‘ಮಾಲೀಕರಂತೆ ಉದ್ಯೋಗಿಗಳು ದುಡಿಯಬೇಕೆಂಬುದು ತಪ್ಪು’; ನಾರಾಯಣ ಮೂರ್ತಿ ಹೇಳಿಕೆಗೆ ಉದ್ಯಮಿ ನಮಿತಾ ಥಾಪರ್ ಖಂಡನೆ

Date:

ಕೆಲಸದ ಸಮಯದ ಬಗ್ಗೆ ಪದೇ-ಪದೇ ಹೇಳಿಕೆ ಕೊಡುತ್ತಿರುವ ಇನ್ಫೋಸಿಸ್ ಸಂಸ್ಥಾಪಕ ನಾರಾಯಣ ಮೂರ್ತಿ ಅವರು ವಿವಾದ, ಚರ್ಚೆಯ ವಸ್ತುವಾಗಿದ್ದಾರೆ. ಅವರ ಹೇಳಿಕೆಗಳ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೀಗ, ಕೆಲ ಉದ್ಯಮಿಗಳೂ ಕೂಡ ನಾರಾಯಣ ಮೂರ್ತಿ ಅವರ ಹೇಳಿಕೆಯನ್ನು ಖಂಡಿಸಿದ್ದಾರೆ.

ಈ ಹಿಂದೆ, ನಾರಾಯಣ ಮೂರ್ತಿ ಅವರು ಉದ್ಯೋಗಿಗಳು ದಿನಕ್ಕೆ 12 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಹೇಳಿದ್ದರು. ಇತ್ತೀಚೆಗೆ ಕೋಲ್ಕತ್ತಾದಲ್ಲಿ ಮಾತನಾಡಿದ್ದ ಅವರು, ಭಾರತವನ್ನು ನಂಬರ್ ಒನ್ ಮಾಡಲು ಮತ್ತು ತಾವೂ ಬಡತನದಿಂದ ಹೊರಬರಲು ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿದ್ದರು.

ಅವರ ಹೇಳಿಕೆ ಶ್ರಮ ಹೀರುವ ಸಂಸ್ಕೃತಿ ಪ್ರತಿಬಿಂಬವಾಗಿದೆ ಎಂದು ಹೋರಾಟಗಾರರು, ಉದ್ಯೋಗಗಳು, ಚಿಂತಕರು ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ, ಹಲವು ಉದ್ಯಮಗಳೂ ಕೂಡ ನಾರಾಯಣ ಮೂರ್ತಿ ಅವರ ಹೇಳಿಕೆಯ ವಿರುದ್ಧ ಮಾತನಾಡಿದ್ದಾರೆ. Shaadi.com ನ ಸಿಇಒ ಅನುಪಮ್ ಮಿತ್ತಲ್ ಮತ್ತು ಎಂಕ್ಯೂರ್ ಫಾರ್ಮಾಸ್ಯುಟಿಕಲ್ಸ್ ಸಿಇಒ ನಮಿತಾ ಥಾಪರ್ ಅವರು ಮೂರ್ತಿ ಅವರ ಹೇಳಿಕೆಯನ್ನು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಮಿತಾ ಥಾಪರ್ ಅವರು ‘ಹ್ಯೂಮನ್ಸ್ ಆಫ್ ಬಾಂಬೆ’ಗೆ ಸಂದರ್ಶನ ನೀಡಿದ್ದು, “ನಾವು ಮಾಲೀಕರು. ನಾವು ಟನ್‌ಗಟ್ಟಲೆ ಕೆಲಸ ಮಾಡಬಹುದು. ದಿನದ 24 ಗಂಟೆಯೂ ಕೆಲಸ ಮಾಡಬಹುದು. ಆದರೆ, ಉದ್ಯೋಗಿಗಳ ಕತೆ ಏನು? ಸಂಸ್ಥೆಯ ಸಂಸ್ಥಾಪಕರ ಕೆಲಸಕ್ಕೂ ಉದ್ಯೋಗಳ ಕೆಲಸಕ್ಕೂ ವ್ಯತ್ಯಾಸವಿರುತ್ತದೆ. ಇಬ್ಬರಿಂದಲೂ ಒಂದೇ ರೀತಿಯ ನಿರೀಕ್ಷೆ ಇಟ್ಟುಕೊಳ್ಳಲು ಸಾಧ್ಯವಿಲ್ಲ. ಉದ್ಯೋಗಿಗಳು ವಾರಕ್ಕೆ 70 ಗಂಟೆಗಳ ಕಾಲ ಕೆಲಸ ಮಾಡಬೇಕೆಂದು ನಿರೀಕ್ಷಿಸುವುದು ಅವರ ಮೇಲೆ ಹೆಚ್ಚು ಒತ್ತಡ ಹೇರಿದಂತೆ ಆಗುತ್ತದೆ” ಎಂದು ಹೇಳಿದ್ದಾರೆ.

“ಸಂಸ್ಥೆಗಳ ಸ್ಥಾಪಕರು ಮತ್ತು ಹೆಚ್ಚು ಪಾಕು ಹೊಂದಿರುವವರಿಗೆ ಲಾಭ ಗಳಿಕೆ ಆಧ್ಯತೆಯಾಗಿರುತ್ತದೆ. ತಮ್ಮ ಗಮನಾರ್ಹ ಆರ್ಥಿಕ ಹೂಡಿಕೆಗಳ ಕಾರಣದಿಂದಾಗಿ ಹೆಚ್ಚಿನ ಅವಧಿಯ ಕೆಲಸ ಮಾಡಲು ಬಯಸುತ್ತಾರೆ. ಆದರೆ, ಇದೇ ಮಾನದಂಡವನ್ನು ಸಾಮಾನ್ಯ ಉದ್ಯೋಗಿಗಳ ಮೇಲೆ ಹೇರುವುದು ತಪ್ಪು. ಉದ್ಯೋಗಿಗಳಿಗೆ ಸಮಂಜಸವಾದ ಕೆಲಸದ ಸಮಯದ ಮಿತಿ ಇರಬೇಕು” ಎಂದು ಥಾಪರ್ ವಾದಿಸಿದ್ದಾರೆ.

“ಅತಿ ಹೆಚ್ಚು ಸಮಯದ ಕೆಲಸವು ಉದ್ಯೋಗಿಗಳ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮದ ಮೇಲೆ ಪರಿಣಾಮ ಬೀರುತ್ತದೆ. ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಬೇಕಾಗುತ್ತದೆ. ಈ ಬಗ್ಗೆ ಎಚ್ಚರಿಕೆ ಇರಬೇಕು. ಹೆಚ್ಚು ಸಮತೋಲಿತ ಕೆಲಸದ ವೇಳಾಪಟ್ಟಿ ಇರಬೇಕು” ಎಂದು ಥಾಪರ್ ಒತ್ತಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...