ನರೇಂದ್ರ ಮೋದಿಯವರು ಇಂದು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಜೊತೆಗೆ ಸಚಿವ ಸಂಪುಟವು ಕೂಡಾ ಪ್ರಮಾಣ ವಚನ ಸ್ವೀಕರಲಿಸಲಿದೆ. ಈ ಸಮಾರಂಭಕ್ಕೆ ನೆರೆಯ ರಾಷ್ಟ್ರಗಳ ಹಲವಾರು ನಾಯಕರನ್ನು ಭಾರತ ಆಹ್ವಾನಿಸಿದೆ.
ಇಂದು ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ಸಮಾರಂಭ ನಡೆಯಲಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ಹಲವಾರು ನಾಯಕರು ಆಹ್ವಾನವನ್ನು ಸ್ವೀಕರಿಸಿದ್ದಾರೆ ಮತ್ತು ಸಮಾರಂಭದಲ್ಲಿ ಭಾಗವಹಿಸಲು ಭಾನುವಾರ ನವದೆಹಲಿಗೆ ಆಗಮಿಸಲಿದ್ದಾರೆ.
ಇದನ್ನು ಓದಿದ್ದೀರಾ? ಮೋದಿ ಪ್ರಮಾಣ ವಚನ ಸಮಾರಂಭಕ್ಕೆ ಮಾಲ್ಡೀವ್ಸ್ ಅಧ್ಯಕ್ಷ ಮುಯಿಝುಗೆ ಆಹ್ವಾನ
ಹಾಜರಾತಿ ಖಚಿತಪಡಿಸಿದ ನಾಯಕರು
ಶ್ರೀಲಂಕಾದ ಅಧ್ಯಕ್ಷ ಎಚ್.ಇ. ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಎಚ್.ಇ. ಡಾ ಮೊಹಮ್ಮದ್ ಮುಯಿಝು, ಸೆಶೆಲ್ಸ್ನ ಉಪಾಧ್ಯಕ್ಷ ಎಚ್.ಇ. ಅಹ್ಮದ್ ಅಫೀಫ್, ಬಾಂಗ್ಲಾದೇಶದ ಪ್ರಧಾನಿ ಎಚ್.ಇ. ಶೇಖ್ ಹಸೀನಾ, ಮಾರಿಷಸ್ನ ಪ್ರಧಾನ ಮಂತ್ರಿ ಎಚ್.ಇ. ಪ್ರವಿಂದ್ ಕುಮಾರ್ ಜುಗ್ನಾಥ್, ನೇಪಾಳದ ಪ್ರಧಾನಿ ಎಚ್.ಇ. ಪುಷ್ಪ ಕಮಲ್ ದಹಾಲ್ ‘ಪ್ರಚಂಡ’, ಭೂತಾನ್ ಪ್ರಧಾನಿ ಎಚ್.ಇ. ತ್ಶೆರಿಂಗ್ ಟೋಬ್ಗೇ ಹಾಜರಾತಿ ಖಚಿತಪಡಿಸಿದ್ದಾರೆ.
#WATCH | Delhi: PM-designate Narendra Modi lays wreath at the National War Memorial, ahead of his swearing-in ceremony, to be held today at Rashtrapati Bhawan.
He will take oath as the Prime Minister for the third consecutive term, today at 7:15 PM. pic.twitter.com/rLEg2sL8FU
— ANI (@ANI) June 9, 2024
ಸಾರ್ಕ್ (ಸೌತ್ ಏಷ್ಯನ್ ಅಸೋಸಿಯೇಷನ್ ಫಾರ್ ರೀಜನಲ್ ಕೋಆಪರೇಷನ್) ನಾಯಕರು ಕಾರ್ಯಕ್ರಮಕ್ಕೆ ಹಾಜರಾಗಲು ತಯಾರಿ ನಡೆಸುತ್ತಿದ್ದು ರಾಷ್ಟ್ರ ರಾಜಧಾನಿ ಭಾನುವಾರ ಹೈ ಅಲರ್ಟ್ ಆಗಿರುತ್ತದೆ ಎಂದು ದೆಹಲಿ ಪೊಲೀಸರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಲೀಲಾ, ತಾಜ್, ಐಟಿಸಿ ಮೌರ್ಯ, ಕ್ಲಾರಿಡ್ಜ್ ಮತ್ತು ಒಬೆರಾಯ್ನಂತಹ ಪ್ರಮುಖ ಹೋಟೆಲ್ಗಳಲ್ಲಿ ಭಿಗಿ ಭದ್ರತೆಯಿದೆ. ಗಣ್ಯರ ಪ್ರಯಾಣಕ್ಕೆ ಸುರಕ್ಷಿತ ಮಾರ್ಗವನ್ನು ವ್ಯವಸ್ಥೆ ಮಾಡಲಾಗಿದೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವುದರ ಜೊತೆಗೆ ಇಂದೇ ಸಂಜೆ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿರುವ ಔತಣ ಕೂಟದಲ್ಲಿ ಈ ನಾಯಕರು ಭಾಗವಹಿಸಲಿದ್ದಾರೆ.
pic.twitter.com/XJXWtzqn0s
.@airnewsalerts
“#Bangladesh Prime Minister Sheikh Hasina leaves for New Delhi to attend the oath-taking ceremony of Narendra Modi as the prime minister of India for a third consecutive term.”— Earnest And Soulful (@EarnestnSoulful) June 9, 2024
ಎಎನ್ಐ ಪ್ರಕಾರ ಸಂಸತ್ತಿನ ನಿರ್ಮಾಣದಲ್ಲಿ ತೊಡಗಿರುವ ಸುಮಾರು 250 ಕಾರ್ಮಿಕರು ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಾರ್ಮಿಕರು ಮೊದಲು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ನಾಯಕ ಮನ್ಸುಖ್ ಮಾಂಡವಿಯಾ ಅವರ ನಿವಾಸಕ್ಕೆ ಬಂದು ಬಳಿಕ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ರಾಷ್ಟ್ರಪತಿ ಭವನಕ್ಕೆ ತೆರಳಲಿದ್ದಾರೆ.
ವಿಪಕ್ಷ ನಾಯಕರಿಗೆ ಆಹ್ವಾನದ ಈ ಬಗ್ಗೆ ಎಎನ್ಐಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್, “ಪ್ರಮಾಣ ವಚನ ಸಮಾರಂಭಕ್ಕೆ ವಿದೇಶಿ ನಾಯಕರನ್ನು ಮಾತ್ರ ಆಹ್ವಾನಿಸಲಾಗಿದೆ. ನಮ್ಮ ನಾಯಕರಿಗೆ ಇನ್ನೂ ಆಹ್ವಾನ ಬಂದಿಲ್ಲ. ನಮ್ಮ ಇಂಡಿಯಾ ಒಕ್ಕೂಟಕ್ಕೆ ಆಹ್ವಾನ ಬಂದಾಗ ನಾವು ಹಾಜರಾಗುವ ಬಗ್ಗೆ ಯೋಚಿಸುತ್ತೇವೆ” ಎಂದು ತಿಳಿಸಿದ್ದರು.
ಅದಾದ ಬಳಿಕ ನಿನ್ನೆ ಸಂಜೆ ವೇಳೆಗೆ ವಿಪಕ್ಷ ನಾಯಕರಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಯಾಗಿದೆ. ಆದರೆ ಇಂದು ಸಭೆ ಸೇರಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಾಜರಾಗುವ ಬಗ್ಗೆ ಇಂಡಿಯಾ ಮೈತ್ರಿಕೂಟದ ನಾಯಕರು ನಿರ್ಧರಿಸಲಿದ್ದಾರೆ.





