ಇಂದು ಭಾರತ-ಪಾಕ್ ಪಂದ್ಯ: ‘ಕ್ರಿಕೆಟ್ ಅನ್ನು ಕ್ರಿಕೆಟ್ ಆಗಿಯೇ ನೋಡಬೇಕು’ ಎಂದ ಹರ್ಭಜನ್ ಸಿಂಗ್

Date:

ಟಿ20 ವಿಶ್ವಕಪ್‌ ಟೂರ್ನಿಯ ಭಾರತ ಮತ್ತು ಪಾಕಿಸ್ತಾನ ಕ್ರಿಕೆಟ್‌ ತಂಡಗಳ ನಡುವಿನ ಪಂದ್ಯವು ಶ್ರೀಲಂಕಾದ ಕೊಲಂಬೊದಲ್ಲಿರುವ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯದ ಕುರಿತು ಕ್ರಿಕೆಟ್‌ ಪ್ರೇಮಿಗಳು ಮಾತ್ರವಲ್ಲದೆ, ಎರಡೂ ರಾಷ್ಟ್ರಗಳ ಜನರಲ್ಲಿಯೂ ಕುತೂಹಕ ಹೆಚ್ಚಾಗಿದೆ. ಇದೇ ಸಮಯದಲ್ಲಿ, ಎರಡೂ ತಂಡಗಳ ನಾಯಕರು ಮತ್ತು ಆಟಗಾರರು ಪರಸ್ಪರ ಹಸ್ತಲಾಘವ ಮಾಡುವರೇ ಎಂಬ ಚರ್ಚೆಯೂ ಇದೆ. ಈ ಕುರಿತು ಮಾತನಾಡಿರುವ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್, “ಅದು ಆಟಗಾರರ ಆಯ್ಕೆ. ಕ್ರಿಕೆಟ್ ಅನ್ನು ಕ್ರಿಕೆಟ್ ಆಗಿಯೇ ನೋಡಬೇಕು” ಎಂದು ಹೇಳಿದ್ದಾರೆ.

ಅನಾರೋಗ್ಯದಿಂದ ಚೇತರಿಸಿಕೊಂಡಿರುವ ಸಿಂಗ್, ಭಾರತ-ಪಾಕ್ ಪಂದ್ಯದ ಕುರಿತು ಮಾತನಾಡಿದ್ದಾರೆ. “ಟಾಸ್ ಸಮಯದಲ್ಲಿ ಅಥವಾ ಪಂದ್ಯದ ನಂತರ ಹಸ್ತಲಾಘವ ಮಾಡುವ ಔಪಚಾರಿಕತೆಗಳ ಬಗ್ಗೆ ಜನರು ಅನಗತ್ಯವಾಗಿ ಚಿಂತಿಸಬಾರದು. ಅದು ಸಂಪೂರ್ಣವಾಗಿ ಆಟಗಾರರ ಇಚ್ಛೆ. ಪಂದ್ಯದ ನಂತರ ಹಸ್ತಲಾಘವ ಮಾಡಬೇಕು ಅಥವಾ ತಬ್ಬಿಕೊಳ್ಳಬೇಕು ಅಥವಾ ಅದನ್ನು ಮಾಡಬಾರದು ಎಂದು ಯಾವುದೇ ಪುಸ್ತಕದಲ್ಲಿ ಬರೆದಿಲ್ಲ. ಆಟಗಾರರು ಪರಸ್ಪರ ಅಪ್ಪಿಕೊಳ್ಳಬೇಕು ಎನ್ನಿಸಿದರೆ, ಅವರು ಮಾಡುತ್ತಾರೆ. ಹಾಗಾಗಿ ಪಂದ್ಯವನ್ನು ಆಡುವುದಷ್ಟೇ ಮುಖ್ಯ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಆಟಗಾರರ ಬಗ್ಗೆ ಹೇಳುವುದಾದರೆ, ಅವರು ಪಂದ್ಯದ ನಂತರ ಒಟ್ಟಿಗೆ ಕುಳಿತುಕೊಳ್ಳುತ್ತಾರೆ. ಕ್ರಿಕೆಟ್ ಅನ್ನು ಕ್ರಿಕೆಟ್ ಆಗಿಯೇ ನೋಡಬೇಕು” ಎಂದಿದ್ದಾರೆ.

ಇನ್ನು, ಪಂದ್ಯದ ಕುರಿತು ಮಾತನಾಡಿದ ಸಿಂಗ್, “ಖಂಡಿತವಾಗಿಯೂ, ಈ ಪಂದ್ಯ ನಡೆಯುತ್ತದೆಯೇ ಇಲ್ಲವೋ ಎಂಬ ಬಗ್ಗೆ ಸಾಕಷ್ಟು ಅಡೆತಡೆಗಳಿದ್ದವು. ಆದರೆ ಅದೆಲ್ಲವೂ ಈಗ ಮುಗಿದಿದೆ. ಈಗ ಗಮನವೆಲ್ಲ ಕ್ರಿಕೆಟ್‌ನ ಮೇಲೆ ಇರಬೇಕು, ಅದುವೇ ಮುಖ್ಯ ಭಾಗ. ಭಾರತ ಈ ಪಂದ್ಯದಲ್ಲಿ ಉತ್ತಮವಾಗಿ ಆಡುತ್ತದೆ ಎಂದು ನಾನು ಭಾವಿಸುತ್ತೇನೆ. ಪಾಕಿಸ್ತಾನ ಕೂಡ ಬಲಿಷ್ಠ ತಂಡವಾಗಿದೆ, ವಿಶೇಷವಾಗಿ ಅವರ ಸ್ಪಿನ್ನರ್‌ಗಳು ಈ ಪರಿಸ್ಥಿತಿಯಲ್ಲಿ ಉತ್ತಮವಾಗಿ ಬೌಲಿಂಗ್ ಮಾಡುತ್ತಿದ್ದಾರೆ. ಹಾಗಾಗಿ ಇದೊಂದು ಅದ್ಭುತ ಪಂದ್ಯವಾಗಲಿದೆ,” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪಾಕ್‌ ತಂಡದ ಸ್ಪಿನ್ನರ್ ಉಸ್ಮಾನ್ ತಾರಿಕ್ ಅವರ ಸವಾಲನ್ನು ಎದುರಿಸಲು ಭಾರತ ತಂಡಕ್ಕೆ ಅಭಿಷೇಕ್ ಶರ್ಮಾ ಅವರ ಉಪಸ್ಥಿತಿ ಸಹಕಾರಿಯಾಗಲಿದೆ. ಆಫ್-ಸ್ಪಿನ್ನರ್ ತಾರಿಕ್ ಅವರ ವಿಶಿಷ್ಟ ಬೌಲಿಂಗ್ ಭಾರತೀಯ ಬ್ಯಾಟರ್‌ಗಳಿಗೆ ಭಾರೀ ಸವಾಲಾಗಲಿದೆ” ಎಂದು ಹೇಳಿದ್ದಾರೆ.

“ನಾನು ತಾರಿಕ್ ಅವರು ILT20 ನಲ್ಲಿ ಬೌಲಿಂಗ್ ಮಾಡುವುದನ್ನು ನೋಡಿದ್ದೇನೆ. ಅಲ್ಲಿ ಅವರು ಶ್ರೇಷ್ಠ ಬೌಲರ್ ಆಗಿ ಹೊರಹೊಮ್ಮಿದ್ದರು. ಸೆಮಿಫೈನಲ್ ಮತ್ತು ಫೈನಲ್‌ನಲ್ಲಿ ಅವಕಾಶ ಸಿಕ್ಕಾಗಲೆಲ್ಲ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಗೆದ್ದಿದ್ದಾರೆ. ಅವರು ಇತರ ಸ್ಪಿನ್ನರ್‌ಗಳಿಗಿಂತ ಭಿನ್ನವಾಗಿದ್ದಾರೆ. ಹಾಗಾಗಿ ನಾನು ಹೇಳುವುದಿಷ್ಟೇ, ‘ನೀವು (ಭಾರತ ತಂಡ) ಹಿಂದೆಂದೂ ಎದುರಿಸದ ಬೌಲರ್ ವಿರುದ್ಧ ಆಡುವಾಗ ಸ್ವಲ್ಪ ಎಚ್ಚರಿಕೆಯಿಂದ ಇರಿ. ಅವರನ್ನು ಟೀಮ್‌ ಇಂಡಿಯಾ ಸಮರ್ಥವಾಗಿ ಎದುರಿಸಬಲ್ಲದು. ಅವರಿಗೆ ಯಾವುದೇ ಪ್ರಮುಖ ವಿಕೆಟ್ ನೀಡಬಾರದು” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...