ಅಪ್ರಾಪ್ತ ಅಥ್ಲೀಟ್‌ ಮೇಲೆ ಲೈಂಗಿಕ ದೌರ್ಜನ್ಯ; ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

Date:

17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂಬ ಆರೋಪದ ಮೇಲೆ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ವಿರುದ್ಧ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ, ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ.

ಹರಿಯಾಣದ ಫರಿದಾಬಾದ್‌ನ ಖಾಸಗಿ ಹೋಟೆಲ್‌ನಲ್ಲಿ ಭಾರದ್ವಾಜ್ ಅವರು ಮಹಿಳಾ ಶೂಟರ್‌ನ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡುವ ನೆಪದಲ್ಲಿ ಆಕೆಯನ್ನು ತನ್ನ ಕೋಣೆಗೆ ಆಹ್ವಾನಿಸಿ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ನವದೆಹಲಿಯ ಡಾ. ಕರ್ಣಿ ಸಿಂಗ್ ಶೂಟಿಂಗ್ ರೇಂಜ್‌ನಲ್ಲಿ ನಡೆದ ರಾಷ್ಟ್ರಮಟ್ಟದ ಶೂಟಿಂಗ್ ಸ್ಪರ್ಧೆಗೆ ತೆರಳುವ ವೇಳೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಅಪ್ತಾಪ್ತ ಮಹಿಳಾ ಶೂಟರ್‌ನ ಪೋಷಕರು ಭಾರದ್ವಾಜ್ ವಿರುದ್ಧ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ, ಭಾರದ್ವಾಜ್ ವಿರುದ್ಧ ಫರಿದಾಬಾದ್‌ನ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಮತ್ತು ಬಿಎನ್‌ಎಸ್‌ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಅರಸು – ಸಿದ್ದರಾಮಯ್ಯ: ʼಬದಲಾದ ಕಾಲಘಟ್ಟದ ಪಾತ್ರʼಕ್ಕೆ ಸಿಗದ ವಿಶ್ಲೇಷಣಾ ನ್ಯಾಯ

ಪೋಷಕರ ದೂರಿನಲ್ಲಿ; “ದೌರ್ಜನ್ಯ ಘಟನೆಯನ್ನು ಬಹಿರಂಗಪಡಿಸಿದರೆ, ಆಕೆಯ ವೃತ್ತಿಜೀವನವನ್ನು ಹಾಳುಮಾಡುವುದಾಗಿ ಮತ್ತು ಆಕೆಯ ಕುಟುಂಬಕ್ಕೆ ಹಾನಿ ಮಾಡುವುದಾಗಿ ಕೋಚ್ ಬೆದರಿಕೆ ಹಾಕಿದ್ದಾರು. ಆಘಾತದಿಂದ ಮನೆಗೆ ಮರಳಿದ ಶೂಟರ್‌ ಘಟನೆಯನ್ನು ತಮ್ಮ ಬಳಿ ಹೇಳಿಕೊಂಡಿದ್ದಾರೆ” ಎಂದು ವಿವರಿಸಿವುದಾಗಿ ವರದಿಯಾಗಿದೆ.

“ಪ್ರಕರಣದ ಗಂಭೀರತೆಯನ್ನು ಗಮನಿಸಿ, ಅಪ್ರಾಪ್ತ ಬಾಲಕಿಯ ಆರೋಪಗಳನ್ನು ದೃಢೀಕರಿಸಲು ಘಟನೆ ನಡೆದ ದಿನದ ಎಲ್ಲ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ತಕ್ಷಣವೇ ಒದಗಿಸುವಂತೆ ನಾವು ಹೋಟೆಲ್ ಆಡಳಿತವನ್ನು ಕೇಳಿದ್ದೇವೆ” ಎಂದು ಫರಿದಾಬಾದ್ ಪೊಲೀಸ್‌ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಯಶ್ಪಾಲ್ ಯಾದವ್ ಹೇಳಿದ್ದಾರೆ.

“ಭಾರದ್ವಾಜ್ ಅವರು ಭಾರತೀಯ ರಾಷ್ಟ್ರೀಯ ರೈಫಲ್ ಸಂಘ (NRAI) ನೇಮಕ ಮಾಡಿದ 13 ರಾಷ್ಟ್ರೀಯ ಪಿಸ್ತೂಲ್ ತರಬೇತುದಾರರಲ್ಲಿ ಒಬ್ಬರಾಗಿದ್ದಾರೆ. ವಿಚಾರಣೆ ನಡೆಯುವವರೆಗೆ ಅವರನ್ನು ಎಲ್ಲ ಕರ್ತವ್ಯಗಳಿಂದ ಅಮಾನತುಗೊಳಿಸಲಾಗಿದೆ. ಅವರಿಗೆ ಯಾವುದೇ ಹೊಸ ಹುದ್ದೆ ನೀಡಲಾಗುವುದಿಲ್ಲ” ಎಂದು NRAI ಪ್ರಧಾನ ಕಾರ್ಯದರ್ಶಿ ಪವನ್ ಕುಮಾರ್ ಸಿಂಗ್ ಹೇಳಿರುವುದಾಗಿ ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...