ಉತ್ತರ ಪ್ರದೇಶ | ನಾಯಿ ಕಚ್ಚಿ ಸಾವನ್ನಪ್ಪಿದ ಎಮ್ಮೆಯ ಮೊಸರು ಸೇವಿಸಿದ ಸುಮಾರು 200 ಗ್ರಾಮಸ್ಥರಿಗೆ ರೇಬೀಸ್ ಆತಂಕ

Date:

ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ‘ರೈತಾ’(ಮೊಸರು ಆಧಾರಿತ ಖಾದ್ಯ) ಸೇವಿಸಿದ ಪರಿಣಾಮ ಉತ್ತರ ಪ್ರದೇಶದ ಬುಡೌನ್‌ ಜಿಲ್ಲೆಯ ಪಿಪ್ರೌಲಿ ಗ್ರಾಮದ 200 ಜನರಿಗೆ ರೇಬೀಸ್ ಹರಡಿರುವ ಆತಂಕ ಮೂಡಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರೇಬೀಸ್ ವಿರೋಧಿ ಲಸಿಕೆಯನ್ನು ಕೊಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡಿಸೆಂಬರ್ 23ರಂದು ಗ್ರಾಮದಲ್ಲಿ ವ್ಯಕ್ತಿಯೊಬ್ಬರ ಪುಣ್ಯತಿಥಿ ನಡೆದಿತ್ತು. ಅಲ್ಲಿ ಜನರು ರೈತಾ ಸೇರಿದಂತೆ ಇತರೆ ಖಾದ್ಯಗಳನ್ನು ಸೇವಿಸಿದ್ದರು. ರೈತಾ ತಯಾರಿಸಲು ಹಾಲು ಬಳಸಿದ ಎಮ್ಮೆಯನ್ನು ಕೆಲವು ದಿನಗಳ ಹಿಂದೆ ನಾಯಿ ಕಚ್ಚಿತ್ತು ಎಂದು ತಿಳಿದುಬಂದಿದೆ.

ಡಿಸೆಂಬರ್ 26ರಂದು ಎಮ್ಮೆ ಮೃತಪಟ್ಟಿತ್ತು. ಇದರಿಂದಾಗಿ ರೇಬೀಸ್ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ಗ್ರಾಮಸ್ಥರು ಆತಂಕಗೊಂಡಿದ್ದರು. ಈ ಕುರಿತು ಮಾಹಿತಿ ಪಡೆದ ತಕ್ಷಣ ಗ್ರಾಮಸ್ಥರಿಗೆ ಲಸಿಕೆ ಹಾಕಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | SIR – ಬಿಜೆಪಿಗಾಗಿ ಚುನಾವಣಾ ಆಯೋಗ ನಡೆಸುತ್ತಿರುವ ರಕ್ತರಹಿತ ನರಮೇಧ

‘ಗ್ರಾಮದಲ್ಲಿ ಎಮ್ಮೆಯೊಂದು ನಾಯಿ ಕಚ್ಚಿ ರೇಬೀಸ್ ಲಕ್ಷಣಗಳಿಂದ ಸಾವಿಗೀಡಾಗಿದೆ. ಗ್ರಾಮಸ್ಥರು ಸೋಂಕಿತ ಎಮ್ಮೆಯ ಹಾಲಿನಿಂದ ತಯಾರಿಸಿದ ರೈತಾ ಸೇವಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರಿಗೂ ರೇಬೀಸ್ ಲಸಿಕೆ ಹಾಕಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ’ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ರಾಮೇಶ್ವರ ಮಿಶ್ರಾ ತಿಳಿಸಿದ್ದಾರೆ.

‘ಹಾಲನ್ನು ಕುದಿಸಿದ ನಂತರ ರೇಬೀಸ್ ಅಪಾಯ ಇರುವುದಿಲ್ಲ. ಆದರೆ, ಯಾವುದೇ ಸಂಭಾವ್ಯ ಅಪಾಯವನ್ನು ತಡೆಗಟ್ಟುವ ಸಲುವಾಗಿ ಎಲ್ಲರಿಗೂ ರೇಬೀಸ್ ವಿರೋಧಿ ಲಸಿಕೆ ನೀಡುತ್ತಿದ್ದೇವೆ. ಜತೆಗೆ, ಯಾವುದೇ ವದಂತಿಗಳನ್ನು ಹರಡದಂತೆ ಗ್ರಾಮದಲ್ಲಿ ಮೇಲ್ವಿಚಾರಣೆ ನಡೆಸಲಾಗುತ್ತಿದೆ’ ಎಂದೂ ಮಿಶ್ರಾ ವಿವರಿಸಿದ್ದಾರೆ.

‘ನಾಯಿ ಕಚ್ಚಿದ್ದರಿಂದ ಎಮ್ಮೆ ಅನಾರೋಗ್ಯಕ್ಕೆ ಒಳಗಾಗಿತ್ತು. ಬಳಿಕ ಅದು ಮೃತಪಟ್ಟಿತ್ತು. ಪುಣ್ಯತಿಥಿ ಸಮಾರಂಭದಲ್ಲಿ ತಯಾರಿಸಿದ್ದ ರೈತಾವನ್ನು ಅದೇ ಎಮ್ಮೆಯ ಹಾಲಿನಿಂದ ತಯಾರಿಸಲಾಗಿತ್ತು. ಇದರಿಂದ ಸೋಂಕಿನ ಭೀತಿ ಕಾಡಲಾರಂಭಿಸಿತು. ಈಗ ರೇಬೀಸ್ ಚುಚ್ಚುಮದ್ದನ್ನು ಪಡೆದಿದ್ದೇವೆ’ ಎಂದು ಗ್ರಾಮಸ್ಥ ಧರ್ಮಪಾಲ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...