ರಾಜಸ್ಥಾನ | ಉದ್ಯೋಗ ನೀಡುವ ನೆಪದಲ್ಲಿ 20 ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

Date:

ಉದ್ಯೋಗ ನೀಡುವ ನೆಪದಲ್ಲಿ 20 ಮಹಿಳೆಯದ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನುಷ ಘಟನೆ ರಾಜಸ್ಥಾನದ ಸಿರೋಹಿಯಲ್ಲಿ ವರದಿಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಪುರಸಭೆಯ ಅಧ್ಯಕ್ಷ ಹಾಗೂ ಮಾಜಿ ಪುರಸಭೆಯ ಆಯುಕ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಅತ್ಯಾಚಾರ ಪ್ರಕರಣದ ಆರೋಪಿಗಳಾದ ಪುರಸಭೆಯ ಅಧ್ಯಕ್ಷ ಮಹೇಂದ್ರ ಮೇವಾಡ ಹಾಗೂ ಮಾಜಿ ಪುರಸಭೆಯ ಆಯುಕ್ತ ಮಹೇಂದ್ರ ಚೌಧರಿ ಪೊಲೀಸರ ವಶದಲ್ಲಿದ್ದಾರೆ. ಇವರ ಮೇಲೆ ಅಂಗನವಾಡಿಯಲ್ಲಿ ಉದ್ಯೋಗ ಕೊಡಿಸುವ ನೆಪದಲ್ಲಿ 20 ಮಹಿಳೆಯರ ಮೇಲೆ ಅತ್ಯಾಚಾರವೆಸಗಿರುವ ಆರೋಪ ಹೊರಿಸಿಲಾಗಿದೆ.

ಪಾಲಿ ಜಿಲ್ಲೆಯ ಮಹಿಳೆಯೊಬ್ಬರು ಪೊಲೀಸರನ್ನು ಸಂಪರ್ಕಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ‘ಉದ್ಯೋಗ ನೀಡುವ ನೆಪದಲ್ಲಿ 20 ಇತರ ಮಹಿಳೆಯರ ಮೇಲೆ ಅತ್ಯಾಚಾರವೆಸಗಲಾಗಿದೆ’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ಲೈಂಗಿಕ ದೌರ್ಜನ್ಯದ ಅಮಾನುಷ ಕೃತ್ಯವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮಗಳಲ್ಲಿ ದೃಶ್ಯಗಳನ್ನು ಬಿಡುಗಡೆ ಮಾಡುವುದಾಗಿ ಸಂತ್ರಸ್ತೆಯರಿಗೆ ಬೆದರಿಕೊಯೊಡ್ಡಿದ್ದಾರೆ. ಪ್ರತಿಯೊಬ್ಬ ಸಂತ್ರಸ್ತ ಮಹಿಳೆಯಿಂದಲೂ ₹5 ಲಕ್ಷ ಹಣದ ಬೇಡಿಕೆಯಿಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ಚುನಾವಣಾ ಬಾಂಡ್ ಮತ್ತು ಕಾರ್ಪೊರೇಟ್ ಕಪ್ಪು ಹಣ

ದೂರು ನೀಡಿರುವ ಮಹಿಳೆ ಇತರ ಮಹಿಳೆಯರ ಜೊತೆ ಅಂಗನವಾಡಿಯಲ್ಲಿ ಕೆಲಸದ  ನಿಮಿತ್ತ ಕೆಲ ತಿಂಗಳ ಹಿಂದೆ ಸಿರೋಹಿಗೆ ಪ್ರಯಾಣಿಸಿದ್ದರು. ಆಗ ಆರೋಪಿಯನ್ನು ಭೇಟಿಯಾಗುವ ಸಂದರ್ಭ ಬಂದಿದ್ದು, ಆತ ಮಹಿಳೆಯರಿಗೆ ಊಟ ಮತ್ತು ವಸತಿ ವ್ಯವಸ್ಥೆ ಒದಗಿಸಿದ್ದಾರೆ.

ಊಟದಲ್ಲಿ ತಮಗೆ ಮತ್ತು ಬರುವ ಔಷಧಿ ಬೆರಸಿ ನಂತರ ಲೈಂಗಿಕವಾಗಿ ದೌರ್ಜನ್ಯ ನಡೆಸುತ್ತಿದ್ದರು ಎಂದು ಸಂತ್ರಸ್ತ ಮಹಿಳೆ ಆರೋಪಿಸಿದ್ದಾರೆ.

ಪ್ರಜ್ಞೆಗೆ ಮರಳಿದ ನಂತರ ಆರೋಪಿಗಳನ್ನು ಈ ಬಗ್ಗೆ ವಿಚಾರಿಸಿದರೆ, ತಮ್ಮ ಸ್ವಂತ ಉದ್ದೇಶಗಳನ್ನು ಈಡೇರಿಸಿಕೊಳ್ಳಲು ದೌರ್ಜನ್ಯ ಎಸಗಿರುವುದಾಗಿ ಹೇಳಿದರು. ತಮ್ಮ ಬೇಡಿಕೆಗಳನ್ನು ಈಡೇರಿಸುವ ಜೊತೆಗೆ ದೈಹಿಕ ಸಂಬಂಧ ಮುಂದುವರಿಸುವಂತೆ ಆರೋಪಿಗಳು ಒತ್ತಾಯಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅತ್ಯಾಚಾರಕ್ಕೆ ಒಳಗಾದ ಮಹಿಳೆಯರು ದೂರು ದಾಖಲಿಸಿದ ನಂತರವೂ ಪೊಲೀಸರು ವಿಚಾರಣೆ ನಡೆಸಿರಲಿಲ್ಲ. ಮಹಿಳೆಯರ ಮೇಲೆ ಸುಳ್ಳು ದೂರು ದಾಖಲಿಸಿರುವ ಆರೋಪ ಹೊರಿಸಲಾಗಿತ್ತು. ನಂತರ ರಾಜಸ್ಥಾನ ಹೈಕೋರ್ಟ್‌ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.

ಪೊಲೀಸ್ ಉಪ ವರಿಷ್ಠಾಧಿಕಾರಿ ಪಾರಸ್‌ ಚೌಧರಿ, “ಈ ಮಹಿಳೆ ಈ ಮೊದಲು ಸುಳ್ಳು ದೂರು ದಾಖಲಿಸಿದ್ದರು. ಆದಾಗ್ಯೂ ರಾಜಸ್ಥಾನ ಹೈಕೋರ್ಟ್ ಎಂಟು ಮಹಿಳೆಯರ ಅರ್ಜಿಯ ಆಧಾರದ ಮೇಲೆ ಪ್ರಕರಣ ದಾಖಲಿಸುವಂತೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮುಂದುವರೆಯುತ್ತಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...