ಅಜಿತ್‌ ಪವಾರ್‌ ಸೇರಿ 9 ಶಾಸಕರ ವಿರುದ್ಧ ಅನರ್ಹತೆ ಕೋರಿ ಸ್ಪೀಕರ್‌ಗೆ ಎನ್‌ಸಿಪಿ ಮನವಿ

Date:

  • ಉಪಮುಖ್ಯಮಂತ್ರಿಯಾಗಿ ಅಜಿತ್‌ ಪ್ರಮಾಣ
  • 1999ರಲ್ಲಿ ಎನ್‌ಸಿಪಿ ಸ್ಥಾಪಿಸಿದ ಶರದ್‌ ಪವಾರ್

ಅಜಿತ್‌ ಪವಾರ್‌ ತಮ್ಮ ಬೆಂಬಲಿತ ಎಂಟು ಶಾಸಕರ ಜೊತೆ ಬಂಡಾಯವೆದ್ದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್‌ ಶಿಂಧೆ ಸರ್ಕಾರ ಸೇರಿದ ನಂತರ ನ್ಯಾಷನಲಿಸ್ಟ್‌ ಕಾಂಗ್ರೆಸ್‌ ಪಕ್ಷ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.

ಒಂಬತ್ತು ಮಂದಿ ಶಾಸಕರ ವಿರುದ್ಧ ಅನರ್ಹತೆಯ ಅಸ್ತ್ರ ಪ್ರಯೋಗಿಸಲು ಎನ್‌ಸಿಪಿ ತೀರ್ಮಾನಿಸಿದೆ. ಬಂಡಾಯ ಶಾಸಕರನ್ನು ಅನರ್ಹಗೊಳಿಸುವಂತೆ ಎನ್‌ಸಿಪಿ ವಿಧಾನ ಸಭಾಧ್ಯಕ್ಷರಿಗೆ ಮನವಿ ಮಾಡಿದೆ ಎಂದು ಸೋಮವಾರ (ಜುಲೈ 3) ಮಾಧ್ಯಮಗಳು ವರದಿ ಮಾಡಿವೆ.

ಈ ಬಗ್ಗೆ ಎನ್‌ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, “ಅಜಿತ್‌ ಮತ್ತು ಇತರ ಶಾಸಕರ ಅನರ್ಹತೆ ಕುರಿತ ಅರ್ಜಿಯನ್ನು ಸಭಾಧ್ಯಕ್ಷ ರಾಹುಲ್ ನಾರ್ವೇಕರ್ ಅವರಿಗೆ ಸಲ್ಲಿಸಲಾಗಿದೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎನ್‌ಸಿಪಿಯ ನಿರ್ಧಾರ ಕೈಗೊಳ್ಳುವ ಅಧಿಕಾರ ಶರದ್ ಪವಾರ್ ಬಳಿಯೇ ಇದೆ ಎಂದು ತಿಳಿಸುವ ಇ-ಮೇಲ್ ಸಂದೇಶವನ್ನು ಭಾರತದ ಚುನಾವಣಾ ಆಯೋಗಕ್ಕೂ ಕಳುಹಿಸಲಾಗಿದೆ” ಎಂದು ಜಯಂತ್‌ ಪಾಟೀಲ್ ಹೇಳಿದರು.

ಈ ಸುದ್ದಿ ಓದಿದ್ದೀರಾ? ವೈಫಲ್ಯಗಳನ್ನು ಬೇರೆಡೆ ಸೆಳೆಯಲು ಜನರ ದಿಕ್ಕು ತಪ್ಪಿಸುತ್ತಿರುವ ಪ್ರಧಾನಿ: ಕಾಂಗ್ರೆಸ್ ಆಕ್ರೋಶ

ಮಹಾರಾಷ್ಟ್ರ ರಾಜಕೀಯದಲ್ಲಿ ಭಾನುವಾರ ಹಠಾತ್‌ ಬೆಳವಣಿಗೆಯಾಯಿತು. ಎನ್‌ಸಿಪಿಯ ಅಜಿತ್‌ ಪವಾರ್‌ ಅವರು ಇತರ ಎಂಟು ಶಾಸಕರೊಂದಿಗೆ ಏಕನಾಥ್‌ ಶಿಂಧೆ ನೇತೃತ್ವದ ಶಿವಸೇನಾ ಮತ್ತು ಬಿಜೆಪಿ ಸರ್ಕಾರವನ್ನು ಸೇರಿದರು.

ಬಳಿಕ ಅಜಿತ್‌ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಶರದ್‌ ಪವಾರ್‌ ಅವರು 1999ರಲ್ಲಿ ಎನ್‌ಸಿಪಿ ಸ್ಥಾಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...