ಆಪರೇಷನ್ ಸಿಂಧೂರ ವೇಳೆ ಪಾಕಿಸ್ತಾನ ಪರ ಬೇಹುಗಾರಿಕೆ; ನೌಕಾಪಡೆ ಸಿಬ್ಬಂದಿ ಬಂಧನ

Date:

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಭಾರತ-ಪಾಕಿಸ್ತಾನ ನಡುವೆ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಈ ವೇಳೆ ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆ ಕುರಿತು ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಆರೋಪದ ಮೇಲೆ ನೌಕಾಪಡೆಯ ಸಿಬ್ಬಂದಿಯೊಬ್ಬರನ್ನು ಬಂಧಿಸಲಾಗಿದೆ.

ನೌಕಾಪಡೆಯ ಬಂಧಿತ ಸಿಬ್ಬಂದಿಯನ್ನು ವಿಶಾಲ್ ಯಾದವ್ ಎಂದು ಹೆಸರಿಸಲಾಗಿದೆ. ಈತ ನೌಕಾಪಡೆಯ ಕೇಂದ್ರ ಕಚೇರಿಯಲ್ಲಿ ಗುಮಾಸ್ತ ಕೆಲಸ ಮಾಡುತ್ತಿದ್ದರು. ಈತನನ್ನು ರಾಜಸ್ಥಾನ ಪೊಲೀಸ್ ಪಡೆಯ ಗುಪ್ತಚರ ವಿಭಾಗ ಬಂಧಿಸಿದೆ.

ಹಲವು ವರ್ಷಗಳಿಂದ ಪಾಕಿಸ್ತಾನದ ಗುಪ್ತಚರ ಏಜೆನ್ಸಿ ‘ಐಎಸ್‌ಐ’ಗೆ ಮಾಹಿತಿ ರವಾನಿಸುತ್ತಿದ್ದರು. ಆಪರೇಷನ್ ಸಿಂಧೂರ ಬಗ್ಗೆಯೂ ಮಾಹಿತಿ ನೀಡಿದ್ದರು ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಯ ಮೊಬೈಲ್‌ಅನ್ನು ವಶಕ್ಕೆ ಪಡೆಯಲಾಗಿದ್ದು, ಅದರಲ್ಲಿದ್ದ ಹಲವಾರು ದತ್ತಾಂಶಗಳನ್ನು ವಶಪಡಿಸಿಕೊಳ್ಳಾಗಿದೆ. ಅವುಗಳನ್ನು ವಿಶ್ಲೇಷಿಸಿದಾಗ, ಆತ ನೌಕಾಪಡೆ ಮತ್ತು ಇತರ ರಕ್ಷಣಾ ಘಟಕಗಳಿಗೆ ಸಂಬಂಧಿಸಿದ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದರು. ಅದಕ್ಕೆ ಪ್ರತಿಯಾಗಿ ಹಣ ಪಡೆಯುತ್ತಿದ್ದರು ಎಂಬುದು ದೃಢಪಟ್ಟಿರುವುದಾಗಿ ಗುಪ್ತಚರ ವಿಭಾಗ ತಿಳಿಸಿದೆ.

ಈ ಲೇಖನ ಓದಿದ್ದೀರಾ?: ಇರಾನ್-ಇಸ್ರೇಲ್ ಸಂಘರ್ಷ | ಭಾರತದ ಬಾಸ್ಮತಿ ಬೆಳೆವ ರೈತರು-ರಫ್ತುದಾರರಿಗೆ ಸಂಕಷ್ಟ

“ಪಾಕಿಸ್ತಾನದ ಗುಪ್ತಚರ ಏಜೆನ್ಸಿಗಳು ನಡೆಸುವ ಬೇಹುಗಾರಿಕೆ ಚಟುವಟಿಕೆಗಳ ಮೇಲೆ ರಾಜಸ್ಥಾನ ಪೊಲೀಸ್‌ ಇಲಾಖೆಯ ಗುಪ್ತಚರ ವಿಭಾಗವು ನಿರಂತರ ನಿಗಾ ಇರಿಸಿದೆ. ಈ ವೇಳೆ, ಪಾಕ್ ಏಜೆನ್ಸಿ ಜೊತೆಗೆ ಯಾದವ್ ಸಂಪರ್ಕದಲ್ಲಿರುವುದು ಕಂಡುಬಂದಿತು. ಐಎಸ್‌ಐನ ಏಜೆಂಟ್‌ ಆಗಿದ್ದ ಪ್ರಿಯಾ ಶರ್ಮಾ ಎಂಬ ಮಹಿಳೆಯೊಂದಿಗೆ ಇಂಟರ್‌ನೆಟ್‌ನಲ್ಲಿ ಯಾದವ್‌ ಮಾಹಿತಿ ಹಂಚಿಕೊಳ್ಳುತ್ತಿದ್ದರು” ಎಂದು ಹಿರಿಯ ಅಧಿಕಾರಿ ವಿಷ್ಣುಕಾಂತ್ ಗುಪ್ತಾ ಹೇಳಿದ್ದಾರೆ.

“ಕ್ರಿಪ್ಟೊ ಕರೆನ್ಸಿಗಳ ಮೂಲಕ ಯಾದವ್ ಹಣ ಪಡೆಯುತ್ತಿದ್ದರು. ಈ ಜಾಲದಲ್ಲಿ ಇನ್ನೂ ಯಾರು ಶಾಮೀಲಾಗಿದ್ದಾರೆ ಎಂಬ ಕುರಿತು ತನಿಖೆ ನಡೆಯುತ್ತಿದೆ. ಸೋರಿಕೆಯಾಗಿರುವ ಮಾಹಿತಿಗಳ ಬಗ್ಗೆಯೂ ತನಿಖೆ ನಡೆಯಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...