಎಂದು ಎಂದು ಸಾಹಿಲ್‌ನ ತಾಯಿ ನೂರ್ ಬಾನೋ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...