ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಕಾರ್ಯ ನಿರ್ವಹಿಸಬೇಕು: ಡಿ ರಾಜಾ

Date:

  • ಪತ್ರಿಕೆಯೊಂದರ ಸಂದರ್ಶನದಲ್ಲಿ ರಾಜಾ ಉತ್ತರ
  • ರಾಷ್ಟ್ರೀಯ ಪಕ್ಷವಾಗಲು ರಾಜ್ಯದಲ್ಲಿ ಶೇ 6 ಮತ ಅಗತ್ಯ

ಭಾರತೀಯ ಕಮ್ಯುನಿಸ್ಟ್‌ ಪಕ್ಷಕ್ಕೆ (ಸಿಪಿಐ) ಭಾರತದ ಚುನಾವಣಾ ಆಯೋಗ ‘ರಾಷ್ಟ್ರೀಯ ಪಕ್ಷ’ದ ಸ್ಥಾನಮಾನ ಕಸಿದುಕೊಂಡ ನಂತರ ಪಕ್ಷದ ನಾಯಕ ಡಿ ರಾಜಾ ಬೇಸರ ವ್ಯಕ್ತಪಡಿಸಿದ್ದಾರೆ.

ಏಪ್ರಿಲ್‌ 10ರಂದು ಸಿಪಿಐ ರಾಷ್ಟ್ರೀಯ ಪಕ್ಷ ಸ್ಥಾನಮಾನ ಕಳೆದುಕೊಂಡಿದೆ. 2019ರ ಸಾರ್ವತ್ರಿಕ ಚುನಾವಣೆಯ ನಂತರ ಸಿಪಿಐ ಸೇರಿದಂತೆ ಅನೇಕ ಕಮ್ಯುನಿಸ್ಟ್‌ ಪಕ್ಷಗಳು ಕಳಪೆ ಸಾಧನೆ ಮಾಡಿವೆ. “ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಕಾರ್ಯ ನಿರ್ವಹಿಸಲೇಬೇಕಿದೆ. ಇದರಿಂದ ಪ್ರಾದೇಶಿಕ ಪಕ್ಷಗಳ ಬೆಳವಣಿಗೆ ಸಾಧ್ಯವಾಗುತ್ತದೆ” ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ರಾಷ್ಟ್ರೀಯ ಪಕ್ಷದ ಸ್ಥಾನಮಾನವು ಪಕ್ಷವೊಂದಕ್ಕೆ ರಾಜ್ಯಗಳಾದ್ಯಂತ ಸಾಮಾನ್ಯ ಚಿಹ್ನೆಯನ್ನು ಬಳಸಲು ಅನುಮತಿ ದೊರೆಯುವುದು ಮಾತ್ರವಲ್ಲದೆ, ನವದೆಹಲಿಯ ಪಕ್ಷದ ಕಚೇರಿಯಲ್ಲಿ ಮತದಾನದ ಸಮಯದಲ್ಲಿ ಪಕ್ಷಕ್ಕೆ ಹಲವಾರು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಅದಕ್ಕಾಗಿ ಪಕ್ಷವನ್ನು ರಾಜ್ಯ ಪಕ್ಷವೆಂದು ನಾಲ್ಕು ರಾಜ್ಯಗಳಲ್ಲಿ ಪರಿಗಣಿಸಬೇಕು. ಆಯಾ ಶಾಸನ ಸಭೆಗಳಲ್ಲಿ ಕನಿಷ್ಠ ಇಬ್ಬರು ಸದಸ್ಯರನ್ನು ಹೊಂದಿರಬೇಕು. ಅಲ್ಲದೆ ರಾಜ್ಯದಲ್ಲಿ ಕನಿಷ್ಠ ಶೇ 6ರಷ್ಟು ಮತಗಳನ್ನು ಹೊಂದಿರಬೇಕು. ಆಗ ಪಕ್ಷಕ್ಕೆ ರಾಷ್ಟ್ರೀಯ ಪಕ್ಷದ ಸ್ಥಾನಮಾನ ದೊರೆಯುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐನ ಕ್ಷೀಣಿಸಿದ ಸ್ಥಿತಿಯು ಕಳೆದ ಹಲವಾರು ದಶಕಗಳಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪಕ್ಷ ಎನಿಸಿಕೊಂಡ ಪಕ್ಷಗಳ ಪ್ರವೃತ್ತಿಯನ್ನು ಪ್ರತಿಬಿಂಬಿಸುತ್ತದೆ. ಈ ಬಗ್ಗೆ ಸಿಪಿಐ ನಾಯಕ ಡ.ರಾಜಾ ಅವರು ಸಂದರ್ಶನದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಸಂಸತ್ತಿನಲ್ಲಿ ಎಡಪಕ್ಷಗಳ ಬಲ ಕುಸಿದಿರುವುದು ಸತ್ಯ. ಈಗ ಲೋಕಸಭೆಯಲ್ಲಿ ಸಿಪಿಎಂ ಮತ್ತು ಸಿಪಿಐಗೆ ಸೇರಿದ ಐವರು ಸಂಸದರಿದ್ದಾರೆ. ನಾವು ಇನ್ನೂ ಕೆಲವು ವಿಧಾನಸಭೆಗಳಲ್ಲಿ ಅಸ್ತಿತ್ವ ಹೊಂದಿದ್ದೇವೆ. ನಮ್ಮ ಸೈದ್ಧಾಂತಿಕ, ರಾಜಕೀಯ ಪ್ರಭಾವ ಮತ್ತು ನಮ್ಮ ಚುನಾವಣಾ ಕಾರ್ಯಕ್ಷಮತೆಯ ನಡುವೆ ಅಂತರವಿದೆ. ಇದಕ್ಕೆ ಹಲವಾರು ಕಾರಣಗಳಿವೆ. ದೇಶದಲ್ಲಿ ಅನೇಕ ಹೊಸ ಸಮಸ್ಯೆಗಳು ಹುಟ್ಟಿಕೊಂಡಿವೆ” ಎಂದು ಅವರು ತಿಳಿಸಿದರು.

“ಕಾಂಗ್ರೆಸ್ ಆಡಳಿತದಲ್ಲಿದ್ದಾಗ ಸಿಪಿಐ ಸಂಸತ್ತಿನಲ್ಲಿ ಪ್ರಮುಖ ಪ್ರತಿಪಕ್ಷಗಳಲ್ಲಿ ಒಂದಾಗಿತ್ತು. ದೇಶದ ಸಂಸದೀಯ ಪ್ರಜಾಪ್ರಭುತ್ವ ಮತ್ತು ಪ್ರಜಾಸತ್ತಾತ್ಮಕ ರಾಜಕೀಯವನ್ನು ರೂಪಿಸುವಲ್ಲಿ ಮತ್ತು ಬಲಪಡಿಸುವಲ್ಲಿ ಪಕ್ಷ ಮಹತ್ತರ ಪಾತ್ರವನ್ನು ವಹಿಸಿದೆ. ಇಂದಿಗೂ ಸಂಸತ್ತಿನ ಕಟ್ಟಡ ಕಮ್ಯುನಿಸ್ಟ್ ನಾಯಕರಾದ ಇಂದ್ರಜಿತ್ ಗುಪ್ತಾ, ಭೂಪೇಶ್ ಗುಪ್ತಾ, ಎಸ್ ಎ ಡಾಂಗೆ ಮತ್ತು ಎ ಕೆ ಗೋಪಾಲನ್ ಅವರ ಪ್ರತಿಮೆ ಹೊಂದಿದೆ” ಎಂದು ತಿಳಿಸಿದರು.

“ನಮ್ಮ ದೇಶದಲ್ಲಿ ಸಂಸದೀಯ ಪ್ರಜಾಪ್ರಭುತ್ವ ರೂಪಿಸುವಲ್ಲಿ ಕಮ್ಯುನಿಸ್ಟರ ಕೊಡುಗೆಯನ್ನು ಅವು ತೋರಿಸುತ್ತವೆ. ವರ್ಷಗಳು ಕಳೆದಂತೆ ನಮ್ಮ ಚುನಾವಣಾ ವ್ಯವಸ್ಥೆಯು ಅನೇಕ ದುಷ್ಪರಿಣಾಮಗಳಿಂದ ನರಳಲಾರಂಭಿಸಿತು. ಅನೇಕ ಹೊಸ ಅಂಶಗಳು ಕಾರ್ಯರೂಪಕ್ಕೆ ಬರುತ್ತಿವೆ. ಆದರೆ ಎಡರಂಗ ಮತ್ತು ಸಿಪಿಐ ಇತರರಂತೆ ಇರಲು ಸಾಧ್ಯವಿಲ್ಲ. ನಮ್ಮ ಪಕ್ಷ ಸಮಗ್ರ ಚುನಾವಣಾ ಸುಧಾರಣೆಗಳನ್ನು ಒತ್ತಾಯಿಸುತ್ತಿದೆ” ಎಂದು ವಿವರಿಸಿದರು.

“ಇಂದಿಗೂ ನಾವು ಬುದ್ಧಿಜೀವಿಗಳು, ಸಿದ್ಧಾಂತಿಗಳು ಅಥವಾ ರಾಜಕೀಯ ವಿಶ್ಲೇಷಕರನ್ನು ಪರಿಗಣಿಸಿದರೆ ಅವರು ಎಡಪಂಥೀಯರಾಗಿರುವುದು ಗಮನಕ್ಕೆ ಬರುತ್ತದೆ” ಎಂದು ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು.

“ನಾವು ಜನಸಾಮಾನ್ಯರನ್ನು ತಲುಪುತ್ತಿದ್ದೇವೆ. ಭಾರತೀಯ ಸಮಾಜದಲ್ಲಿ ನಾವು ಹಲವಾರು ಪ್ರಶ್ನೆಗಳನ್ನು ಪರಿಹರಿಸಬೇಕಾಗಿದೆ. ಒಂದು ವರ್ಗ ಅಸಮಾನತೆ ಮತ್ತು ಶೋಷಣೆಯಿಂದ ಬಳಲುತ್ತಿದ್ದರೆ, ಇನ್ನೊಂದು ಸಾಮಾಜಿಕ ಅಸಮಾನತೆ ಮತ್ತು ತಾರತಮ್ಯದಿಂದ ಒದ್ದಾಡುತ್ತಿದೆ. ಆದ್ದರಿಂದ ವರ್ಗ, ಜಾತಿ ಮತ್ತು ಪಿತೃಪ್ರಭುತ್ವವನ್ನು ಎದುರಿಸಬೇಕಾಗಿದೆ” ಎಂದು ಪಕ್ಷದ ಗುರಿಗಳ ಬಗ್ಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈತ್ರಿಕೂಟಕ್ಕೆ ಸಿದ್ಧತೆ; ಕಾಂಗ್ರೆಸ್ ಜೊತೆ ಸಭೆ ನಡೆಸಿದ ಶರದ್ ಪವಾರ್‌

“ಎಡಪಕ್ಷಗಳು ಜನರನ್ನು ಒಗ್ಗೂಡಿಸಲು ಪ್ರಯತ್ನಿಸುತ್ತಿವೆ. ಉದಾಹರಣೆಗೆ, ಎಡಪಕ್ಷಗಳು ಇತರ ಪ್ರಗತಿಪರ ಚಳವಳಿಗಳೊಂದಿಗೆ ಕೆಲಸ ಮಾಡುತ್ತಿವೆ. ಅಂಬೇಡ್ಕರ್ ಚಳುವಳಿ. ‘ಜೈ ಭೀಮ್, ಲಾಲ್ ಸಲಾಮ್‌’ ರೀತಿಯ ಚಳವಳಿಗಳು ದೇಶಾದ್ಯಂತ ಸಂಚಲನ ಮೂಡಿಸಿವೆ” ಎಂದು ರಾಜಾ ತಿಳಿಸಿದರು.

“ಎಡಪಕ್ಷಗಳು ಈಗ ಈ ರಾಜಕೀಯ ಮತ್ತು ಸೈದ್ಧಾಂತಿಕ ಪ್ರವಾಹಗಳೊಂದಿಗೆ ಈಜುತ್ತಿವೆ. ಅದೊಂದೇ ನಮ್ಮ ಮುಂದಿರುವ ದಾರಿ. ಇಂದು ಭಾರತೀಯ ಕ್ರಾಂತಿಯು ಮುಂದೆ ಸಾಗಬೇಕಾದರೆ ಕಮ್ಯುನಿಸ್ಟರು, ಅಂಬೇಡ್ಕರ್‌ವಾದಿಗಳು ಮತ್ತು ಪೆರಿಯಾರ್‌ವಾದಿಗಳ ನಡುವೆ ಏಕತೆ ಇರಬೇಕು” ಎಂದು ಡಿ ರಾಜಾ ಪ್ರತಿಪಾದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...