ಸಾರ್ವಜನಿಕ ಭಾಷಣದ ಘನತೆ ಕಡಿಮೆ ಮಾಡಿದ ಮೊದಲ ಪ್ರಧಾನಿ ಮೋದಿ: ಮನ್‌ಮೋಹನ್‌ ಸಿಂಗ್

Date:

ದ್ವೇಷ ಹಾಗೂ ಅಸಂಸದೀಯ ಪದಗಳನ್ನು ಬಳಸಿ ನಿರ್ದಿಷ್ಟ ಸಮುದಾಯ ಹಾಗೂ ವಿಪಕ್ಷಗಳನ್ನು ಗುರಿ ಮಾಡಿರುವ ಹಾಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾಜಿ ಪ್ರಧಾನಿ ಡಾ. ಮನ್‌ಮೋಹನ್‌ ಸಿಂಗ್‌ ಅವರು ವಾಗ್ದಾಳಿ ನಡೆಸಿದ್ದಾರೆ.

ಜೂನ್‌ 1ರಂದು ನಡೆಯಲಿರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್‌ ಜನತೆಗೆ ಪತ್ರ ಬರೆದಿರುವ ಮನ್‌ಮೋಹನ್‌ ಸಿಂಗ್‌ ಅವರು, ಪ್ರಧಾನಿಯ ಅತ್ಯಂತ ಕೆಟ್ಟ ರೀತಿಯಿಂದ ಕೂಡಿದ ದ್ವೇಷ ಭಾಷಣಗಳು ಸಂಪೂರ್ಣವಾಗಿ ದೇಶವನ್ನು ವಿಭಜಿಸುತ್ತವೆ. ಸಾರ್ವಜನಿಕ ಭಾಷಣದ ಘನತೆ ಕಡಿಮೆ ಮಾಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ ಆಗಿದ್ದಾರೆ ಎಂದು ತಿಳಿಸಿದ್ದಾರೆ.

ಏಪ್ರಿಲ್‌ನಲ್ಲಿ ರಾಜಸ್ಥಾನದ ರ್ಯಾಲಿಯಲ್ಲಿ ಭಾಷಣ ಮಾಡಿದ್ದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಸಂಪತ್ತನ್ನು ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ವಿತರಿಸುತ್ತಾರೆ ಎಂದಿದ್ದರು. ಅದಲ್ಲದೆ ಮನ್‌ಮೋಹನ್‌ ಸಿಂಗ್‌ ಇದೇ ರೀತಿ ಮಾತನಾಡಿದ್ದರು ಎಂದು ದ್ವೇಷಪೂರಿತವಾಗಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆದಾಯವನ್ನು 2022ರಲ್ಲಿ ದ್ವಿಗುಣ ಮಾಡುವುದಾಗಿ ಹೇಳಿದ್ದರು. ಆದರೆ ಕಳೆದ 10 ವರ್ಷಗಳಲ್ಲಿ ರೈತರ ಆದಾಯ ಕುಗ್ಗಿದೆ. ರಾಷ್ಟ್ರೀಯ ಸರಾಸರಿಯಂತೆ ರೈತರ ಆದಾಯ ದಿನಕ್ಕೆ 27 ರೂ. ಇದೆ. ಪ್ರತಿ ರೈತರ ಸಾಲವು 27 ಸಾವಿರ ರೂ.ಇದೆ. ಇಂಧನ, ರಸಗೊಬ್ಬರ, ಕೃಷಿ ಸಂಬಂಧಿತ ಕನಿಷ್ಠ 35 ಸಲಕರಣಗಳಿಗೆ ಜಿಎಸ್‌ಟಿ ಹಾಗೂ ಕೃಷಿ ಆಮದು ರಫ್ತುವಿನಲ್ಲಿ ಜಾರಿಗೊಳಿಸಿರುವ ವಿಚಿತ್ರ ನಿರ್ಧಾರಗಳು ರೈತರ ವೆಚ್ಚವನ್ನು ದ್ವಿಗುಣಗೊಳಿಸಿದ್ದು, ರೈತ ಕುಟುಂಬಗಳ ಉಳಿತಾಯವನ್ನು ಹಾಳು ಮಾಡಿದೆ. ಇವುಗಳಿಂದ ನಾವು ಅವರನ್ನು ಸಮಾಜದ ಅಂಚಿನಲ್ಲಿ ತಳ್ಳಿದ್ದೇವೆ” ಎಂದು ಮನ್‌ಮೋಹನ್‌ ಸಿಂಗ್‌ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

“ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಊಹಿಸಲಾಗದ ಪ್ರಕ್ಷುಬ್ದತೆಗೆ ಸಾಕ್ಷಿಯಾಗಿದೆ. ನೋಟು ಅಮಾನ್ಯೀಕರಣದ ದುರಂತ, ಜಿಎಸ್‌ಟಿ ಜಾರಿಗೊಳಿಸಿರುವಿಕೆ ಹಾಗೂ ಕೋವಿಡ್‌ 19 ಸಾಂಕ್ರಾಮಿಕ ಸಂದರ್ಭದಲ್ಲಿ ಅಸಮರ್ಪಕ ಆಡಳಿತದಿಂದ ಉಂಟಾದ ಶೋಚನೀಯ ಪರಿಸ್ಥಿತಿಯು ದೇಶವನ್ನು ಹಾಳುಗೆಡುವಿದೆ” ಎಂದು ಬೇಸರ ವ್ಯಕ್ತಪಡಿಸಿದರು.

“ರೈತರು ದೆಹಲಿ ಗಡಿಗಳಲ್ಲಿ ಹಲವು ತಿಂಗಳು ಒಟ್ಟಾಗಿ ನಡೆಸಿದ ಪ್ರತಿಭಟನೆಗಳಲ್ಲಿ 750ಕ್ಕೂ ಹೆಚ್ಚು ರೈತರು ಮೃತಪಟ್ಟಿದ್ದು, ಅದರಲ್ಲಿ ಬಹುತೇಕರು ಪಂಜಾಬ್‌ನವರೆ ಆಗಿದ್ದಾರೆ. ಪ್ರಧಾನಿಯವರು ಲಾಠಿ, ರಬ್ಬರ್‌ ಬುಲೆಟ್‌ನಿಂದ ರೈತರ ಮೇಲೆ ದಾಳಿ ನಡೆಸುವುದರ ಜೊತೆಗೆ ಸಂಸತ್ತಿನಲ್ಲಿ ಅನ್ನದಾತರ ವಿರುದ್ಧ ತೀರ ಕೆಳಮಟ್ಟದ ಭಾಷೆ ಪ್ರಯೋಗಿಸಿ ಅವರಿಗೆ ನೋವುಂಟು ಮಾಡಿದರು” ಎಂದು ಮನ್‌ಮೋಹನ್‌ ಸಿಂಗ್‌ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಿರಂಕುಶ ಆಡಳಿತದ ಪುನರಾವರ್ತಿತ ದಾಳಿಗಳಿಂದ ನಮ್ಮ ಪ್ರಜಾಪ್ರಭುತ್ವ ಹಾಗೂ ಸಂವಿಧಾನವನ್ನು ರಕ್ಷಿಸಲು ಕೊನೆಯ ಅವಕಾಶ ಇದಾಗಿದ್ದು ಬಿಜೆಪಿ ವಿರುದ್ಧ ಮತ ಚಲಾಯಿಸಬೇಕೆಂದು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

91 ವರ್ಷದ ಡಾ. ಮನ್‌ ಮೋಹನ್‌ ಸಿಂಗ್‌ ಅವರು ನರೇಂದ್ರ ಮೋದಿ ಪ್ರಧಾನಿಯಾಗುವ 2014ರ ಹಿಂದಿನ 10 ವರ್ಷದ ಅವಧಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರದಲ್ಲಿ 10 ವರ್ಷಗಳ ಕಾಲ ಪ್ರಧಾನ ಮಂತ್ರಿಯಾಗಿದ್ದರು. ಇದಕ್ಕೂ ಮೊದಲು ಕೇಂದ್ರ ಹಣಕಾಸು ಸಚಿವ, ವಿಪಕ್ಷ ನಾಯಕ ಹಾಗೂ ಆರ್‌ಬಿಐ ಗವರ್ನರ್‌ ಆಗಿ ಕೂಡ ಸೇವೆ ಸಲ್ಲಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...