ಕುನೊ ಉದ್ಯಾನದಲ್ಲಿ ನಮೀಬಿಯಾ ಚೀತಾ ಸಾವು: ಭಾರತದಲ್ಲಿ ಮೃತಪಟ್ಟ 10ನೇ ಆಫ್ರಿಕಾ ಚೀತಾ

Date:

ನಮೀಬಿಯಾದಿಂದ ಸೆಪ್ಟೆಂಬರ್ 2022ರಂದು ಕರೆತರಲಾಗಿದ್ದ ಚೀತಾವೊಂದು ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಮೃತಪಟ್ಟಿದೆ.

ಶೌರ್ಯ ಮೃತಪಟ್ಟ ಚೀತಾ, ಮಾರ್ಚ್‌ 2023ರಿಂದ ಇಲ್ಲಿಯವರೆಗೂ 7 ವಯಸ್ಕ ಹಾಗೂ ಮೂರು ಮರಿ ಚೀತಾಗಳು ಮೃತಪಟ್ಟಿವೆ.

“ಬೆಳಗ್ಗೆ 11ರ ವೇಳೆಗೆ ನಮ್ಮ ಪರಿಶೀಲನಾ ತಂಡವು ಶೌರ್ಯ ಚೀತಾವು ಆರೋಗ್ಯದಲ್ಲಿ ಏರುಪೇರಾಗಿ ನಿಧಾನಗತಿಯಲ್ಲಿ ನಡೆಯುತ್ತಿರುವುದನ್ನು ಗಮನಿಸಿತು. ನಂತರ ಪರಿಶೀಲನೆ ನಡೆಸಿದಾಗ ಅಸ್ವಸ್ಥ ಹಾಗೂ ನಿಶ್ಯಕ್ತಿಯಿಂದ ಬಳಲುತ್ತಿರುವುದನ್ನು ಕಂಡುಕೊಂಡಿತು. ಚಿಕಿತ್ಸೆ ನೀಡಿದ ನಂತರವೂ ಹಲವು ಸಮಸ್ಯೆಗಳು ಕಾಣಿಸಿಕೊಂಡವು. ಅಂತಿಮವಾಗಿ ಹೃದಯ ಹಾಗೂ ಶ್ವಾಸಕೋಶದ ಚಿಕಿತ್ಸೆಗೂ ಸ್ಪಂದಿಸಲಿಲ್ಲ. ಸಾವಿನ ಕಾರಣ ಮರಣೋತ್ತರ ಪರೀಕ್ಷೆಯ ನಂತರ ತಿಳಿಯಲಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅನಂತಕುಮಾರ್ ಎಂಬ ಬೆಂಕಿ ಬಾಲಕನೂ, ಜನಿವಾರದಾಟವೂ

ಸರ್ಕಾರದ ಚೀತಾ ಯೋಜನೆಯಡಿಯಲ್ಲಿ ಎರಡು ಗುಂಪುಗಳಲ್ಲಿ ನಮೀಬಿಯಾ ಹಾಗೂ ದಕ್ಷಿಣ ಆಫ್ರಿಕಾದಿಂದ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಒಟ್ಟು 20 ಪ್ರಾಣಿಗಳನ್ನು ಸ್ಥಳಾಂತರಿಸಲಾಯಿತು. ಮೊದಲ ಗುಂಪು ಸೆಪ್ಟೆಂಬರ್ 2022 ಹಾಗೂ ಎರಡನೇ ಗುಂಪು ಫೆಬ್ರವರಿ 2023 ರಂದು ಆಗಮಿಸಿದ್ದವು.

ಈ ಯೋಜನೆಯು ದೇಶದ ಅರಣ್ಯಗಳಲ್ಲಿ ಚೀತಾಗಳನ್ನು ಮತ್ತೆ ಪರಿಚಯಿಸುವ ಭಾರತದ ಮಹತ್ವಾಕಾಂಕ್ಷಿ ಯೋಜನೆಯಾಗಿತ್ತು. ಕಳೆದ ಏಳು ದಶಕಗಳಲ್ಲಿ ಭಾರತದಲ್ಲಿ ಚೀತಾ ಸಂತತಿ ಅವನತಿ ಹೊಂದಿವೆ.

ಆಗಸ್ಟ್ 2023 ರಲ್ಲಿ, ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಚಿರತೆ ‘ಧಾತ್ರಿ’ ಶವವಾಗಿ ಪತ್ತೆಯಾಗಿತ್ತು. ಕಾಡಿನಲ್ಲಿ ಇನ್ನೂ ಉಳಿದಿರುವ ಎರಡು ಹೆಣ್ಣು ಚಿರತೆಗಳಲ್ಲಿ ಧಾತ್ರಿ ಕೂಡ ಒಂದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...