ನೇಪಾಳದಲ್ಲಿ ಟೊಮೆಟೊ ಬೆಲೆ 10 ರೂ.; ಭಾರತಕ್ಕೆ ರಫ್ತು ಮಾಡಲು ಸಿದ್ಧವಾಗಿದೆ ನೇಪಾಳ

Date:

ಒಂದೂವರೆ ತಿಂಗಳ ಹಿಂದೆ ಕಠ್ಮಂಡುವಿನಲ್ಲಿ ಟೊಮೆಟೊ ಕೆ.ಜಿಗೆ 10 ರೂ. ಬೆಲೆಯೂ ಇರಲಿಲ್ಲ. ಅಲ್ಲಿನ ರೈತರು ಸುಮಾರು 60,000 ರಿಂದ 70,000 ಕೆಜಿ ಟೊಮೆಟೊಗಳನ್ನು ರಸ್ತೆಗೆ ಸುರಿದಿದ್ದರು

ಭಾರತದಲ್ಲಿ ಟೊಮೆಟೊ ಬೆಲೆ ಗಗನಕ್ಕೇರಿದೆ. ಕೆ.ಜಿಗೆ 242 ರೂ.ವರೆಗೂ ಮಾರಾಟವಾಗುತ್ತಿದೆ. ದೇಶದಲ್ಲಿ ಬೇಡಿಕೆಗೆ ತಕ್ಕಷ್ಟು ಪೂರೈಕೆ ಇಲ್ಲದೆ, ದೇಶವು ಟೊಮೆಟೊ ಬಿಕ್ಕಟ್ಟು ಎದುರಿಸುತ್ತಿದೆ. ಹೀಗಾಗಿ, ಭಾರತಕ್ಕೆ ಟೊಮೆಟೊ ಪೂರೈಸಲು ನೇಪಾಳ ಸಿದ್ದವಾಗಿದೆ. ಆದರೆ, ಮಾರುಕಟ್ಟೆ ಮತ್ತು ಇತರ ಅಗತ್ಯ ಸೌಲಭ್ಯಗಳಿಗೆ ಸುಲಭ ಪ್ರವೇಶವನ್ನು ಬಯಸುತ್ತಿದೆ. ಭಾರತ ಕೂಡ ನೇಪಾಳದಿಂದ ಟೊಮೆಟೊ ಆಮದು ಮಾಡಿಕೊಳ್ಳಲು ಮುಂದಾಗಿದೆ. ಈ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್‌ನಲ್ಲಿ ತಿಳಿಸಿದ್ದಾರೆ.

“ಈಗಾಗಲೇ ನೇಪಾಳದಿಂದ ಭಾರತಕ್ಕೆ ಟೊಮೆಟೊ ರಫ್ತಾಗುತ್ತಿದೆ. ಅದನ್ನು ಧೀರ್ಘಾವಧಿಗೆ ವಿಸ್ತರಿಸಲು ಮತ್ತು ಬೃಹತ್ ಪ್ರಮಾಣದಲ್ಲಿ ರಫ್ತು ಮಾಡಲು ನೇಪಾಳ ಇಚ್ಛಿಸಿದೆ. ಅದಕ್ಕಾಗಿ, ಭಾರತದ ಮಾರುಕಟ್ಟೆಗೆ ಸುಲಭವಾಗಿ ಪ್ರವೇಶಿಸಲು ಮತ್ತು ಇತರ ಸೌಲಭ್ಯಗಳನ್ನು ಒದಗಿಸಬೇಕೆಂದು ನೇಪಾಳ ಬೇಡಿಕೆ ಇಟ್ಟಿದೆ” ಎಂದು ಕೃಷಿ ಸಚಿವಾಲಯದ ವಕ್ತಾರ ಶಬ್ನಮ್ ಶಿವಕೋಟಿ ಹೇಳಿದ್ದಾರೆ.

“ನೇಪಾಳದ ಕಠ್ಮಂಡು ಕಣಿವೆಯ ಮೂರು ಜಿಲ್ಲೆಗಳಾದ ಕಠ್ಮಂಡು, ಲಲಿತ್‌ಪುರ್ ಮತ್ತು ಭಕ್ತಾಪುರದಲ್ಲಿ ಹೇರಳವಾಗಿ ಟೊಮೆಟೊ ಬೆಳೆಯಲಾಗುತ್ತದೆ. ಆ ಟೊಮೆಟೊಗಳಲ್ಲಿ ಬಹುಪಾಲನ್ನು ಭಾರತಕ್ಕೆ ರಫ್ತು ಮಾಡಲು ನೇಪಾಳ ಸಿದ್ದವಾಗಿದೆ” ಎಂದು ಕಠ್ಮಂಡುವಿನ ತರಕಾರಿ ಮಾರುಕಟ್ಟೆ ಅಭಿವೃದ್ಧಿ ಮಂಡಳಿಯ ಉಪ ನಿರ್ದೇಶಕಿ ಬಿನಯಾ ಶ್ರೇಷ್ಠಾ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದೂವರೆ ತಿಂಗಳ ಹಿಂದೆ, ನೇಪಾಳದ ರೈತರು ತಾವು ಬೆಳೆದ ಟೊಮೆಟೊಗಳಿಗೆ ಉತ್ತಮ ಬೆಲೆ ಸಿಗದೆ ಕಂಗಾಲಾಗಿದ್ದರು. ಕಠ್ಮಂಡುವಿನಲ್ಲಿ ಟೊಮೆಟೊ ಕೆ.ಜಿಗೆ 10 ರೂ. ಬೆಲೆಯೂ ಇರಲಿಲ್ಲ. ಬೆಲೆ ಇಳಿಕೆಯಿಂದಾಗಿ ಸುಮಾರು 60,000 ರಿಂದ 70,000 ಕೆಜಿ ಟೊಮೆಟೊಗಳನ್ನು ಕಠ್ಮಂಡುವಿನ ತರಕಾರಿ ಮಾರುಕಟ್ಟೆ ಬಳಿಯ ರಸ್ತೆಗಳಲ್ಲಿ ಸುರಿದಿದ್ದರು ಎಂದು ಹೇಳಲಾಗಿದೆ.

ಆ ನಂತರದಲ್ಲಿ, ನೇಪಾಳದ ಕೆಲವು ವ್ಯಾಪಾರಿಗಳು ಅಕ್ರಮ ಮಾರ್ಗಗಳ ಮೂಲಕ ಭಾರತಕ್ಕೆ ಟೊಮೆಟೊ ರಫ್ತು ಮಾಡಲು ಆರಂಭಿಸಿದ್ದರು. ಆ ಬಳಿಕ, ಕಠ್ಮಂಡುವಿನಲ್ಲಿ ಟೊಮೆಟೊ ಬೆಲೆ ನಾಲ್ಕು ಪಟ್ಟು ಹೆಚ್ಚಾಯಿತು ಎಂದು ಅಲ್ಲಿನ ಮಾರುಕಟ್ಟೆ ವಿಶ್ಲೇಷಕರು ಹೇಳಿದ್ದಾರೆ.

“ನಾವು ಬೆಳೆದ ಟೊಮೆಟೊಗಳನ್ನು ಅನಧಿಕೃತವಾಗಿ ಭಾರತಕ್ಕೆ ರಫ್ತು ಮಾಡಲು ಆರಂಭಿಸಿದ ಬಳಿಕ ಕಠ್ಮಂಡುವಿನಲ್ಲಿ ಕೆ.ಜಿಗೆ 150 ರೂ. ಸಿಗುತ್ತಿದೆ. ಕಳೆದ ತಿಂಗಳು ಸುಮಾರು 70,000 ಕೆ.ಜಿ ಟೊಮೆಟೊವನ್ನು ಭಾರತಕ್ಕೆ ಅಕ್ರಮವಾಗಿ ರಫ್ತು ಮಾಡಲಾಗಿದೆ” ಎಂದು ನೇಪಾಳದ ಲಲಿತ್‌ಪುರ್ ಜಿಲ್ಲೆಯಲ್ಲಿ ಟೊಮೆಟೊ ಬೆಳೆಯುವ ರೈತ ಭದ್ರಿ ಎಂಬವರು ತಿಳಿಸಿದ್ದಾಗಿ ವರದಿಯಾಗಿದೆ.

“ಜುಲೈನಲ್ಲಿ ಭಾರತಕ್ಕೆ ಭೇಟಿ ನೀಡಿದ್ದ ನೇಪಾಳದ ಕೃಷಿ ಸಚಿವ ಬೆದುರಾಮ್ ಭೂಶಾಲ್ ಅವರು ಭಾರತದ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರೊಂದಿಗೆ ಟೊಮೆಟೊ ಮತ್ತು ಇತರ ಕೃಷಿ ಉತ್ಪನ್ನಗಳ ಮಾರುಕಟ್ಟೆ ವ್ಯವಹಾರದ ಬಗ್ಗೆ ಚರ್ಚೆ ನಡೆಸಿದ್ದಾರೆ. ಟೊಮೆಟೊ, ಬಟಾಣಿ ಮತ್ತು ಹಸಿರು ಮೆಣಸುಗಳನ್ನು ರಫ್ತು ಮಾಡಲು ಅಗತ್ಯ ಮಾರುಕಟ್ಟೆ ಸೌಲಭ್ಯ ಒದಗಿಸುವಂತೆ ಭಾರತವವನ್ನು ಕೇಳಿದ್ದಾರೆ” ಎಂದು ಕೃಷಿ ಸಚಿವಾಲಯದ ವಕ್ತಾರ ಶಿವಕೋಟಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...